AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana Election Result: ಹರಿಯಾಣದಲ್ಲಿ ಬಿಜೆಪಿ ಗೆಲುವು ಖಚಿತ; ಇಂದು ಸಂಜೆ ಪಕ್ಷದ ನಾಯಕರ ಜೊತೆ ಮೋದಿ ಸಭೆ

ಇಂದು ಮುಂಜಾನೆಯಿಂದಲೇ ಹರಿಯಾಣ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಭಾರೀ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ಸಮೀಪದಲ್ಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚಣೆಯಲ್ಲಿ ತೊಡಗಿದ್ದಾರೆ. ಐತಿಹಾಸಿಕ ಮೂರನೇ ಅವಧಿಗೆ ಹರಿಯಾಣದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಖಚಿತವಾಗಿದೆ.

Haryana Election Result: ಹರಿಯಾಣದಲ್ಲಿ ಬಿಜೆಪಿ ಗೆಲುವು ಖಚಿತ; ಇಂದು ಸಂಜೆ ಪಕ್ಷದ ನಾಯಕರ ಜೊತೆ ಮೋದಿ ಸಭೆ
ಪ್ರಧಾನಿ ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on:Oct 08, 2024 | 3:03 PM

Share

ನವದೆಹಲಿ: ಹರಿಯಾಣದಲ್ಲಿ ಬಿಜೆಪಿ ವಿಜಯದ ಘೋಷಣೆ ನಂತರ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ನಾಯಕರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಬಿಜೆಪಿ 5,000 ಮತಗಳ ಅಂತರದೊಂದಿಗೆ 22 ಸ್ಥಾನಗಳಲ್ಲಿ, 10,000 ಮತಗಳ ಅಂತರದೊಂದಿಗೆ 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ, ಬಿಜೆಪಿ ಮೂರನೇ ಅವಧಿಗೆ ಹರಿಯಾಣದಲ್ಲಿ ಸರ್ಕಾರ ರಚಿಸುವ ಉತ್ಸಾಹದಲ್ಲಿದೆ.

ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಬಿಜೆಪಿ ತನ್ನ ಮುನ್ನಡೆಯನ್ನು ಬಲಪಡಿಸುವುದರೊಂದಿಗೆ ಈಗ ಹರಿಯಾಣದಲ್ಲಿ ಬಿಜೆಪಿಯ ಗಮನ ಸರ್ಕಾರ ರಚನೆಯ ಮುಂದಿನ ಹಂತದತ್ತ ಸಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಹರಿಯಾಣದ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ. ಚುನಾವಣಾ ಪ್ರಚಾರ ಪ್ರಾರಂಭವಾಗುವ ಮೊದಲೇ ಬಿಜೆಪಿ ನಯಾಬ್ ಸಿಂಗ್ ಸೈನಿ ಅವರನ್ನು ಹರಿಯಾಣದ ಸಿಎಂ ಅಭ್ಯರ್ಥಿ ಎಂದು ಘೋಷಿಸಿತ್ತು.

ಇದನ್ನೂ ಓದಿ: ವಿಕಸಿತ ಭಾರತದ ಗುರಿ ಸಾಕಾರಗೊಳ್ಳುವವರೆಗೂ ವಿಶ್ರಮಿಸುವುದಿಲ್ಲ; 23 ವರ್ಷಗಳ ಪಯಣ ನೆನಪಿಸಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಸಂಜೆ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ನಾಯಕರು ಮತ್ತು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷವು ಭಾರಿ ಜಯಭೇರಿ ಬಾರಿಸುವ ನಿರೀಕ್ಷೆ ಹೆಚ್ಚಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ನಡುವೆ ಮನೋಹರ್ ಲಾಲ್ ಖಟ್ಟರ್ ನಿವಾಸದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಮತ್ತೊಂದೆಡೆ, ಎಣಿಕೆ ದತ್ತಾಂಶವನ್ನು ಅಪ್‌ಲೋಡ್ ಮಾಡುವಲ್ಲಿನ ವ್ಯತ್ಯಾಸದ ಕುರಿತು ಕಾಂಗ್ರೆಸ್ ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಅಕ್ಟೋಬರ್ 5ರ ಎಕ್ಸಿಟ್ ಪೋಲ್‌ಗಳಲ್ಲಿ ಹರಿಯಾಣದಲ್ಲಿ ಅಭೂತಪೂರ್ವ ಗೆಲುವು ದಾಖಲಿಸುವ ನಿರೀಕ್ಷೆಯಿದ್ದ ಕಾಂಗ್ರೆಸ್​ಗೆ ಸೋಲಿನ ಭೀತಿ ಎದುರಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Tue, 8 October 24

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ