Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ಓರ್ವ ಶಾಸಕನ ಬಂಧನ, ಇನ್ನೊಬ್ಬರಿಗೆ ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಕೇಸ್; ಇಬ್ಬರು ಶಾಸಕರ ಸಂಕಷ್ಟದ ಸ್ಟೋರಿ ಇಲ್ಲಿದೆ

ಈಗಾಗಲೇ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಚುನಾವಣೆಯ ಹೊಸ್ತಿಲಿನಲ್ಲಿಯೇ ಇಬ್ಬರು ಹಾಲಿ ಶಾಸಕರಿಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒರ್ವ ಶಾಸಕ ಬಂಧನವಾದ್ರೆ, ಇನ್ನೊಬ್ಬರಿಗೆ ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿ ಕೇಸ್ ಈಗ ಕಾಡುತ್ತಿದೆ. ಒಟ್ಟಿನಲ್ಲಿ ಇಬ್ಬರು ಚುನಾವಣೆ ವೇಳೆಯಲ್ಲಿ ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದಾರೆ. ಆ ಶಾಸಕರ ಕುರಿತು ಸ್ಟೋರಿ ಇಲ್ಲಿದೆ ನೋಡಿ.

Karnataka Assembly Election: ಓರ್ವ ಶಾಸಕನ ಬಂಧನ, ಇನ್ನೊಬ್ಬರಿಗೆ ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಕೇಸ್; ಇಬ್ಬರು ಶಾಸಕರ ಸಂಕಷ್ಟದ ಸ್ಟೋರಿ ಇಲ್ಲಿದೆ
ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಶಾಸಕ ಎಂಪಿ ರೇಣುಕಾಚಾರ್ಯ
Follow us
ಕಿರಣ್ ಹನುಮಂತ್​ ಮಾದಾರ್
| Updated By: ವಿವೇಕ ಬಿರಾದಾರ

Updated on:Apr 01, 2023 | 12:04 PM

ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿಯೇ ಜಿಲ್ಲೆಯ ಇಬ್ಬರು ಶಾಸಕರುಗಳಲ್ಲಿ ಒರ್ವ ಶಾಸಕನ ಬಂಧನ, ಇನ್ನೊಬ್ಬರಿಗೆ ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಕೇಸ್  ಆಗಿದೆ. ಹೌದು  ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ(Madal Virupakshappa) ಹಾಗೂ ಅವರ ಪುತ್ರ ಬೆಂಗಳೂರು ಜಲ ಮಂಡಳಿಯ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ ಮಾಡಾಳ್ ಜೈಲಿನಲ್ಲಿದ್ದಾರೆ. ತಂದೆ ನಿರೀಕ್ಷಣಾ ಜಾಮೀನಿನ ಮೇಲೆ ಹೊರಗಿದ್ದರು. ಕೋರ್ಟ್​ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹಿನ್ನೆಲೆ ಶಾಸಕರನ್ನ ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಶುರು ಮಾಡಿದ್ದಾರೆ. ಇದರ ನಡುವೆ ಮಾಡಾಳ್ ಅವರಿಗೆ ಇನ್ನೊಂದು ಸಂಕಷ್ಟ ಸುರುವಾಗಿದೆ. ಈಗಾಗಲೇ ಇವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪವಿದೆ. ಶಿವಮೊಗ್ಗ. ದಾವಣಗೆರೆ, ಚಿತ್ರದುರ್ಗ ಹಾಗೂ ಬೆಂಗಳೂರು ಸೇರಿದಂತೆ ಹತ್ತಾರು ಕಡೆ ಆಸ್ತಿ ಇರುವುದು ಪತ್ತೆಯಾಗಿದೆ. ಹೀಗಾಗಿ ಇನ್ನೊಂದು ಕೇಸ್ ಆಗುವುದು ಬಹುತೇಕ ಖಚಿತ ಎನ್ನುತ್ತಿವೆ ಮೂಲಗಳು. ಅಂದರೆ ಡಿಎ ಕೇಸ್ ಬುಕ್ ಆದರೆ ಮತ್ತೊಮ್ಮೆ ಲೋಕಾಯುಕ್ತ ದಾಳಿ ಆಗುವುದು ಖಚಿತ. ಮೇಲಾಗಿ ಈಗ ಚುನಾವಣೆ ಘೋಷಣೆ ಆಗಿದ್ದು, ರಾಜಕೀಯವಾಗಿ ಮಾಡಾಳ್​ಗೆ ತೀವ್ರ ಹಿನ್ನಡೆಯಾಗಿದೆ. ಜೊತೆಗೆ ರಾಜಕೀಯ ಎದುರಾಳಿಗಳಿಗೆ ಆಹಾರ ಆಗಿದ್ದಾರೆ ಶಾಸಕ ಮಾಡಾಳ್.

ಬಿಜೆಪಿ ಶಾಸಕ ಹೊನ್ನಾಳಿಯ ಎಂಪಿ ರೇಣುಕಾಚಾರ್ಯ

ಇನ್ನು ಸದಾ ಸುದ್ದಿಯಲ್ಲಿ ಇರುವ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ನಿತ್ಯ ಸುತ್ತಾಡುವ ಶಾಸಕ ಅಂದರೆ ಹೊನ್ನಾಳಿಯ ಎಂಪಿ ರೇಣುಕಾಚಾರ್ಯ. ಹೌದು ಇನ್ನೇನು ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವ ತಯಾರಿಯಲ್ಲಿದ್ದಾರೆ. ಆದರೆ ಇವರ ಮೇಲೆ ಇರುವ ಕೇಸ್​ಗಳ ಬಗ್ಗೆ ವಿವರವನ್ನ ಚುನಾವಣಾ ಆಯೋಗಕ್ಕೆ ನೀಡಬೇಕು. ಇದನ್ನ ತಪ್ಪಿಸಲು ಒಂದು ಕೇಸ್ ವಿಚಾರವಾಗಿ ಹೈಕೋರ್ಟ ಮೊರೆ ಹೋಗಿ ಕೇಸ್ ರದ್ದು ಪಡಿಸುವಂತೆ ವಿನಂತಿಸಿದ್ದರು. ಆದರೆ ಕೋರ್ಟ್​ ಕೇಸ್ ವಜಾಗೊಳಿಸಲು ನಿರಾಕರಿಸಿದೆ. ಹೌದು ಸದ್ಯ ಲೋಕಾಯುಕ್ತ ದಾಳಿ ಸಹ ಆಗ ರೇಣುಕಾಚಾರ್ಯ ಅವರ ಮನೆಯ ಮೇಲೆ ನಡೆದಿತ್ತು. ಇದೇ ಎಫ್​.ಐ.ಆರ್ ವಜಾ ಕೇಳಿ ಕೋರ್ಟ್​ಗೆ ಹೋಗಿದ್ದ ರೇಣುಕಾಚಾರ್ಯಗೆ ಹೈಕೋರ್ಟ್​ ನಿರಾಕರಿಸಿದೆ.

ಇದನ್ನೂ ಓದಿ:ರಾಜಕೀಯ ಹಾಗೂ ಧರ್ಮ ಬೇರ್ಪಟ್ಟಾಗ ದ್ವೇಷಪೂರಿತ ಭಾಷಣಗಳು ನಿಲ್ಲುತ್ತವೆ: ಸುಪ್ರೀಂಕೋರ್ಟ್​

ಇದೀಗ ಆಡಳಿತ ಪಕ್ಷದ ಇಬ್ಬರು ಶಾಸಕರು ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಕೇಸ್​ಗಳನ್ನ ಎದುರಿಸುತ್ತಿದ್ದಾರೆ. ಜೊತೆಗೆ ಓರ್ವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನವಾಗಿದೆ. ಇನ್ನೊಬ್ಬ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದ ಪ್ರಕರಣವೊಂದು ಹೈಕೋರ್ಟ್​ನಲ್ಲಿ ನಡೆಯುತ್ತಿದೆ. ಹೀಗಾಗಿ ಆಡಳಿತ ಪಕ್ಷದ ಇಬ್ಬರು ಶಾಸಕರು ಇದೀಗ ಸಂಕಷ್ಟದಲ್ಲಿದ್ದಾರೆ.

ವರದಿ: ಬಸವರಾಜ್ ದೊಡ್ಮನಿ ಟಿವಿ9 ದಾವಣಗೆರೆ

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:19 am, Sat, 1 April 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್