AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Elections 2021: ಕಾಂಗ್ರೆಸ್ ಟೀ ರಾಜಕಾರಣ ಮಾಡುತ್ತಿದೆ, ಬಿಜೆಪಿ ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕೆ ಬದ್ಧ: ನರೇಂದ್ರ ಮೋದಿ

Modi in Assam: ಅಸ್ಸಾಂನ ಚಹಾ ತೋಟದ ಕಾರ್ಮಿಕರ ಅಭಿವೃದ್ಧಿ ಬಗ್ಗೆ ಮಾತನಾಡಿದ ಮೋದಿ, ಕಾಂಗ್ರೆಸ್ ಚಹಾ ರಾಜಕಾರಣ ಮಾಡಿತ್ತು. ಆದರೆ ಎನ್​ಡಿಎ ಸರ್ಕಾರ ಶಿಕ್ಷಣ, ಕೆಲಸ, ಔಷಧಿಗಳನ್ನು ಚಹಾ ತೋಟದ ಕಾರ್ಮಿಕರಿಗೆ ಒದಗಿಸಿದೆ ಎಂದಿದ್ದಾರೆ

Assam Elections 2021: ಕಾಂಗ್ರೆಸ್ ಟೀ ರಾಜಕಾರಣ ಮಾಡುತ್ತಿದೆ, ಬಿಜೆಪಿ ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕೆ ಬದ್ಧ: ನರೇಂದ್ರ ಮೋದಿ
ಅಸ್ಸಾಂನಲ್ಲಿ ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Mar 21, 2021 | 1:40 PM

Share

ಬೋಕಾಖಾತ್: ಅಸ್ಸಾಂನಲ್ಲಿ ಎರಡನೇ ಬಾರಿ ಎನ್​ಡಿಎ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾನುವಾರ ಬೋಕಾಖಾತ್​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಮೋದಿ, ಭಾಷಣವನ್ನು ಅಸ್ಸಾಮೀಸ್ ಭಾಷೆಯಲ್ಲಿ ಆರಂಭಿಸಿದ್ದಾರೆ. ಅಸ್ಸಾಂನಲ್ಲಿ ‘ಡಬಲ್ ಎಂಜಿನ್ ಕೀ ಸರ್ಕಾರ’ ಬರಲಿದೆ. ‘ದೂಸ್ ರೀ ಬಾರ್ ಬಿಜೆಪಿ ಸರ್ಕಾರ’ (ಎರಡನೇ ಬಾರಿ ಬಿಜೆಪಿ ಸರ್ಕಾರ) ಎಂದು ಮೋದಿ ಹೇಳಿದ್ದಾರೆ. ಎನ್​ಡಿಎ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ಉಚಿತ ಗ್ಯಾಸ್ ಸಿಲಿಂಡರ್, ಎಲ್​ಪಿಜಿ, ವಿದ್ಯುತ್ ಮತ್ತು ಉಚಿತ ಆರೋಗ್ಯ ವ್ಯವಸ್ಥೆಯನ್ನು ರಾಜ್ಯದ ಜನರಿಗೆ ನೀಡಿದೆ. ಈ ಹಿಂದೆ ಇದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಖಡ್ಗಮೃಗಗಳನ್ನು ರಕ್ಷಿಸಲು ವಿಫಲವಾಗಿತ್ತು. ಆದರೆ ಎನ್ಡಿಎ ಸರ್ಕಾರ ಖಡ್ಗಮೃಗಗಳನ್ನು ಕಾಪಾಡಿದೆ. ಬ್ರಹ್ಮಪುತ್ರಾ ನದಿಗೆ ಕಟ್ಟಲಾದ ಚತುಷ್ಪಥ ಸೇತುವೆಯು ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಿದೆ. ರಾಜ್ಯದಲ್ಲಿ ಎನ್ ಡಿಎ ಆಡಳಿತಾವಧಿಯಲ್ಲಿ ಮೌಲಸೌಕರ್ಯಗಳು ಹೆಚ್ಚಿವೆ ಎಂದಿದ್ದಾರೆ ಮೋದಿ.

ಕಾಂಗ್ರೆಸ್ ಸರ್ಕಾರದ ಮೇಲೆ ಹರಿಹಾಯ್ದ ಪ್ರಧಾನಿ ಮೋದಿ, ರಾಜ್ಯದಲ್ಲಿ ತೈಲ ಮತ್ತು ಪೆಟ್ರೊಲಿಯಂ ವಲಯದ ಅಭಿವೃದ್ಧಿಗಾಗಿ ₹40,000 ಕೋಟಿ ಹೂಡಿಕೆ ಮಾಡಲಾಗಿದೆ. ತೈಲ ಸಂಸ್ಕರಣಾ ಘಟಕಗಳಲ್ಲಿ ಉತ್ಪಾದನೆಯ ಪ್ರಮಾಣ ಹೆಚ್ಚಿಸಲು ಡಬಲ್ ಎಂಜಿನ್ ಸರ್ಕಾರ ಹೂಡಿಕೆಯ ಮಹಾಪೂರವೇ ಹರಿದು ಬರುವಂತೆ ಮಾಡಿದೆ. ಈ ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಅಸ್ಸಾಂನ್ನು ಕಡೆಗಣಿಸಲಾಗಿತ್ತು, ಇಲ್ಲಿ ಭ್ರಷ್ಟಾಚಾರ ಹೆಚ್ಚಿತ್ತು. ಆದರೆ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅಸ್ಸಾಂನ ಅಭಿವೃದ್ಧಿ ಮಾಡಿದೆ. ಕಾಂಗ್ರೆಸ್ ಅಂದರೆ ಗೊಂದಲ. ಕಾಂಗ್ರೆಸ್ ಅಂದರೆ ಬಾಂಬ್, ಬಂದೂಕು ಮತ್ತು ದಿಗ್ಬಂಧನ. ಅಸ್ಸಾಂನ ಜನರು ‘ಲೂಟ್ ಕಾ ಇಂಜಿನ್’ ಕಾಂಗ್ರೆಸ್ ಪಕ್ಷವನ್ನು ದೂರವಿರಿಸಬೇಕಾಗಿದೆ ಎಂದು ಮೋದಿ ಹೇಳಿದ್ದಾರೆ.

ಅಸ್ಸಾಂನ ಚಹಾ ತೋಟದ ಕಾರ್ಮಿಕರ ಅಭಿವೃದ್ಧಿ ಬಗ್ಗೆ ಮಾತನಾಡಿದ ಮೋದಿ, ಕಾಂಗ್ರೆಸ್ ಚಹಾ ರಾಜಕಾರಣ ಮಾಡಿತ್ತು. ಆದರೆ ಎನ್​ಡಿಎ ಸರ್ಕಾರ ಶಿಕ್ಷಣ, ಕೆಲಸ, ಔಷಧಿಗಳನ್ನು ಚಹಾ ತೋಟದ ಕಾರ್ಮಿಕರಿಗೆ ಒದಗಿಸಿದೆ. ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕೆ ಬಿಜೆಪಿ ಸರ್ಕಾರ ಬದ್ಧವಾಗಿದೆ. 2021-2022ರ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅಸ್ಸಾಂ ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕಾಗಿ ₹1,000ಕೋಟಿಗಿಂತಲೂ ಹೆಚ್ಚು ಹಣ ಮೀಸರಿಲಿಸಿದೆ. ಇಲ್ಲಿನ ಸರ್ಕಾರ ಉದ್ಯೋಗ ಸೃಷ್ಟಿಗಾಗಿ ಕಠಿಣ ಪರಿಶ್ರಮ ನಡೆಸಿದೆ ಎಂದು ಮೋದಿ ಹೇಳಿದ್ದಾರೆ.

ಅಸ್ಸಾಂ ವಿಧಾನಸಭೆ ಚುನಾವಣೆಗಾಗಿ ಮೊದಲ ಹಂತರದ ಚುನಾವಣೆ ಮಾರ್ಚ್ 27ರಂದು ನಡೆಯಿದ್ದು, ಏಪ್ರಿಲ್ 6ರಂದು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಮೋದಿಯವರು ಇಂದು ಸಂಜೆ 3.30ಕ್ಕೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ತಿಲಾ ಬೆಡಿಯಾ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಶನಿವಾರ ಪಶ್ಚಿಮಬಂಗಾಳದ ಖರಗ್​ಪುರ್​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಹಿಂಸಾಚಾರ, ಭ್ರಷ್ಟಾಚಾರ ಮತ್ತು ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿದ್ದರು. ಟಿಎಂಸಿ ಸರ್ಕಾರದಿಂದ ಬಂಗಾಳದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ದೂರಿದ ಮೋದಿ, ಬಿಜೆಪಿ ಸರ್ಕಾರದ ಆತ್ಮನಿರ್ಭರ್ ಭಾರತದ ಉದ್ದೇಶ ಟಿಎಂಸಿ ಸರ್ಕಾರಕ್ಕೆ ನೋವುಂಟು ಮಾಡುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: Assam Assembly Elections 2021: ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ ಕಾಂಗ್ರೆಸ್; ಸಿಎಎ ಕಿತ್ತೊಗೆಯುತ್ತೇವೆ ಎಂದು ಭರವಸೆ

Assam Assembly Elections 2021: ಅಸ್ಸಾಂನ ಗೌರವ ಕುಗ್ಗಿಸುವವರಿಗೆ ಮತ ಹಾಕುವಿರೇ?; ಪ್ರಧಾನಿ ಮೋದಿ ಪ್ರಶ್ನೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!