AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​ 5ರಂದು ರಾಹುಲ್​ ಗಾಂಧಿ ರಾಜ್ಯ ಪ್ರವಾಸ: ಅನರ್ಹತೆ ಬಗ್ಗೆ ಕೋಲಾರದಿಂದಲೇ ಉತ್ತರ

ಅನರ್ಹತೆ ಬಗ್ಗೆ ಕೋಲಾರದಿಂದಲೇ ತಕ್ಕ ಪ್ರತ್ಯುತ್ತರ ನೀಡಲು ಏಪ್ರಿಲ್​ 5 ರಂದು ರಾಹುಲ್​ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಏಪ್ರಿಲ್​ 5ರಂದು ರಾಹುಲ್​ ಗಾಂಧಿ ರಾಜ್ಯ ಪ್ರವಾಸ: ಅನರ್ಹತೆ ಬಗ್ಗೆ ಕೋಲಾರದಿಂದಲೇ ಉತ್ತರ
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ
ವಿವೇಕ ಬಿರಾದಾರ
| Edited By: |

Updated on:Mar 28, 2023 | 8:53 AM

Share

ಕೋಲಾರ: 2019ರ ಲೋಕಸಭಾ ಚುನಾವಣೆ (Lok Sabha Election) ವೇಳೆ ಮೋದಿ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ (MP) ಸ್ಥಾನದಿಂದ ಎಐಸಿಸಿ (AICC) ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ (Rahul Gandhi) ಅನರ್ಹಗೊಂಡಿದ್ದರು. ಇದಕ್ಕೆ ಕೋಲಾರದಿಂದಲೇ (Kolar) ಪ್ರತ್ಯುತ್ತರ ನೀಡಲು ಏಪ್ರಿಲ್​ 5 ರಂದು ರಾಹುಲ್​ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ಪ್ರಚಾರದ ಹಿನ್ನೆಲೆ ರಾಹುಲ್​ ಗಾಂಧಿ ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಕಳೆದ ಬಾರಿ ಬೆಳಗಾವಿಯಲ್ಲಿ (Belagavi) ಅಬ್ಬರಿಸಿದ್ದರು. ಈ ಬಾರಿಯ ರಾಹುಲ ಗಾಂಧಿಯ ಕೋಲಾರ ಭೇಟಿ ವಿಶೇಷವಾಗಿದೆ.

ರಾಹುಲ್​ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹವಾಗಿದ್ದು ಕೋಲಾರದಲ್ಲಿ ಮಾಡಿದ ಬಾಷಣದಿಂದ. ಹೀಗಾಗಿ ಕೋಲಾರದಿಂದಲೇ ಪ್ರಚಾರ ಆರಂಭಿಸಿ, ಅನರ್ಹಗೊಳಿಸಿದ್ದನ್ನೇ ಪ್ರಚಾರದ ಪ್ರಭಲ‌ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಮತ್ತು ಬಿಜೆಪಿ ಸರ್ಕಾರಕ್ಕೆ ಉತ್ತರ ನೀಡಲು ಸಿದ್ದವಾಗಿದೆ. ಈಗಾಗಲೆ ಕಾಂಗ್ರೆಸ್​ ದೇಶಾದ್ಯಂತ ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಭಟನೆ ಮಾಡುತ್ತಿದೆ.

ಇದನ್ನೂ ಓದಿ: ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ: ಪೂರಕ ಸಾಕ್ಷ್ಯ ಕರ್ನಾಟಕದಿಂದ ಸೂರತ್​ಗೆ ಹೋದ ಬಗೆ ಹೀಗಿದೆ ನೋಡಿ

ರಾಹುಲ್​ ಗಾಂಧಿ ಕೋಲಾರದಲ್ಲಿ ಮಾಡಿದ ಭಾಷಣವಾದರು ಏನು?

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದ ಕೆ.ಹೆಚ್​.ಮುನಿಯಪ್ಪ ಪರ ಕೋಲಾರದಲ್ಲಿ ನಡೆದ ಪ್ರಚಾರದಲ್ಲಿ ರಾಹುಲ್​ ಗಾಂಧಿ ಅಂದಿನ ಎಐಸಿಸಿ ಅಧ್ಯಕ್ಷರಾಗಿದ್ದರು. ಅವರು ತಮ್ಮ ಭಾಷಣದ ವೇಳೆಯಲ್ಲಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ ನೇಮ್ ಒಂದೇ ಆಗಿದ್ದು, ಈ ಹೆಸರಿನವರು ಎಲ್ಲರೂ ಕಳ್ಳರು. ಈ ಎಲ್ಲಾ ಕಳ್ಳರು ಸೇರಿ ದೇಶವನ್ನು ಲೂಟಿ ಮಾಡಿದ್ದಾರೆ ಎಂದು ಹೇಳಿದ್ದರು. ಕೋಲಾರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ, ಮುಳಬಾಗಿಲಿನ ರೋಡ್​ ಶೋ ವೇಳೆಯಲ್ಲಿ ಹಾಗೂ ಕೆಜಿಎಫ್​ನ ನಗರಸಭೆ ಮೈದಾನದಲ್ಲಿ ಆಯೋಜನೆ ಮಾಡಿದ್ದ ಬಹಿರಂಗ ಸಮಾವೇಶದ ವೇಳೆಯಲ್ಲೂ ರಾಹುಲ್​ ಗಾಂಧಿ ಇದೇ ವಿಚಾರವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದರು.

ರಾಹುಲ್​ ಗಾಂಧಿ ಕೋಲಾರ ಭಾಷಣಕ್ಕೆ ಗುಜರಾತ್​ನಲ್ಲಿ ಪ್ರಕರಣ ದಾಖಲು​

ರಾಹುಲ್‌ ಗಾಂಧಿ ಹೇಳಿಕೆ ವಿರೋಧಿಸಿ ಗುಜರಾತ್‌ನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪೂರ್ಣೇಶ್ ಮೋದಿ ಸೂರತ್‌ನಲ್ಲಿ ದೂರು ನೀಡಿದ್ದರು. ಮೋದಿ ಉಪನಾಮದ ಕುರಿತು ರಾಹುಲ್‌ ಗಾಂಧಿ ಮಾಡಿದ ಟೀಕೆ ಇಡೀ ಮೋದಿ ಸಮುದಾಯಕ್ಕೆ ಅವಮಾನ ಮಾಡಿದಂತಾಗಿದೆ ಎಂದು ನೀಡಿದ್ದರು. ಐಪಿಸಿ ಸೆಕ್ಷನ್‌ಗಳಾದ 499 ಮತ್ತು 500ರ ಅಡಿ (ಮಾನಹಾನಿ) ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗಾಗಿ ರಾಹುಲ್‌ ಗಾಂಧಿಯವರು ಮೂರು ಬಾರಿ ಸೂರತ್‌ ಕೋರ್ಟ್‌ಗೆ ಹಾಜರಾಗಿದ್ದರು. ಈಗ ಕೋರ್ಟ್‌ ರಾಹುಲ್‌ ಗಾಂಧಿ ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Tue, 28 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ