AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷದಿಂದ ನಾವು ಓದುವುದು NEPನಾ ಅಥವಾ SEPನಾ? ಡಿಗ್ರಿ ವಿದ್ಯಾರ್ಥಿಗಳ ಗೊಂದಲಕ್ಕೆ ಇಲ್ಲಿದೆ ಪರಿಹಾರ

ಪಿಯುಸಿ ಪಾಸಾಗಿ ಪದವಿ ವ್ಯಾಸಂಗಕ್ಕೆ ದಾಖಲಾತಿ ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ನಾವು ಓದಬೇಕಾಗಿರುವುದು NEPನಾ ಅಥವಾ SEPನಾ ಅಂತ ಗೊಂದಲ ಮೂಡಿದೆ. ಅಲ್ಲದೆ, ಪದವಿಯನ್ನು 3 ವರ್ಷ ಓದಬೇಕಾ ಅಥವಾ 4 ವರ್ಷ ಓದಬೇಕಾ ಅಂತ ಗೊಂದಲ ಇದ್ದರೇ ಈ ಸುದ್ದಿಯನ್ನು ತಪ್ಪದೇ ಓದಿ..

ಈ ವರ್ಷದಿಂದ ನಾವು ಓದುವುದು NEPನಾ ಅಥವಾ SEPನಾ? ಡಿಗ್ರಿ ವಿದ್ಯಾರ್ಥಿಗಳ ಗೊಂದಲಕ್ಕೆ ಇಲ್ಲಿದೆ ಪರಿಹಾರ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Jun 08, 2024 | 3:26 PM

Share

ಬೆಂಗಳೂರು, ಜೂನ್​ 08: ಪಿಯುಸಿ ಫಲಿತಾಂಶ (PUC Result) ಪ್ರಕಟವಾಗಿದೆ. ವಿದ್ಯಾರ್ಥಿಗಳು ಪದವಿ ವ್ಯಾಸಂಗಕ್ಕೆ ದಾಖಲಾತಿ ಪಡೆಯುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಲ್ಲಿ ಅದೊಂದು ವಿಚಾರಕ್ಕೆ ತಲೆ ಕೆಡೆಸಿಕೊಂಡಿದ್ದಾರೆ. ನಾವು ಓದಬೇಕಾಗಿರುವುದು ರಾಷ್ಟ್ರೀಯ ಶಿಕ್ಷಣ ನೀತಿ (NEP)ನಾ ಅಥವಾ ರಾಜ್ಯ ಶಿಕ್ಷಣ ನೀತಿ (SEP)ನಾ? ನಮ್ಮ ಪದವಿ ವ್ಯಾಸಂಗ 3 ವರ್ಷನಾ ಅಥವಾ 4 ವರ್ಷನಾ? ಅಂತ ವಿದ್ಯಾರ್ಥಿಗಳಲ್ಲಿ ಪ್ರಶ್ನೆಗಳು ಉದ್ಭವಿಸುತ್ತಿವೆ. ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020 (NEP) ಪ್ರಧಾನಿ ನರೇಂದ್ರ ಮೋದಿಯವರ ಮಹತ್ವದ ನೀತಿಗಳಲ್ಲಿ ಒಂದಾಗಿದೆ. ಇದು ಜಾರಿಯಾದಾಗಿನಿಂದ ವಾದ-ವಿವಾದಗಳು ನಡೆಯುತ್ತಲೇ ಇವೆ. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಎನ್‌ಇಪಿ ರದ್ದು ಮಾಡಿ ಎಸ್​ಇಪಿ ರಚನೆಗೆ ಸುಖದೇವ್ ಥೋರಟ್ ನೇತೃತ್ವದಲ್ಲಿ 15 ಜನರ ತಜ್ಞರ ಸಮಿತಿಯನ್ನು ರಚನೆ ಮಾಡಿದೆ. ಎಸ್​ಇಪಿಗೆ ಬೇಕಾದ ಎಲ್ಲ ತಯಾರಿಗಳು ನಡೆಯುತ್ತಿವೆ. ವಿಶ್ವವಿದ್ಯಾಲಯಗಳಲ್ಲಿ ನೂತನ ಪಠ್ಯಕ್ರಮ ಚೌಕಟ್ಟಿಗೆ ಪೂರಕವಾದ ಪರಿಷ್ಕರಣೆ ಶುರುವಾಗಿದೆ.

NEPಗೂ ಮತ್ತು SEPಗೂ ಅಜಗಜಾಂತರ ವ್ಯತ್ಯಾಸವಿದೆ. ಈ ಹಿಂದೆ ಇದ್ದ ಎಸ್​ಇಪಿ (ರಾಜ್ಯ ಶಿಕ್ಷಣ ನೀತಿ) ಪ್ರಕಾರ, ಮೂರು ವರ್ಷಗಳು ಪದವಿ ಹಾಗೂ ಎರಡು ವರ್ಷ ಸ್ನಾತಕೋತ್ತರ ಪದವಿ ಓದಬೇಕಿತ್ತು. ಆದರೆ ಎನ್​ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿಯಾದ ಮೇಲೆ ನಾಲ್ಕು ವರ್ಷ ಪದವಿ ಹಾಗೂ ಒಂದು ವರ್ಷ ಸ್ನಾತಕೋತ್ತರ ಪದವಿ ಓದಬೇಕು.

ಎನ್​ಇಪಿ ಪ್ರಕಾರ ಮೊದಲ ವರ್ಷಕ್ಕೆ ಗ್ರ್ಯಾಡ್ಜುವೇಟ್ ಸರ್ಟಿಫಿಕೆಟ್, ಎರಡನೇ ವರ್ಷಕ್ಕೆ ಗ್ರ್ಯಾಡ್ಜುವೇಟ್ ಡಿಪ್ಲಮೊ ಹಾಗೂ ಮೂರನೇ ವರ್ಷಕ್ಕೆ ಗ್ರ್ಯಾಡ್ಜುವೇಟ್ ಡಿಗ್ರಿ ಹೀಗೆ ಪ್ರತಿ ವರ್ಷಕ್ಕೂ ಪ್ರತ್ಯೇಕ ಸರ್ಟಿಫಿಕೇಟ್ ಸಿಗುತ್ತದೆ. ನೀವು ಯಾವುದೇ ವರ್ಷದಲ್ಲಿ ಶಿಕ್ಷಣ ನಿಲ್ಲಿಸಿದರೂ ಆ ವರ್ಷದ ಸರ್ಟಿಫೀಕೇಟ್ ಸಿಗುತ್ತದೆ.

ಇದನ್ನೂ ಓದಿ: ಎನ್​ಇಪಿಯಿಂದ 2047ರ ವೇಳೆಗೆ ಭಾರತ ಅತ್ಯಂತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ: AICTE ಅಧ್ಯಕ್ಷ

ಆದರೆ ಇದೀಗ ರಾಜ್ಯ ಸರ್ಕಾರ ಎಸ್​ಇಪಿ ಜಾರಿಗೆ ತರುತ್ತಿದೆ. ಈಗಾಗಲೆ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಎಸ್​ಇಪಿ ತಕ್ಕಹಾಗೆ ಪರಿಷ್ಕರಿತ ಪಠ್ಯ ಪುಸ್ತಕ ತಯಾರಾಗುತ್ತಿವೆ. ಇದೇ ವರ್ಷದಿಂದ ಎಸ್​ಇಪಿ ಜಾರಿಗೆ ಬರಲಿದೆ. ಪದವಿ ವ್ಯಾಸಂಗಕ್ಕೆ ಈ ವರ್ಷ ದಾಖಲಾತಿ ಪಡೆಯುವವರು ಎಸ್​ಇಪಿ ಓದಲಿದ್ದಾರೆ.

ಈ ವರ್ಷದಿಂದಲೇ ಎಸ್​ಇಪಿ ಜಾರಿಯಾಗುವ ಹಿನ್ನೆಲೆಯಲ್ಲಿ ಹಲವು ಮಹತ್ವದ ಸಭೆಗಳನ್ನು ನಡೆಸಲಾಗಿದೆ. ಜ್ಞಾನಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಸ್​ಇಪಿ ಜಾರಿ ಹಾಗೂ ಪಠ್ಯಕ್ರಮ ಪರಿಷ್ಕರಣ ಮಹತ್ವದ ಪ್ರಾಂತೀಯ ಮಟ್ಟದ ಕಾರ್ಯಗಾರ ನಡೆಸಲಾಯಿತು. ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯದ ಕುಲಪತಿಗಳು, ಶಿಕ್ಷಣ ತಜ್ಞರು ಭಾಷ ತಜ್ಞರು ಹಾಗು ರಾಜ್ಯ ಪಠ್ಯಕ್ರಮ ರಚಾನ ಸಮಿತಿ ಸದಸ್ಯರು ಭಾಗಿಯಾಗಿದ್ದರು.

ಒಟ್ಟಿನಲ್ಲಿ ಎನ್‌‌ಇಪಿ ಈ ವರ್ಷದಿಂದಲೇ ರಾಜ್ಯದಲ್ಲಿ ಜಾರಿಯಾಗುವ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮ ಚೌಕಟ್ಟಿಗೆ ಪೂರಕವಾದ ಪಠ್ಯಕ್ರಮ ಸಿದ್ಧವಾಗುತ್ತಿದೆ. ಅದೆನೇ ಇರಲಿ ಈ ಎಸ್ಇಪಿಯಿಂದ ಆದರೂ ರಾಜ್ಯದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ