AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election 2026 Results: ಪಂಚ ರಾಜ್ಯ ಚುನಾವಣಾ ಫಲಿತಾಂಶ ನೇರ ಪ್ರಸಾರ ಇಲ್ಲಿ ನೋಡಿ

Bagalkot Davangere Assembly By Election 2026 Results Live Streaming: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ಸೇರಿದಂತೆ ಕರ್ನಾಟಕದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಪ್ರಕಟವಾಗುತ್ತಿದೆ. ಮತ ಎಣಿಕೆ ಹಾಗೂ ಫಲಿತಾಂಶದ ನೇರ ಪ್ರಸಾರ ಇಲ್ಲಿದೆ.

Assembly Election 2026 Results: ಪಂಚ ರಾಜ್ಯ ಚುನಾವಣಾ ಫಲಿತಾಂಶ ನೇರ ಪ್ರಸಾರ ಇಲ್ಲಿ ನೋಡಿ
ವಿಧಾನಸಭಾ ಚುನಾವಣೆ ಫಲಿತಾಂಶ 2026 ನೇರ ಪ್ರಸಾರImage Credit source: tv9
ಗಣಪತಿ ಶರ್ಮಾ
|

Updated on: May 04, 2026 | 7:55 AM

Share

ವಿಧಾನಸಭೆ ಚುನಾವಣೆ ಫಲಿತಾಂಶ 2026: ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿ ವಿಧಾನಸಭಾ ಚುನಾವಣೆಗಳ ಹಾಗೂ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಪ್ರಕಟವಾಗುತ್ತಿದೆ. ಅಸ್ಸಾಂನ 126 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು.

ಪಶ್ಚಿಮ ಬಂಗಾಳದ 294 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಸ್ಥಾನಗಳಿಗೆ, ಎರಡನೇ ಹಂತದಲ್ಲಿ ಏಪ್ರಿಲ್ 29 ರಂದು 8 ಜಿಲ್ಲೆಗಳ 142 ಸ್ಥಾನಗಳಿಗೆ ಮತದಾನ ನಡೆದಿತ್ತು. ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ ಏಪ್ರಿಲ್ 9 ರಂದು ನಡೆದಿತ್ತು. ಫಲಿತಾಂಶದ ನೇರ ಪ್ರಸಾರ ಇಲ್ಲಿದೆ.

ಚುನಾವಣಾ ಫಲಿತಾಂಶ ಲೈವ್ ಇಲ್ಲಿ ನೋಡಿ

ತಮಿಳುನಾಡಿನಲ್ಲಿ ಒಟ್ಟು 234 ವಿಧಾನಸಭಾ ಸ್ಥಾನಗಳಿದ್ದು, ಅವುಗಳಲ್ಲಿ 62 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ತಮಿಳುನಾಡಿನಲ್ಲಿ ಅಧಿಕಾರ ವಶಪಡಿಸಿಕೊಳ್ಳಲು ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 118. ಈ ಬಾರಿ, ತಮಿಳುನಾಡಿನಲ್ಲಿ ಶೇಕಡಾ 85 ಕ್ಕಿಂತ ಹೆಚ್ಚು ಮತದಾನ ದಾಖಲಾಗಿದೆ. ಇದು ಯಾರಿಗೆ ಪ್ಲಸ್, ಯಾರಿಗೆ ಮೈನಸ್ ಎಂಬ ಚರ್ಚೆ ನಡೆಯುತ್ತಿದೆ. ತಮಿಳುನಾಡಿನಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆಯೇ? ಸೂಪರ್ ಸ್ಟಾರ್ ವಿಜಯ್ ಅವರ ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತದೆಯೇ ಎಂಬ ಕುತೂಹಲ ಮೂಡಿದೆ.

ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಸ್ಥಾನಗಳಿದ್ದು, ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಶೇ 93 ರಷ್ಟು ಮತದಾನ ದಾಖಲಾಗಿದೆ. ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ಸಂಖ್ಯೆ 148. ಎಣಿಕೆಗಾಗಿ 77 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಬಾರಿ ಟಿಎಂಸಿ ಮತ್ತೆ ಅಧಿಕಾರ ವಹಿಸಿಕೊಳ್ಳುತ್ತದೆಯೇ? ಅಥವಾ ಬಿಜೆಪಿ ಅಧಿಕಾರ ವಹಿಸಿಕೊಳ್ಳುತ್ತದೆಯೇ ಎಂಬುದು ಕೆಲವೇ ಕ್ಷಣಗಳಲ್ಲಿ ಗೊತ್ತಾಗಲಿದೆ.

ಕೇರಳದಲ್ಲಿ ಒಟ್ಟು 140 ವಿಧಾನಸಭಾ ಸ್ಥಾನಗಳಿವೆ. ಮತ ಎಣಿಕೆಗಾಗಿ 140 ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮ್ಯಾಜಿಕ್ ಸಂಖ್ಯೆ 71. ಈ ಬಾರಿ ಶೇಕಡಾ 78 ಕ್ಕೂ ಹೆಚ್ಚು ಮತದಾನ ನಡೆದಿದೆ. ಪಿಣರಾಯಿ ವಿಜಯನ್ ಮತ್ತೆ ಸರ್ಕಾರ ರಚಿಸುತ್ತಾರಾ? ಯುಡಿಎಫ್ ಅಧಿಕಾರಕ್ಕೆ ಬರುತ್ತದಾ ಎಂಬುದು ಇಂದು ಗೊತ್ತಾಗಲಿದೆ.

126 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಅಸ್ಸಾಂನಲ್ಲಿ ಈ ಬಾರಿ ಶೇಕಡಾ 85 ಕ್ಕೂ ಹೆಚ್ಚು ಮತದಾನ ನಡೆದಿದೆ. ಮತ ಎಣಿಕೆಗಾಗಿ 40 ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ಮ್ಯಾಜಿಕ್ ಸಂಖ್ಯೆ 64. ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ತಿಳಿಸಿವೆ. ಸಮೀಕ್ಷೆಯ ಭವಿಷ್ಯವಾಣಿಗಳು ನಿಜವಾಗುತ್ತವೆಯೇ? ಅಥವಾ ಎಣಿಕೆ ಬದಲಾಗುತ್ತದೆಯೇ ಎಂಬುದು ಶೀಘ್ರದಲ್ಲೇ ತಿಳಿಯಲಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಈ ಒಂದು ಕ್ಷೇತ್ರಕ್ಕೆ ಮಾತ್ರ ಫಲಿತಾಂಶ ಇಂದು ಇಲ್ಲ; ಮೇ 21ಕ್ಕೆ ಮರುಮತದಾನ, ಮೇ 24ಕ್ಕೆ ಮತ ಎಣಿಕೆ

ಪುದುಚೇರಿಯಲ್ಲಿ 30 ವಿಧಾನಸಭಾ ಸ್ಥಾನಗಳಿದ್ದು, ಈ ಬಾರಿ ಶೇಕಡಾ 90 ರಷ್ಟು ಮತದಾನ ನಡೆದಿದೆ. ಮತ ಎಣಿಕೆ 6 ಕೇಂದ್ರಗಳಲ್ಲಿ ನಡೆಯಲಿದೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?