ಈ ವರ್ಷದಿಂದ ನಾವು ಓದುವುದು NEPನಾ ಅಥವಾ SEPನಾ? ಡಿಗ್ರಿ ವಿದ್ಯಾರ್ಥಿಗಳ ಗೊಂದಲಕ್ಕೆ ಇಲ್ಲಿದೆ ಪರಿಹಾರ

ಪಿಯುಸಿ ಪಾಸಾಗಿ ಪದವಿ ವ್ಯಾಸಂಗಕ್ಕೆ ದಾಖಲಾತಿ ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ನಾವು ಓದಬೇಕಾಗಿರುವುದು NEPನಾ ಅಥವಾ SEPನಾ ಅಂತ ಗೊಂದಲ ಮೂಡಿದೆ. ಅಲ್ಲದೆ, ಪದವಿಯನ್ನು 3 ವರ್ಷ ಓದಬೇಕಾ ಅಥವಾ 4 ವರ್ಷ ಓದಬೇಕಾ ಅಂತ ಗೊಂದಲ ಇದ್ದರೇ ಈ ಸುದ್ದಿಯನ್ನು ತಪ್ಪದೇ ಓದಿ..

ಈ ವರ್ಷದಿಂದ ನಾವು ಓದುವುದು NEPನಾ ಅಥವಾ SEPನಾ? ಡಿಗ್ರಿ ವಿದ್ಯಾರ್ಥಿಗಳ ಗೊಂದಲಕ್ಕೆ ಇಲ್ಲಿದೆ ಪರಿಹಾರ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Jun 08, 2024 | 3:26 PM

ಬೆಂಗಳೂರು, ಜೂನ್​ 08: ಪಿಯುಸಿ ಫಲಿತಾಂಶ (PUC Result) ಪ್ರಕಟವಾಗಿದೆ. ವಿದ್ಯಾರ್ಥಿಗಳು ಪದವಿ ವ್ಯಾಸಂಗಕ್ಕೆ ದಾಖಲಾತಿ ಪಡೆಯುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಲ್ಲಿ ಅದೊಂದು ವಿಚಾರಕ್ಕೆ ತಲೆ ಕೆಡೆಸಿಕೊಂಡಿದ್ದಾರೆ. ನಾವು ಓದಬೇಕಾಗಿರುವುದು ರಾಷ್ಟ್ರೀಯ ಶಿಕ್ಷಣ ನೀತಿ (NEP)ನಾ ಅಥವಾ ರಾಜ್ಯ ಶಿಕ್ಷಣ ನೀತಿ (SEP)ನಾ? ನಮ್ಮ ಪದವಿ ವ್ಯಾಸಂಗ 3 ವರ್ಷನಾ ಅಥವಾ 4 ವರ್ಷನಾ? ಅಂತ ವಿದ್ಯಾರ್ಥಿಗಳಲ್ಲಿ ಪ್ರಶ್ನೆಗಳು ಉದ್ಭವಿಸುತ್ತಿವೆ. ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020 (NEP) ಪ್ರಧಾನಿ ನರೇಂದ್ರ ಮೋದಿಯವರ ಮಹತ್ವದ ನೀತಿಗಳಲ್ಲಿ ಒಂದಾಗಿದೆ. ಇದು ಜಾರಿಯಾದಾಗಿನಿಂದ ವಾದ-ವಿವಾದಗಳು ನಡೆಯುತ್ತಲೇ ಇವೆ. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಎನ್‌ಇಪಿ ರದ್ದು ಮಾಡಿ ಎಸ್​ಇಪಿ ರಚನೆಗೆ ಸುಖದೇವ್ ಥೋರಟ್ ನೇತೃತ್ವದಲ್ಲಿ 15 ಜನರ ತಜ್ಞರ ಸಮಿತಿಯನ್ನು ರಚನೆ ಮಾಡಿದೆ. ಎಸ್​ಇಪಿಗೆ ಬೇಕಾದ ಎಲ್ಲ ತಯಾರಿಗಳು ನಡೆಯುತ್ತಿವೆ. ವಿಶ್ವವಿದ್ಯಾಲಯಗಳಲ್ಲಿ ನೂತನ ಪಠ್ಯಕ್ರಮ ಚೌಕಟ್ಟಿಗೆ ಪೂರಕವಾದ ಪರಿಷ್ಕರಣೆ ಶುರುವಾಗಿದೆ.

NEPಗೂ ಮತ್ತು SEPಗೂ ಅಜಗಜಾಂತರ ವ್ಯತ್ಯಾಸವಿದೆ. ಈ ಹಿಂದೆ ಇದ್ದ ಎಸ್​ಇಪಿ (ರಾಜ್ಯ ಶಿಕ್ಷಣ ನೀತಿ) ಪ್ರಕಾರ, ಮೂರು ವರ್ಷಗಳು ಪದವಿ ಹಾಗೂ ಎರಡು ವರ್ಷ ಸ್ನಾತಕೋತ್ತರ ಪದವಿ ಓದಬೇಕಿತ್ತು. ಆದರೆ ಎನ್​ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿಯಾದ ಮೇಲೆ ನಾಲ್ಕು ವರ್ಷ ಪದವಿ ಹಾಗೂ ಒಂದು ವರ್ಷ ಸ್ನಾತಕೋತ್ತರ ಪದವಿ ಓದಬೇಕು.

ಎನ್​ಇಪಿ ಪ್ರಕಾರ ಮೊದಲ ವರ್ಷಕ್ಕೆ ಗ್ರ್ಯಾಡ್ಜುವೇಟ್ ಸರ್ಟಿಫಿಕೆಟ್, ಎರಡನೇ ವರ್ಷಕ್ಕೆ ಗ್ರ್ಯಾಡ್ಜುವೇಟ್ ಡಿಪ್ಲಮೊ ಹಾಗೂ ಮೂರನೇ ವರ್ಷಕ್ಕೆ ಗ್ರ್ಯಾಡ್ಜುವೇಟ್ ಡಿಗ್ರಿ ಹೀಗೆ ಪ್ರತಿ ವರ್ಷಕ್ಕೂ ಪ್ರತ್ಯೇಕ ಸರ್ಟಿಫಿಕೇಟ್ ಸಿಗುತ್ತದೆ. ನೀವು ಯಾವುದೇ ವರ್ಷದಲ್ಲಿ ಶಿಕ್ಷಣ ನಿಲ್ಲಿಸಿದರೂ ಆ ವರ್ಷದ ಸರ್ಟಿಫೀಕೇಟ್ ಸಿಗುತ್ತದೆ.

ಇದನ್ನೂ ಓದಿ: ಎನ್​ಇಪಿಯಿಂದ 2047ರ ವೇಳೆಗೆ ಭಾರತ ಅತ್ಯಂತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ: AICTE ಅಧ್ಯಕ್ಷ

ಆದರೆ ಇದೀಗ ರಾಜ್ಯ ಸರ್ಕಾರ ಎಸ್​ಇಪಿ ಜಾರಿಗೆ ತರುತ್ತಿದೆ. ಈಗಾಗಲೆ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಎಸ್​ಇಪಿ ತಕ್ಕಹಾಗೆ ಪರಿಷ್ಕರಿತ ಪಠ್ಯ ಪುಸ್ತಕ ತಯಾರಾಗುತ್ತಿವೆ. ಇದೇ ವರ್ಷದಿಂದ ಎಸ್​ಇಪಿ ಜಾರಿಗೆ ಬರಲಿದೆ. ಪದವಿ ವ್ಯಾಸಂಗಕ್ಕೆ ಈ ವರ್ಷ ದಾಖಲಾತಿ ಪಡೆಯುವವರು ಎಸ್​ಇಪಿ ಓದಲಿದ್ದಾರೆ.

ಈ ವರ್ಷದಿಂದಲೇ ಎಸ್​ಇಪಿ ಜಾರಿಯಾಗುವ ಹಿನ್ನೆಲೆಯಲ್ಲಿ ಹಲವು ಮಹತ್ವದ ಸಭೆಗಳನ್ನು ನಡೆಸಲಾಗಿದೆ. ಜ್ಞಾನಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಸ್​ಇಪಿ ಜಾರಿ ಹಾಗೂ ಪಠ್ಯಕ್ರಮ ಪರಿಷ್ಕರಣ ಮಹತ್ವದ ಪ್ರಾಂತೀಯ ಮಟ್ಟದ ಕಾರ್ಯಗಾರ ನಡೆಸಲಾಯಿತು. ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯದ ಕುಲಪತಿಗಳು, ಶಿಕ್ಷಣ ತಜ್ಞರು ಭಾಷ ತಜ್ಞರು ಹಾಗು ರಾಜ್ಯ ಪಠ್ಯಕ್ರಮ ರಚಾನ ಸಮಿತಿ ಸದಸ್ಯರು ಭಾಗಿಯಾಗಿದ್ದರು.

ಒಟ್ಟಿನಲ್ಲಿ ಎನ್‌‌ಇಪಿ ಈ ವರ್ಷದಿಂದಲೇ ರಾಜ್ಯದಲ್ಲಿ ಜಾರಿಯಾಗುವ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮ ಚೌಕಟ್ಟಿಗೆ ಪೂರಕವಾದ ಪಠ್ಯಕ್ರಮ ಸಿದ್ಧವಾಗುತ್ತಿದೆ. ಅದೆನೇ ಇರಲಿ ಈ ಎಸ್ಇಪಿಯಿಂದ ಆದರೂ ರಾಜ್ಯದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್