AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Assembly polls: ಅಸ್ಸಾಮ್ ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮಾರನ್ನು ಪ್ರಚಾರದಲ್ಲಿ ತೊಡಗದಂತೆ ನಿಷೇಧಿಸಿದ ಚುನಾವಣಾ ಆಯೋಗ

ಹಗ್ರಾಮ ಮೊಹಿಲರಿ ಅವರಿರು ಹಿಂದೊಮ್ಮೆ ಬಿಜೆಪಿಯೊಂದಿಗೆ ಮೈತ್ರಿ ಹೊಂದಿದ್ದರು. ಆದರೆ ಪಕ್ಷವು ಕಳೆದ ಡಿಸೆಂಬರ್​ನಲ್ಲಿ ಬೊಡೊಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ ಸ್ಥಾಪಿಸಲು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಜೊತೆ ಕೈ ಜೋಡಿಸಿದ ನಂತರ ಅವರು ಕಾಂಗ್ರೆಸ್ ಪಕ್ಷದೆಡೆ ವಾಲಿದರು.

Assam Assembly polls: ಅಸ್ಸಾಮ್ ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮಾರನ್ನು ಪ್ರಚಾರದಲ್ಲಿ ತೊಡಗದಂತೆ ನಿಷೇಧಿಸಿದ ಚುನಾವಣಾ ಆಯೋಗ
ಹಿಮಂತ ಬಿಸ್ವ ಶರ್ಮಾ
ಅರುಣ್​ ಕುಮಾರ್​ ಬೆಳ್ಳಿ
|

Updated on:Apr 02, 2021 | 11:47 PM

Share

ನವದೆಹಲಿ/ಗುವಹಾಟಿ: ಅಸ್ಸಾಮ್​ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿಪಕ್ಷ ಕೂಟದ ಭಾಗವಾಗಿರುವ ಬೊಡೊಲ್ಯಾಂಡ್ ಪೀಪಲ್ಸ್ ಪಕ್ಷದ ಧುರೀಣ ಹಗ್ರಾಮ ಮೊಹಿಲರಿ ಅವರಿಗೆ ರಾಷ್ಟ್ರೀಯ ತನಿಖಾ ದಳವನ್ನು (ಎನ್​ಐಎ) ದುರ್ಬಳಕೆ ಮಾಡಿಕೊಂಡು ಜೈಲಿಗೆ ಕಳಿಸುವುದಾಗಿ ಬಹಿರಂಗ ಬೆದರಿಕೆ ಹಾಕಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಅಸ್ಸಾಮ್​ನ ಸಚಿವ ಮತ್ತು ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮಾ ಅವರನ್ನು 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗವು ನಿರ್ಬಂಧ ಹೇರಿದೆ.

ಅಸ್ಸಾಮ್ 2021ವಿಧಾನಸಭೆ ಚುನಾವಣೆಗೆ ಮೂರನೇ ಹಾಗೂ ಅಂತಿಮ ಸುತ್ತಿನ ಮತದಾನ ಏಪ್ರಿಲ್ 6 ರಂದು ನಡೆಯಲಿದೆ. ಅದರರ್ಥ ರಾಜ್ಯದಲ್ಲಿ ಬಿಜೆಪಿಯ ಪ್ರಮುಖ ನಾಯಕ ಮತ್ತು ಟ್ರಬಲ್​ಶೂಟರ್ ಎಂದು ಗುರುತಿಸಿಕೊಂಡಿರುವ ಜೊತೆಗೆ ತಮ್ಮ ಚಾಣಾಕ್ಷ ರಣನೀತಿಯ ಮೂಲಕ ಅಸ್ಸಾಮ್​ನಲ್ಲಿ ಪಕ್ಷ ಆಧಿಕಾರ ಉಳಿಸಿಕೊಳ್ಳಲು ಬಹು ದೊಡ್ಡ ಪಾತ್ರ ನಿರ್ವಹಿಸಲಿದ್ದಾರೆಂದು ಪರಿಗಣಿಸಲಾಗಿರುವ ಶರ್ಮಾ ಮೂರನೇ ಹಂತದ ಮತದಾನಕ್ಕೆ ಮೊದಲು ಪ್ರಚಾರದಲ್ಲಿ ಪಾಲ್ಗೊಳ್ಳುವುದು ಸಾಧ್ಯವಾಗುವುದಿಲ್ಲ.

ಮಾರ್ಚ್​ 28ರಂದು ಶರ್ಮಾ ಅವರಿಗೆ ಶೋಕಾಸ ನೋಟಿಸೊಂದನ್ನು ಜಾರಿ ಮಾಡಿದ ಚುನಾವಣಾ ಅಯೋಗವು ಅದರಲ್ಲಿ ಅವರು ಮಾಡಿದ ಭಾಷಣನ್ನು ಉಲ್ಲೇಖಿಸಿತ್ತು. ಭಾಷಣದಲ್ಲಿ ಅವರು ಅವರು ಹೀಗೆ ಹೇಳಿದ್ದರು: ….. ನಾನು ನೇರವಾಗಿ ಹೇಳುತ್ತಿದ್ದೇನೆ. ಹಗ್ರಾಮ ಮೊಹಿಲರಿ ಭಯೋತ್ಪಾದನೆ ಮಾಡಿದರೆ, ಜೈಲಿಗೆ ಹೋಗಬೇಕಾಗುತ್ತದೆ. ಅವರ ವಿರುದ್ಧ ಈಗಾಗಲೇ ಸಾಕಷ್ಟು ಪುರಾವೆ ಲಭ್ಯವಾಗಿದೆ. ಈ ಪ್ರಕರಣವನ್ನು ಎನ್​ಐಎಗೆ ವಹಿಸಲಾಗುತ್ತಿದೆ. ಕೊಕ್ರಾಜಾರ್​ನಲ್ಲಿ ಕಾರೊಂದರಲ್ಲಿ ವಶಪಡಿಸಿಕೊಳ್ಳಲಾದ ಆಯುಧಗಳ ಪ್ರಕರಣವನ್ನು ಎನ್​ಐಎಗೆ ವಹಿಸಲಾಗುತ್ತಿದೆ. ಬೊಡೊಲ್ಯಾಂಡ್ ಪ್ರಾಂತ್ಯದ ಭಾಗದಲ್ಲಿ ಉದ್ರಿಕ್ತ ವಾತಾವರಣವನ್ನು ಸೃಷ್ಟಿಸಲು ಹಗ್ರಾಮ ಸೇರಿದಂತೆ ಯಾರಿಗೂ ಬಿಡುವುದಿಲ್ಲ….

ಹಗ್ರಾಮ ಮೊಹಿಲರಿ ಅವರಿರು ಹಿಂದೊಮ್ಮೆ ಬಿಜೆಪಿಯೊಂದಿಗೆ ಮೈತ್ರಿ ಹೊಂದಿದ್ದರು. ಆದರೆ ಪಕ್ಷವು ಕಳೆದ ಡಿಸೆಂಬರ್​ನಲ್ಲಿ ಬೊಡೊಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ ಸ್ಥಾಪಿಸಲು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಜೊತೆ ಕೈ ಜೋಡಿಸಿದ ನಂತರ ಅವರು ಕಾಂಗ್ರೆಸ್ ಪಕ್ಷದೆಡೆ ವಾಲಿದರು.

126 ಸ್ಥಾನಗಳ ಅಸ್ಸಾಮ್ ವಿಧಾನಸಭೆಗೆ ಮೂರು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು ಏಪ್ರಿಲ್ 1ರಂದು 39 ಮತಕ್ಷೇತ್ರಗಳಲ್ಲಿ ನಡೆದ 2 ನೇ ಹಂತದ ಮತದಾನದಲ್ಲಿ ಶೇಕಡಾ 77ರಷ್ಟು ಜನ ತಮ್ಮ ಹಕ್ಕನ್ನು ಚಲಾಯಿಸಿದರು. ಮಾರ್ಚ್ 27 ರಂದು 30 ಕ್ಷೇತ್ರಗಳಿಗೆ ನಡೆದ ಮೊದಲ ಹಂತ ಮತದಾನದಲ್ಲಿ ಶೇಕಡಾ 76 ರಷ್ಟು ಮತದಾರರು ವೋಟು ನೀಡಿದರು.

ಚುನಾವಣಾ ಅಯೋಗದಿಂದ ಪ್ರಚಾರ ಕಾರ್ಯದಲ್ಲಿ ತೊಡಗದಂತೆ ನಿರ್ಬಂಧಕ್ಕೊಳಗಾಗಿರುವ ಎರಡನೇ ನಾಯಕ ಶರ್ಮಾ ಆಗಿದ್ದಾರೆ. ತಮಿಳುನಾಡಿನಲ್ಲಿ ಡಿಎಮ್​ಕೆ ಪಕ್ಷದ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಎ ರಾಜಾ ಅವರನ್ನು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರ ದಿವಂಗತ ತಾಯಿ ಕುರಿತು ಅವಹೇಳನಕಾರಿ ಮಾತುಗಳನ್ನಾಡಿದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಚುನಾವಣಾ ಪ್ರಚಾರ ಖಾರ್ಯದಲ್ಲಿ ಪಾಲ್ಗೊಳ್ಳದಂತೆ ಚುನಾವಣಾ ಆಯೋಗವು ಗುರುವಾರದಂದು ನಿರ್ಬಂಧ ಹೇರಿತ್ತು.

ಇದನ್ನೂ ಓದಿತಮಿಳುನಾಡು ಮುಖ್ಯಮಂತ್ರಿ ಇಪಿಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಡಿಎಂಕೆ ನಾಯಕ ಎ.ರಾಜಾಗೆ 2 ದಿನ ಚುನಾವಣಾ ಪ್ರಚಾರದಿಂದ ನಿರ್ಬಂಧ

Published On - 11:45 pm, Fri, 2 April 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್