AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly By Elections 2022: ನವೆಂಬರ್ 3ರಂದು ಆರು ರಾಜ್ಯಗಳ ವಿಧಾನಸಭಾ ಉಪಚುನಾವಣೆ , ನ.6ರಂದು ಫಲಿತಾಂಶ ಪ್ರಕಟ

ಮುಂದಿನ ತಿಂಗಳು ಆರು ರಾಜ್ಯಗಳ ವಿಧಾನಸಭಾ ಉಪಚುನಾವಣೆ ನಡೆಲಾಗುವುದು ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ. ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪಚುನಾವಣೆ ನಡೆಸಿ, ನವೆಂಬರ್ 6 ರಂದು ಫಲಿತಾಂಶ ಪ್ರಕಟ ಮಾಡಲಿದೆ.

Assembly By Elections 2022: ನವೆಂಬರ್ 3ರಂದು ಆರು ರಾಜ್ಯಗಳ ವಿಧಾನಸಭಾ ಉಪಚುನಾವಣೆ , ನ.6ರಂದು ಫಲಿತಾಂಶ ಪ್ರಕಟ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 03, 2022 | 12:59 PM

ಮುಂದಿನ ತಿಂಗಳು ಆರು ರಾಜ್ಯಗಳ ವಿಧಾನಸಭಾ ಉಪಚುನಾವಣೆ (By Poll) ನಡೆಲಾಗುವುದು ಎಂದು ಭಾರತದ ಚುನಾವಣಾ ಆಯೋಗ (Election Commission) ತಿಳಿಸಿದೆ. ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪಚುನಾವಣೆ ನಡೆಸಿ, ನವೆಂಬರ್ 6 ರಂದು ಫಲಿತಾಂಶ ಪ್ರಕಟ ಮಾಡಲಿದೆ ಎಂದು ತಿಳಿಸಿದೆ. ಮಹಾರಾಷ್ಟ್ರ, ಬಿಹಾರ, ಹರ್ಯಾಣ, ತೆಲಂಗಾಣ, ಉತ್ತರ ಪ್ರದೇಶ, ಒಡಿಶಾ ರಾಜ್ಯಗಳಲ್ಲಿ ವಿಧಾನಸಭಾ ಉಪಚುನಾವಣೆ ನಡೆಯಲಿದೆ.  ಬಿಹಾರದಲ್ಲಿನ ಮೊಕಾಮಾ,  ಗೋಪಾಲಗಂಜ್, ಮಹಾರಾಷ್ಟ್ರದ ಅಂಧೇರಿ ಈಸ್ಟ್ , ಹರ್ಯಾಣದ ಅಧಂಪುರ್, ತೆಲಂಗಾಣದ ಮನುಗೋಡ್,ಉತ್ತರಪ್ರದೇಶದ ಗೋಲ ಗೋರಖ್​​ನಾಥ್  ಮತ್ತು ಒಡಿಶಾದ ಧಾಮ್ ನಗರ್​​ನಲ್ಲಿ ಉಪಚುನಾವಣೆ  ನಡೆಯಲಿದೆ .ಈ ಕ್ಷೇತ್ರದಲ್ಲಿಶಾಸಕ ಸ್ಥಾನ ಖಾಲಿ ಇರುವ ಕಾರಣ ಉಪಚುನಾವಣೆ ನಡೆಸಲಾಗುತ್ತಿದೆ. ಮೊಕಾಮಾದ ಅಂದಿನ ಶಾಸಕ ರಾಷ್ಟ್ರೀಯ ಜನತಾ ದಳದ (RJD) ಅನಂತ್ ಕುಮಾರ್ ಸಿಂಗ್ ಅವರನ್ನು ಪ್ರಕರಣವೊಂದರಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಜುಲೈನಲ್ಲಿ ಅನರ್ಹಗೊಳಿಸಲಾಯಿತು. ಗೋಪಾಲಗಂಜ್ ಕ್ಷೇತ್ರವನ್ನು ಹೊಂದಿದ್ದ ಬಿಜೆಪಿಯ ಸುಭಾಷ್ ಸಿಂಗ್ ಅವರು ಆಗಸ್ಟ್‌ನಲ್ಲಿ ನಿಧನರಾದ ನಂತರ ಅಲ್ಲಿ ಸೀಟು  ಖಾಲಿಯಾಗಿ ಉಳಿದಿದೆ.

ಅಂಧೇರಿ ಈಸ್ಟ್ ವಿಧಾನಸಭಾ ಕ್ಷೇತ್ರದಲ್ಲಿ ಮೇ ತಿಂಗಳಲ್ಲಿ  ಶಿವಸೇನಾದ  ರಮೇಶ್ ಲಾಟ್ಕೆ ಅವರು ನಿಧನರಾದ ನಂತರ ಸೀಟು ಖಾಲಿಯಾಗಿತ್ತು.ಹರ್ಯಾಣದಲ್ಲಿ  ಕುಲದೀಪ್  ಬಿಷ್ಣೋಯಿ ಅವರ ರಾಜೀನಾಮೆಯಿಂದಾಗಿ ಅಧಂಪುರ ಕ್ಷೇತ್ರದಲ್ಲಿ ಸೀಟು  ಖಾಲಿ ಉಳಿದಿತ್ತು.

ಏತನ್ಮಧ್ಯೆ, ಚುನಾವಣಾ ಸಮಿತಿಯು ಪ್ರಕಟಿಸಿದ ವೇಳಾಪಟ್ಟಿಯ ಪ್ರಕಾರ, ಉಪಚುನಾವಣೆಯ ಗೆಜೆಟ್ ಅಧಿಸೂಚನೆಯನ್ನು ಅಕ್ಟೋಬರ್ 7 ರಂದು ಹೊರಡಿಸಲಾಗುವುದು ಮತ್ತು ಅಕ್ಟೋಬರ್ 14 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಅಕ್ಟೋಬರ್ 17 ಅಥವಾ ಮೊದಲು ಹಿಂಪಡೆಯಬಹುದು. ಉಪಚುನಾವಣೆಗಳನ್ನು ನವೆಂಬರ್ 7 ರ ಮೊದಲು ಪೂರ್ಣಗೊಳಿಸಬೇಕು.

ಈ ಚುನಾವಣೆಗಳಿಗೆ ವಿದ್ಯುನ್ಮಾನ ಮತಯಂತ್ರಗಳನ್ನು (EVM) ಬಳಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. “ಸಾಕಷ್ಟು ಸಂಖ್ಯೆಯ ಇವಿಎಂಗಳು ಮತ್ತು ವಿವಿಪ್ಯಾಟ್‌ಗಳನ್ನು (ಮತದಾರರ ದೃಢೀಕರಿಸಿದ ಪೇಪರ್ ಆಡಿಟ್ ಟ್ರಯಲ್) ಲಭ್ಯಗೊಳಿಸಲಾಗಿದೆ ಮತ್ತು ಈ ಯಂತ್ರಗಳ ಸಹಾಯದಿಂದ ಚುನಾವಣೆಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಇಸಿಐ ಕಾರ್ಯದರ್ಶಿ ಸಂಜೀವ್ ಕುಮಾರ್ ಪ್ರಸಾದ್ ಹೇಳಿದ್ದಾರೆ.

ಚುನಾವಣಾ ಆಯೋಗ  ಪ್ರಕಾರ, ಮತದಾರರ ಗುರುತಿನ ಪರಿಶೀಲನೆಗಾಗಿ ಚುನಾವಣಾ ಫೋಟೋ ಗುರುತಿನ ಚೀಟಿ (EPIC) ಅಥವಾ ಮತದಾರರ ಕಾರ್ಡ್ ಪ್ರಾಥಮಿಕ ದಾಖಲೆಯಾಗಿದೆ. ಆದಾಗ್ಯೂ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಡ್ರೈವಿಂಗ್ ಲೈಸೆನ್ಸ್‌ನಂತಹ ಇತರ ಅಧಿಕೃತ ಗುರುತಿನ ದಾಖಲೆಗಳನ್ನು ಸಹ ಸ್ವೀಕರಿಸಲಾಗುತ್ತದೆ.

Published On - 12:22 pm, Mon, 3 October 22

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು