
Bagalkot, Davangere, West Bengal, Tamil Nadu, Kerala, Assam, Puducherry Assembly Election 2026 Live Counting and Results Updates in Kannada: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ, ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು (ಮೇ 4) ಹೊರಬಿದ್ದಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಈ ಬೆನ್ನಲ್ಲೇ ದೆಹಲಿ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದರು. ಇನ್ನು ಅಸ್ಸಾಂನ 126 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ತಮಿಳುನಾಡಿನ 234 ಸ್ಥಾನಗಳಿಗೆ ಏಪ್ರಿಲ್ 23 ರಂದು ಒಂದೇ ಹಂತದಲ್ಲಿ ಮತದಾನವೂ ನಡೆದಿತ್ತು. ಪಶ್ಚಿಮ ಬಂಗಾಳದ 294 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಸ್ಥಾನಗಳಿಗೆ ಮತದಾನ ನಡೆದಿತ್ತು. ಎರಡನೇ ಹಂತದಲ್ಲಿ ಏಪ್ರಿಲ್ 29 ರಂದು 8 ಜಿಲ್ಲೆಗಳ 142 ಸ್ಥಾನಗಳಿಗೆ ಮತದಾನ ನಡೆದಿತ್ತು.
ಭವಾನಿಪುರ ಕ್ಷೇತ್ರದಲ್ಲಿ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ 15114 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ 58349 ಮತ ಪಡೆದುಕೊಂಡಿದ್ದರೆ, ಸುವೇಂದು 73463 ಮತಗಳನ್ನು ಪಡೆದುಕೊಂಡಿದ್ದಾರೆ. 2021ರಲ್ಲೂ ಸುವೇಂದು ಅಧಿಕಾರಿ ವಿರುದ್ಧ ಸೋತಿದ್ದ ಮಮತಾ, ಇದೀಗ ಮತ್ತೊಮ್ಮೆ ಸೋತ್ತಿದ್ದಾರೆ.
ಬಂಗಾಳದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸುತ್ತೇವೆ. ಬಂಗಾಳದಲ್ಲಿ ಮೊದಲ ಬಾರಿಗೆ ಹಿಂಸಾಚಾರ ರಹಿತ ಚುನಾವಣೆ ನಡೆದಿದೆ. ಬಂಗಾಳದಲ್ಲಿ ಮೊದಲ ಬಾರಿಗೆ ಸಾವು-ನೋವು ಇಲ್ಲದ ಚುನಾವಣೆ ನಡೆದಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ಇಡೀ ವಿಶ್ವದ ಮೇಲೆ ಪರಿಣಾಮ ಬೀರಿದೆ. ಆದರೆ ಯುದ್ಧದಿಂದ ಭಾರತದಲ್ಲಿ ಪರಿಣಾಮ ಬೀರಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬಂಗಾಳದ ಭವಿಷ್ಯದ ಹೊಸ ಯಾತ್ರೆ ಆರಂಭವಾಗುತ್ತೆ. ಬಂಗಾಳದ ಜನರಿಗೆ ನಾನು ಅಭಿವೃದ್ಧಿಯ ಭರವಸೆ ನೀಡುತ್ತೇನೆ. ಮಹಿಳೆಯರಿಗೆ ಸುರಕ್ಷತೆ, ಯುವಕರಿಗೆ ಉದ್ಯೋಗ ಸಿಗಲಿದೆ. ಬಾಂಗ್ಲಾ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಆಗಲಿದೆ. ಇದು ಬಂಗಾಳಕ್ಕೆ ಮೋದಿ ನೀಡುತ್ತಿರುವ ಗ್ಯಾರಂಟಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬಂಗಾಳದಲ್ಲಿ ಈ ಜಯದ ಹಿಂದೆ ಸಾಕಷ್ಟು ಬಿಜೆಪಿ ಕಾರ್ಯಕರ್ತರ ಬಲಿದಾನವಿದೆ. ಬಂಗಾಳ, ಕೇರಳದಲ್ಲಿ ಸಾಕಷ್ಟು ಮಹಿಳೆಯರ ಮೇಲೆ ಅತ್ಯಾಚಾರವಾಗಿದೆ. ಈ ಗೆಲುವು ನಾನು ಬಂಗಾಳ ಜನರಿಗೆ ಅರ್ಪಿಸಲು ಬಯಸುತ್ತೇನೆ. ಬಂಗಾಳದ ಭವಿಷ್ಯದ ಹೊಸ ಯಾತ್ರೆ ಆರಂಭವಾಗುತ್ತೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಹರಿಯಾಣ, ಮಹಾರಾಷ್ಟ್ರ, ದೆಹಲಿಯಲ್ಲೂ ಬಿಜೆಪಿಗೆ ಅಭೂತಪೂರ್ವ ಜಯ ಲಭಿಸಿದೆ. ಪ್ರತಿ ಚುನಾವಣೆಯಲ್ಲಿ ಜನರು ಬಿಜೆಪಿಗೆ ಜನ ಆಶೀರ್ವದಿಸ್ತಿದ್ದಾರೆ. ಇಂದು ಶ್ಯಾಮ್ ಪ್ರಕಾಶ್ ಮುಖರ್ಜಿ ಆತ್ಮಕ್ಕೆ ಶಾಂತಿ ದೊರೆತಿದೆ. ಅವರ ಕನಸು ಇಂದು ನನಸಾಗಿದೆ. ಬಂಗಾಳದ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯ ಶುರುವಾಗಿದೆ. ಬಂಗಾಳ ಇಂದು ಭಯ ಮುಕ್ತವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಅಸ್ಸಾಂನಲ್ಲಿ ನಮಗೆ ಕಾಮಾಕ್ಯದೇವಿ ಆಶೀರ್ವಾದ ಮಾಡಿದ್ದಾಳೆ. ಬಿಜೆಪಿ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದೆ. NDA ಸರ್ಕಾರ ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುತ್ತೆ. ಇಂದು ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ NDA ಸರ್ಕಾರವಿದೆ. ನಮ್ಮ ಮಂತ್ರ ನಾಗರಿಕ ದೇವೋ ಭವ. ಎಲ್ಲಿ ಬಿಜೆಪಿಯೋ ಅಲ್ಲಿ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದಾಖಲೆ ಪ್ರಮಾಣದಲ್ಲಿ ಮಹಿಳೆಯರು ಮತದಾನ ಮಾಡಿದ್ದಾರೆ. ಇದು ಐತಿಹಾಸಿಕ ದಿನ. ಬಿಹಾರ ಚುನಾವಣೆ ವೇಳೆಯೇ ನಾನು ಹೇಳಿದ್ದೆ, ಗಂಗಾನದಿ ಬಿಹಾರದಿಂದ ಬಂಗಾಳವರೆಗೆ ಹರಿಯುತ್ತೆ ಅಂದಿದ್ದೆ. ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಕಮಲದ ಹೂವು ಮಾತ್ರ ಅರಳುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಸುನೇತ್ರಾ ಪವಾರ್ ಅವರೂ ಭರ್ಜರಿ ಜಯಭೇರಿ ಸಾಧಿಸಿದ್ದಾರೆ. ಅವರಿಗೂ ನನ್ನ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ವರ್ಷಗಳ ಧ್ಯಾನವು ಇಂದು ಯಶಸ್ಸಾಗಿ ಮಾರ್ಪಟ್ಟಿದೆ. ಬಿಜೆಪಿ ಕಾರ್ಯಕರ್ತರು ಮತ್ತೊಮ್ಮೆ ಅದ್ಭುತಗಳನ್ನ ಮಾಡಿದ್ದಾರೆ. ಕಮಲವನ್ನು ಅರಳಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.
ಇಂದು ಬಿಜೆಪಿ ಕಾರ್ಯಕರ್ತರಲ್ಲಿ ಮುಖದಲ್ಲಿ ಸಂತಸ ಕಾಣ್ತಿದೆ. ಕಾರ್ಯಕರ್ತರ ಸಂತಸದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ಇದು ದೇಶದ ಉಜ್ವಲ ಭವಿಷ್ಯದ ಘೋಷಣೆಯ ದಿನ. ಇದು ಭರವಸೆಯ ದಿನ. ನಾನು ಪಶ್ಚಿಮ ಬಂಗಾಳ, ಪುದುಚೇರಿ, ಕೇರಳಂ, ತಮಿಳುನಾಡು ಜನತೆಗೆ ನಮನಗಳನ್ನ ಸಲ್ಲಿಸುತ್ತೇನೆ. ಕೋಟಿ ಕೋಟಿ ಬಿಜೆಪಿ ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಪಶ್ಚಿಮಬಂಗಾಳದ ಸಾಂಪ್ರದಾಯಿಕ ಧೋತಿ ಧರಿಸಿರುವ ಮೋದಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.
ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದ್ದು, ಈ ಸಂಭ್ರಮವನ್ನು ಆಚರಿಸಲು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭರದ ಸಿದ್ಧತೆ ನಡೆದಿದೆ. ಕೇಂದ್ರ ಕಚೇರಿಯ ಸುತ್ತಮುತ್ತ ಈಗಾಗಲೇ ಅಪಾರ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈಗಾಗಲೇ ಆಗಮಿಸಿದ್ದಾರೆ. ಸಂಜೆ 7 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಕಚೇರಿಗೆ ಆಗಮಿಸಲಿದ್ದು, ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಬಹುಮತ. ನರೇಂದ್ರ ಮೋದಿ ನೇತೃತ್ವದ ಎನ್ಡಿಎಗೆ ಗೆಲುವು ತಂದಿದೆ ಎಂದರು.
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷವು ಭರ್ಜರಿ ಜಯಭೇರಿ ಬಾರಿಸಿದೆ. ಈ ಮಹತ್ವದ ಗೆಲುವಿನ ಬೆನ್ನಲ್ಲೇ, ಆಯ್ಕೆಯಾದ ಅಭ್ಯರ್ಥಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ರೆಸಾರ್ಟ್ಗೆ ಸ್ಥಳಾಂತರಿಸಲಾಗಿದೆ. ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ನಟ ವಿಜಯ್ ರೆಸಾರ್ಟ್ ಬುಕ್ ಮಾಡಿದ್ದಾರೆ. ಸದ್ಯ ರೆಸಾರ್ಟ್ನಲ್ಲಿರುವ ಪಕ್ಷದ ಸದಸ್ಯರೊಂದಿಗೆ ವಿಜಯ್ ಮುಂದಿನ ರಾಜಕೀಯ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಚೆಪಾಕ್ ತಿರುವಳ್ಳಿಕೇಣಿ ಕ್ಷೇತ್ರದಲ್ಲಿ ಉದಯನಿಧಿ ಸ್ಟಾಲಿನ್ ಜಯಗಳಿಸಿದ್ದಾರೆ. ಚೆಪಾಕ್ ತಿರುವಳ್ಳಿಕೇಣಿಯಲ್ಲಿ ಟಿವಿಕೆ ಪಕ್ಷದ ಸೆಲ್ವಂ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಕೇರಳಂ ವಿಧಾನಸಭಾ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಿದೆ. ಚಾತನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿ.ಬಿ.ಗೋಪಕುಮಾರ್ಗೆ ಗೆಲುವು ಸಾಧಿಸಿದ್ದು, ನೇಮಂ ವಿಧಾನಸಭಾ ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್ ಜಯ ಗಳಿಸಿದ್ದಾರೆ. ಕಝಕೂಟಂ ಕ್ಷೇತ್ರದಲ್ಲಿ ವಿ.ಮುರಳೀಧರನ್ ಕೂಡ ಭರ್ಜರಿ ಜಯ ಗಳಿಸಿದ್ದಾರೆ.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿದಿವೆ. ಹೀಗಾಗಿ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೊಳತ್ತೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ಗೆ ಸೋಲಾಗಿದೆ. ಟಿವಿಕೆ ಅಭ್ಯರ್ಥಿ ವಿ.ಎಸ್.ಬಾಬು ವಿರುದ್ಧ ಸೋಲಾಗಿದೆ.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಟಿವಿಕೆ ಸಿದ್ಧ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ತಂದೆ ಎಸ್.ಎ.ಚಂದ್ರಶೇಖರ್ ಹೇಳಿದ್ದಾರೆ. ಆ ಮೂಲಕ ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ಗೆ ಆಫರ್ ನೀಡಿದ್ದಾರೆ. ಟಿವಿಕೆಗೆ ಬಹುಮತ ಬಂದಿದ್ದಕ್ಕೆ ನನಗೆ ಬಹಳ ಸಂತೋಷವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ 2 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಹೀಗಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಪಟಾಕಿ ಸಿಡಿಸಿ ತಮಟೆ ಬಾರಿಸಿ ಕಾರ್ಯಕರ್ತರು ಸಂಭ್ರಮಿಸಿದರು.
ಕೇರಳಂ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಖಾತೆ ತೆರೆದಿದೆ. ಚಾತನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಡಿ.ಗೋಪಕುಮಾರ್ ಜಯಭೇರಿ ಸಾಧಿಸಿದ್ದಾರೆ. ಆ ಮೂಲಕ ಕೇರಳ ವಿಧಾನಸಭೆ ಇತಿಹಾಸದಲ್ಲಿ ಬಿಜೆಪಿ 2ನೇ ಗೆಲುವು ಸಾಧಿಸಿದೆ.
ಬಂಗಾಳದಲ್ಲಿ ಪ್ರಧಾನಿ ಮೋದಿಯವರ ಮ್ಯಾಜಿಕ್ ಕೆಲಸ ಮಾಡಿದೆ. ಬಿಜೆಪಿ 194 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಟಿಎಂಸಿ 92 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ಅಸನ್ಸೋಲ್ನಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಘರ್ಷಣೆ ಸಂಭವಿಸಿದೆ. ಎಣಿಕೆ ಕೇಂದ್ರದಿಂದ 200 ಮೀಟರ್ ದೂರದಲ್ಲಿ ಘರ್ಷಣೆ ಸಂಭವಿಸಿದೆ. ಆದಾಗ್ಯೂ, ಪರಿಸ್ಥಿತಿ ಉಲ್ಬಣಗೊಳ್ಳುವುದನ್ನು ಗಮನಿಸಿದ ಸ್ಥಳದಲ್ಲಿ ನಿಯೋಜಿಸಲಾದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಅಸ್ಸಾಂ ಮತ್ತು ಬಂಗಾಳದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಇದು ಐತಿಹಾಸಿಕ ಜನಾದೇಶ, ಪ್ರಧಾನಿ ಮೋದಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಮೇಲೆ ಇಟ್ಟಿರುವ ನಂಬಿಕೆಗೆ ಅಸ್ಸಾಂ ಮತ್ತು ಬಂಗಾಳದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ಅಸ್ಸಾಂ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಹೇಳಿದ್ದಾರೆ.
ಕೇರಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಪಕ್ಷದ ಮುನ್ನಡೆಯನ್ನು ಕಾಂಗ್ರೆಸ್ ಕಚೇರಿಯ ಹೊರಗೆ ಪಕ್ಷದ ಕಾರ್ಯಕರ್ತರು ಸಂಭ್ರಮಿಸಿದರು.
#WATCH | Delhi: Celebrations underway outside Congress office in Delhi.
Congress-led UDF has crossed the majority mark, according to the latest Election Commission trends. pic.twitter.com/49wCoYixL2
— ANI (@ANI) May 4, 2026
ಕೋಲ್ಕತ್ತಾ ಪೊಲೀಸರು ವಿಜಯೋತ್ಸವ ಆಚರಿಸುವುದನ್ನು ನಿಷೇಧಿಸಿದ್ದಾರೆ. ಇಂದು ನಿಗದಿಯಾಗಿದ್ದ ವಿಜಯೋತ್ಸವ ಮೆರವಣಿಗೆಗೆ ನಿಷೇಧ ಹೇರಿದ್ದಾರೆ.
ಪಶ್ಚಿಮ ಬಂಗಾಳ-ಅಸ್ಸಾಂನಲ್ಲಿ ಕಮಲ ಅರಳಿದ್ದು, ಕೇರಳದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಕಾರ್ಯಕರ್ತರು ಜಮಾಯಿಸುತ್ತಿದ್ದಾರೆ, ಬ್ಯಾಂಡ್ ನುಡಿಸುತ್ತಿದ್ದಾರೆ. ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲಾಗುತ್ತಿದೆ. ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ದಾರಿ ಮಾಡಿಕೊಟ್ಟಿದ್ದರಿಂದ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿ ತೊಡಗಿದ್ದಾರೆ.
ಎಣಿಕೆಯ ಏಜೆಂಟ್ಗಳು ಮತ್ತು ಅಭ್ಯರ್ಥಿಗಳು ಎಣಿಕೆ ಕೇಂದ್ರವನ್ನು ಬಿಟ್ಟು ಹೋಗಬಾರದು. ಇದು ಬಿಜೆಪಿಯ ಯೋಜನೆ. ನಿನ್ನೆಯಿಂದ ನಾನು ಹೇಳುತ್ತಿದ್ದೇನೆ, ಅವರಿಗೆ ಮೊದಲು ಮುಂದಿನ ಸೀಟನ್ನು ತೋರಿಸಲಾಗುವುದು. ಅವರು ಅನೇಕ ಸ್ಥಳಗಳಲ್ಲಿ ಎಣಿಕೆಯನ್ನು ನಿಲ್ಲಿಸಿದ್ದಾರೆ. ಕಲ್ಯಾಣಿಯಲ್ಲಿ ಯಂತ್ರಗಳು ಕಂಡುಬಂದಿವೆ, ಅಲ್ಲಿ ಯಾವುದೇ ಹೊಂದಾಣಿಕೆ ಇಲ್ಲ. ಕೇಂದ್ರ ಪಡೆಗಳು ಟಿಎಂಸಿಯನ್ನು ಎಲ್ಲಾ ಕಡೆಯಿಂದ ದಬ್ಬಾಳಿಕೆ ಮಾಡುತ್ತಿವೆ. ಅವರು ಎಸ್ಐಆರ್ ಮೂಲಕ ಮತಗಳನ್ನು ಕದಿಯಲು ಪ್ರಯತ್ನಿಸಿದ್ದಾರೆ, ಮತ್ತು ಈಗಲೂ ನಾವು 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುಂದಿದ್ದೇವೆ ಎಂದು ಮಮತಾ ಹೇಳಿದ್ದಾರೆ.
জরুরি বার্তা pic.twitter.com/Uc82oihwEL
— Mamata Banerjee (@MamataOfficial) May 4, 2026
हर हर महादेव 🔱🙏🏻 pic.twitter.com/PCCSf6O5rv
— Himanta Biswa Sarma (@himantabiswa) May 4, 2026
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಟ್ರೆಂಡ್ಗಳು ಬಿಜೆಪಿ 190 ಸ್ಥಾನಗಳ ಹತ್ತಿರದಲ್ಲಿದೆ ಎಂದು ತೋರಿಸುತ್ತವೆ. ಬಂಗಾಳದಲ್ಲಿ ಬಿಜೆಪಿ 200 ತಲುಪಿದರೆ, ಟಿಎಂಸಿ 100 ಕ್ಕಿಂತ ಕಡಿಮೆ ಇತ್ತು. ಇಲ್ಲಿಯವರೆಗೆ ನಾಲ್ಕು ಅಥವಾ ಐದು ಸುತ್ತುಗಳ ಎಣಿಕೆ ಪೂರ್ಣಗೊಂಡಿದೆ. ಟಿಎಂಸಿ ನಾಯಕರು ಹೇಳುವಂತೆ 15 ಸುತ್ತುಗಳು ಉಳಿದಿವೆ.
ರಾಜ್ಯದಲ್ಲಿ ಪಕ್ಷ ಮುನ್ನಡೆ ಕಾಯ್ದುಕೊಂಡಾಗ ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಅವರ ಕುಟುಂಬವು ತಮ್ಮ ನಿವಾಸದಲ್ಲಿ ಶಿಳ್ಳೆ ಹೊಡೆಯುವ ಮೂಲಕ ಸಂಭ್ರಮಿಸಿತು. ರಾಜ್ಯದಲ್ಲಿ ಒಟ್ಟು 234 ಸ್ಥಾನಗಳಲ್ಲಿ ಪ್ರಸ್ತುತ 104 ಸ್ಥಾನಗಳಲ್ಲಿ ಪಕ್ಷ ಮುನ್ನಡೆಯಲ್ಲಿದೆ.
#WATCH | Tamil Nadu Elections 2026 | Family of TVK chief and actor Vijay blow whistles and celebrate at their residence, as the party continues its lead in the state. It is currently leading on 104 of the total 234 seats in the state.
(Video Source: TVK PRO) pic.twitter.com/Ya9iT2MFNH
— ANI (@ANI) May 4, 2026
ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿಗೆ ಹಿನ್ನಡೆಯಾಗಿದೆ, ತಮಿಳುನಾಡಿನ ಕೊಲತ್ತೂರ್ ಕ್ಷೇತ್ರದಲ್ಲಿ ಎಂಕೆ ಸ್ಟಾಲಿನ್ ಹಿನ್ನಡೆಯಲ್ಲಿದ್ದಾರೆ. ಕೇರಳದಲ್ಲಿ, ಧರ್ಮಡಂನಲ್ಲಿ ಪಿಣರಾಯಿ ವಿಜಯನ್ಗೆ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಲುಕ್ಬರಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿ ಕೂಡ ತಮ್ಮ ಥಟ್ಟಂಚವಾಡಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಅವರು ಮತ ಕಳ್ಳತನದ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಮತಗಳನ್ನು ಇವಿಎಂಗಳಲ್ಲಿ ಸುರಕ್ಷಿತವಾಗಿ ಲಾಕ್ ಮಾಡಲಾಗಿದೆ. ಭದ್ರತೆ ಎಷ್ಟು ಬಿಗಿಯಾಗಿದ್ದು, ಮತ ಕಳ್ಳತನದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಂಡುಬಂದ ವಿವಿಪಿಎಟಿ ಸ್ಲಿಪ್ಗಳನ್ನು ಪರಿಶೀಲಿಸಲಾಗುತ್ತದೆ.
ರಾಜ್ಯದಲ್ಲಿ ಪಕ್ಷವು ಮುನ್ನಡೆ ಕಾಯ್ದುಕೊಂಡು ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿರುವುದರಿಂದ ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಟಿವಿಕೆ ಕಾರ್ಯಕರ್ತರು ಸಿಹಿ ಹಂಚುತ್ತಿದ್ದಾರೆ. ರಾಜ್ಯದ ಒಟ್ಟು 234 ಸ್ಥಾನಗಳಲ್ಲಿ ಅದು ಪ್ರಸ್ತುತ 109 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಬಾಗಲಕೋಟೆ ಉಪಚುನಾವಣೆ ಫಲಿತಾಂಶ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಯಭೇರಿ ಬಾರಿಸಿದ್ದಾರೆ.
ಐದು ರಾಜ್ಯಗಳಲ್ಲಿ ಇಂದು ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿವೆ. ಇಲ್ಲಿಯವರೆಗಿನ ಟ್ರೆಂಡ್ಗಳು ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದನ್ನು ಸೂಚಿಸುತ್ತಿವೆ. ಏತನ್ಮಧ್ಯೆ, ಕೇರಳದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಮಾಡುತ್ತಿದೆ. ನಟ ವಿಜಯ್ ಅವರ ಪಕ್ಷ ಟಿವಿಕೆ ತಮಿಳುನಾಡಿನಲ್ಲಿ ವಿಜಯಶಾಲಿಯಾಗಿದೆ. ಅಸ್ಸಾಂ ಮತ್ತು ಪುದುಚೇರಿಯಲ್ಲಿ ಎನ್ಡಿಎ ಚಿತ್ರಣ ಸ್ಪಷ್ಟವಾಗಿದೆ. ಇದೆಲ್ಲದರ ನಡುವೆ, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬ್ಲಡಿ ಹೆಲ್ ಎಂದು ಪೋಸ್ಟ್ ಮಾಡಿದ್ದಾರೆ.
Bloody hell 😱😱😱!!
— Omar Abdullah (@OmarAbdullah) May 4, 2026
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರದ ಸುದೀರ್ಘ ಇತಿಹಾಸವಿದೆ. ಬಂಕುರಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರು ಘರ್ಷಣೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಅವರನ್ನು ಚದುರಿಸುತ್ತಿವೆ. ಚುನಾವಣಾ ಆಯೋಗದ ಅಂಕಿಅಂಶಗಳು ಬಂಗಾಳದಲ್ಲಿ ಬಿಜೆಪಿ ಬಹುಮತವನ್ನು ಗಳಿಸುತ್ತಿದೆ ಎಂದು ತೋರಿಸುತ್ತದೆ. ಆದಾಗ್ಯೂ, ಮಮತಾ ಬ್ಯಾನರ್ಜಿ ತಮ್ಮ ಭಬಾನಿಪುರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.
ಈ ಬಾರಿ ಕೇರಳದಲ್ಲಿ ಬಿಜೆಪಿ ಸುಮಾರು ಐದು ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂದು ಊಹಿಸಲಾಗಿತ್ತು. ಚುನಾವಣಾ ಆಯೋಗದ ಡೇಟಾವನ್ನು ನೋಡಿದರೆ, ಬಿಜೆಪಿ ಕೇರಳದಲ್ಲಿ ತನ್ನ ಖಾತೆಯನ್ನು ತೆರೆಯುತ್ತಿಲ್ಲ. ತಮಿಳುನಾಡಿನಲ್ಲೂ ಇದೇ ಪರಿಸ್ಥಿತಿ ಇದೆ. ಇದು ದಕ್ಷಿಣದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ. ಮೈತ್ರಿಕೂಟಕ್ಕೆ ಸಂಬಂಧಿಸಿದಂತೆ ಎಡಿಎಂಕೆ ಮತ್ತು ಬಿಜೆಪಿ ನಡುವೆ ಗಣನೀಯ ಜಗಳವಿತ್ತು. ಪುದುಚೇರಿಯಲ್ಲಿ ಎನ್ಡಿಎ ಖಂಡಿತವಾಗಿಯೂ ಸರ್ಕಾರ ರಚಿಸುತ್ತದೆ, ಆದರೆ ಬಿಜೆಪಿ ಕೇವಲ ಎರಡು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರಿ ಬಹುಮತ ಸಿಗುತ್ತಿರುವಂತೆ ಕಾಣುತ್ತಿದೆ. ಇದುವರೆಗಿನ ಟ್ರೆಂಡ್ಗಳು ಬಿಜೆಪಿ 165 ಸ್ಥಾನಗಳಲ್ಲಿ, ಟಿಎಂಸಿ 123 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ ಎಂದು ತೋರಿಸುತ್ತಿವೆ. ಏತನ್ಮಧ್ಯೆ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಖಚಿತ. ಇಲ್ಲಿ, ಬಿಜೆಪಿ 95 ಸ್ಥಾನಗಳಲ್ಲಿ, ಕಾಂಗ್ರೆಸ್ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಕೇರಳದಲ್ಲಿ, ಕಾಂಗ್ರೆಸ್ ಮೈತ್ರಿಕೂಟ 100 ಸ್ಥಾನಗಳಲ್ಲಿ ಮತ್ತು ಎಡಪಕ್ಷ ಮೈತ್ರಿಕೂಟ 39 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ತಮಿಳುನಾಡಿನಲ್ಲಿ ಪ್ರಮುಖ ಬದಲಾವಣೆ ಗೋಚರಿಸುತ್ತಿದ್ದು, ಅಲ್ಲಿ ನಟ ವಿಜಯ್ ಅವರ ಪಕ್ಷ ಟಿವಿಕೆ 109 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಬಹುಮತದ ಗಡಿಯನ್ನು ದಾಟಿದೆ.
ತಮಿಳುನಾಡಿನಲ್ಲಿ ಟಿವಿಕೆಯ ಪ್ರಮುಖ ನಟ ವಿಜಯ್ ಅವರ ಮನೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಟ ವಿಜಯ್ ರಾಜ್ಯದಲ್ಲಿ ಗಮನಾರ್ಹ ಅಚ್ಚರಿಯನ್ನುಂಟುಮಾಡಿದ್ದಾರೆ.
ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮುಂದಿದ್ದಾರೆ. ಮೂರನೇ ಸುತ್ತಿನ ನಂತರ, ಅವರು 898 ಮತಗಳಿಂದ ಮುಂದಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯ ಹೊರಗೆ ಕಾರ್ಯಕರ್ತರು ಜಮಾಯಿಸಲು ಪ್ರಾರಂಭಿಸಿದ್ದಾರೆ. ಪ್ರಧಾನಿ ಮೋದಿ ಸಂಜೆ 6.30 ಕ್ಕೆ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ.
ಕೇರಳಂ ಫಲಿತಾಂಶದಲ್ಲಿ ಯುಡಿಎಫ್ ಮುನ್ನಡೆ ಕಾಯ್ದುಕೊಂಡಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ ಜೋರಾಗಿದೆ.
ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಸಂಕಷ್ಟದಲ್ಲಿರುವಂತೆ ಕಾಣುತ್ತಿದೆ. ಇಲ್ಲಿಯವರೆಗಿನ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಹಿಂದುಳಿದಿದೆ ಎಂದು ತೋರಿಸುತ್ತಿವೆ. ಪರಿಸ್ಥಿತಿ ಹೇಗಿದೆ ಎಂದರೆ ಪ್ರಮುಖ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ತಮ್ಮದೇ ಕ್ಷೇತ್ರದಲ್ಲಿ ಹಿಂದುಳಿದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚಿಸುವ ಬಿಜೆಪಿ ಬಹುದಿನಗಳ ಕನಸು ಕಂಡಿತ್ತು. ಆದಾಗ್ಯೂ, ಈ ಬಾರಿ ಅದರ ಕನಸು ನನಸಾಗುವ ಲಕ್ಷಣ ಕಾಣುತ್ತಿದೆ. ಮೊದಲ ಬಾರಿಗೆ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಕೋಲ್ಕತ್ತಾ ಸೇರಿದಂತೆ ಹಲವು ಸ್ಥಳಗಳಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಟಿಎಂಸಿ ನಾಯಕರು ಇನ್ನೂ ಭರವಸೆಯಲ್ಲಿದ್ದಾರೆ.
ಕೊಳತ್ತೂರಿನಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ಗೆ ಹಿನ್ನಡೆಯಾಗಿದೆ. ಸ್ಟಾಲಿನ್ ಅವರ ಪುತ್ರ ಕೂಡ ತಮ್ಮ ಸ್ಥಾನದಲ್ಲಿ ಹಿನ್ನಡೆ ಅನುಭವಿಸುತ್ತಿರುವುದು ರಾಜ್ಯದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಧರ್ಮಡಂ ಕ್ಷೇತ್ರದಲ್ಲಿ 2,000 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ. ಎಲ್ಡಿಎಫ್ ಈಗಾಗಲೇ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕಿಂತ ಹಿಂದಿದೆ.
ಬಂಗಾಳದಲ್ಲಿ ಬಿಜೆಪಿ ಬಹುಮತದತ್ತ ಧಾಪುಗಾಲು, ತಮಿಳುನಾಡಿನಲ್ಲಿ ಶತಕ ಬಾರಿಸಿದ ದಳಪತಿ ವಿಜಯ್
ಪಶ್ಚಿಮ ಮೇದಿನಿಪುರ ಜಿಲ್ಲೆಯ ಖರಗ್ಪುರ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ ಮುನ್ನಡೆಯಲ್ಲಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯ ಬಾಗ್ಡಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಮ ಠಾಕೂರ್ ಮುನ್ನಡೆಯಲ್ಲಿದ್ದಾರೆ. ಮಾಲ್ಡಾ ಜಿಲ್ಲೆಯ ಮಾಲತಿಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೌಸಮ್ ನೂರ್ ಮುನ್ನಡೆ ಸಾಧಿಸಿದ್ದಾರೆ.
ಪಶ್ಚಿಮ ಬಂಗಾಳದ ನಂದಿಗ್ರಾಮ್ ಮತ್ತು ಭವಾನಿಪುರದ ಎಲ್ಒಪಿ ಮತ್ತು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಮಾತನಾಡಿ, ನಂದಿಗ್ರಾಮ್ನ ಮುಸ್ಲಿಂ ಬೂತ್ನಲ್ಲಿ ಇಷ್ಟೊಂದು ಉತ್ತಮ ಪ್ರದರ್ಶನವನ್ನು ನಾನು ನಿರೀಕ್ಷಿಸಿರಲಿಲ್ಲ,ಪ್ರಧಾನಿ ಮೋದಿ ತಮ್ಮ ನಾಯಕತ್ವದಲ್ಲಿ ಬಂಗಾಳವನ್ನು ನಿರ್ಮಿಸುವುದಾಗಿ ನೀಡಿದ ಭರವಸೆ ಫಲಕೊಟ್ಟಿದೆ ಎಂದರು.
ಬಂಗಾಳ ಮತ್ತು ಕೇರಳದಲ್ಲಿ ಅಧಿಕಾರ ಬದಲಾವಣೆಯ ಲಕ್ಷಣಗಳು ಗೋಚರಿಸುತ್ತಿವೆ. ಕೇರಳದಲ್ಲಿ, ಎಲ್ಡಿಎಫ್ 50 ಸ್ಥಾನಗಳಲ್ಲಿ ಹಿಂದುಳಿದಿದ್ದರೆ, ಕಾಂಗ್ರೆಸ್ ಮೈತ್ರಿಕೂಟ 84 ಸ್ಥಾನಗಳಲ್ಲಿ ಮುಂದಿದೆ. ಇದಲ್ಲದೆ, ಬಂಗಾಳದಲ್ಲಿ, ಬಿಜೆಪಿ 139 ಸ್ಥಾನಗಳಲ್ಲಿ ಮತ್ತು ಟಿಎಂಸಿ 103 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂನಲ್ಲಿ, ಬಿಜೆಪಿ 83 ಸ್ಥಾನಗಳಲ್ಲಿ ಮುಂದಿದ್ದರೆ, ಕಾಂಗ್ರೆಸ್ ಮೈತ್ರಿಕೂಟ ಕೇವಲ 27 ಸ್ಥಾನಗಳಲ್ಲಿ ಮುಂದಿದೆ. ಪರಿಣಾಮವಾಗಿ, ಅಸ್ಸಾಂನಲ್ಲಿ ಬಿಜೆಪಿ ಗೆಲುವು ಖಚಿತವಾಗಿದೆ.
ಈ ಬಾರಿ ತಮಿಳುನಾಡಿನಲ್ಲಿ ನಟ ವಿಜಯ್ ಅವರನ್ನು ಪ್ರಮುಖ ಸ್ಪರ್ಧಿ ಎಂದು ಪರಿಗಣಿಸಲಾಗಿತ್ತು. ಆದಾಗ್ಯೂ, ಅವರು ಒಂದು ಸ್ಥಾನದಿಂದ ಹಿಂದುಳಿದಿದ್ದಾರೆ. ಪೆರಂಬೂರಿನಲ್ಲಿ ಅವರು ಮುನ್ನಡೆ ಸಾಧಿಸುತ್ತಿದ್ದಾರೆ. ಬಂಗಾಳದಲ್ಲಿ, ಟಿಎಂಸಿ ಪ್ರಸ್ತುತ 58 ಸ್ಥಾನಗಳಲ್ಲಿ ಮತ್ತು ಬಿಜೆಪಿ 60 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.ಕಾಂಗ್ರೆಸ್ ಮೈತ್ರಿಕೂಟ 3 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಇತರರು 2 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯುತ್ತಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಫಲಿತಾಂಶ, 2ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ಗೆ 2,707 ಮತಗಳ ಮುನ್ನಡೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ನ ಸಮರ್ಥ್ಗೆ ಹಿನ್ನಡೆ, ಸಮರ್ಥ್ಗೆ 6,360 ಮತಗಳು, ಶ್ರೀನಿವಾಸ್ಗೆ 9134 ಮತಗಳು ಸಿಕ್ಕಿವೆ.
ಐದು ರಾಜ್ಯಗಳ ವಿಧಾನಸಭಾ ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ. ಚುನಾವಣಾ ಆಯೋಗದ ಅಧಿಕೃತ ಟ್ರೆಂಡ್ಗಳನ್ನು ನೋಡಿದರೆ, ಅಸ್ಸಾಂನಲ್ಲಿ ಬಿಜೆಪಿ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸುತ್ತಿದೆ, ಆದರೆ ಕಾಂಗ್ರೆಸ್ ಕೂಡ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸುತ್ತಿದೆ. ಕೇರಳದಲ್ಲಿ ಕಾಂಗ್ರೆಸ್ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಸಿಪಿಐ(ಎಂ) 4 ಸ್ಥಾನಗಳಲ್ಲಿ, ಸಿಪಿಐ 2 ಸ್ಥಾನಗಳಲ್ಲಿ ಮತ್ತು ಆರ್ಎಸ್ಪಿ 1 ಸ್ಥಾನದಲ್ಲಿ ಮುನ್ನಡೆ ಸಾಧಿಸುತ್ತಿದೆ. ಪುದುಚೇರಿಯಲ್ಲಿ ಎಡಿಎಂಕೆ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡಿನಲ್ಲಿ ಟಿವಿಕೆ 2 ಸ್ಥಾನಗಳಲ್ಲಿ ಮತ್ತು ಸಿಪಿಐ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ, ಬಿಜೆಪಿ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಬಂಗಾಳದಲ್ಲಿ ಬಿಜೆಪಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಆರಂಭಿಕ ಟ್ರೆಂಡ್ಗಳು ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಹಿನ್ನಡೆಯಲ್ಲಿದ್ದರೆ, ಸುವೇಂದು ಅಧಿಕಾರಿ ಮುನ್ನಡೆಯಲ್ಲಿದ್ದಾರೆ.
ಯುಡಿಎಫ್ 77 ಸ್ಥಾನಗಳಲ್ಲಿ ಮುನ್ನಡೆ, ಎಲ್ ಡಿಎಫ್ 56 ಸ್ಥಾನಗಳಲ್ಲಿ ಮುನ್ನಡೆ, ಎನ್ ಡಿಎ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.ಕೇರಳಂ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮಿಸುತ್ತಿದ್ದಾರೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ 3207 ಮತಗಳ ಮುನ್ನಡೆ. ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಹಿನ್ನಡೆ. ಉಮೇಶ್ ಮೇಟಿಗೆ 6106, ವೀರಣ್ಣ ಚರಂತಿಮಠಗೆ 2899 ಮತಗಳು.
ಈ ಬಾರಿ ತಮಿಳುನಾಡಿನಲ್ಲಿ ನಟ ವಿಜಯ್ ಅವರನ್ನು ಪ್ರಮುಖ ಸ್ಪರ್ಧಿ ಎಂದು ಪರಿಗಣಿಸಲಾಗಿತ್ತು. ಆದಾಗ್ಯೂ, ಅವರು ಒಂದು ಸ್ಥಾನದಿಂದ ಹಿಂದುಳಿದಿದ್ದಾರೆ. ಪೆರಂಬೂರಿನಲ್ಲಿ ಅವರು ಮುನ್ನಡೆ ಸಾಧಿಸುತ್ತಿದ್ದಾರೆ. ಬಂಗಾಳದಲ್ಲಿ, ಟಿಎಂಸಿ ಪ್ರಸ್ತುತ 58 ಸ್ಥಾನಗಳಲ್ಲಿ ಮತ್ತು ಬಿಜೆಪಿ 60 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
ಐದು ರಾಜ್ಯಗಳಲ್ಲಿ ಈಗ ಇವಿಎಂಗಳನ್ನು ತೆರೆಯಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ, ಟಿಎಂಸಿ 103 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ, ಆದರೆ ಬಿಜೆಪಿ 103 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಅಸ್ಸಾಂನ 126 ಸ್ಥಾನಗಳಲ್ಲಿ, ಬಿಜೆಪಿ 61 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ, ಆದರೆ ಕಾಂಗ್ರೆಸ್ ಕೇವಲ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಕೇರಳದಲ್ಲಿ, ಎಡ ಮೈತ್ರಿಕೂಟ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ, ಆದರೆ ಕಾಂಗ್ರೆಸ್ ಮೈತ್ರಿಕೂಟ 71 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ತಮಿಳುನಾಡಿನಲ್ಲಿ, ಡಿಎಂಕೆ 104 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದರೆ, ಎಐಎಡಿಎಂಕೆ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಪುದುಚೇರಿಯಲ್ಲಿ, ಬಿಜೆಪಿ 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದರೆ, ಕಾಂಗ್ರೆಸ್ ಮೈತ್ರಿಕೂಟ 06 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಲ್ಲಿ ಬಿಜೆಪಿ ಮುನ್ನಡೆ, ಅಸ್ಸಾಂನಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ.
ಈ ಬಾರಿ ಕೇರಳ ಎಲ್ಡಿಎಫ್ ಕೈಯಿಂದ ಜಾರಿದರೆ, 1960 ರ ದಶಕದ ನಂತರ ಭಾರತದ ಯಾವುದೇ ರಾಜ್ಯದಲ್ಲಿ ಎಡ ಪಕ್ಷಗಳು ಅಧಿಕಾರದಲ್ಲಿಲ್ಲದಿರುವುದು ಇದೇ ಮೊದಲು. ರಾಜ್ಯದ 140 ಸ್ಥಾನಗಳಿಗೆ ಒಟ್ಟು 883 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 43 ಸ್ಥಳಗಳಲ್ಲಿ 140 ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 140 ಚುನಾವಣಾಧಿಕಾರಿಗಳು, 1,340 ಹೆಚ್ಚುವರಿ ಚುನಾವಣಾಧಿಕಾರಿಗಳು, 4,208 ಸೂಕ್ಷ್ಮ ವೀಕ್ಷಕರು, 4,208 ಎಣಿಕೆ ಮೇಲ್ವಿಚಾರಕರು ಮತ್ತು 5,563 ಎಣಿಕೆ ಸಹಾಯಕರು ಸೇರಿದಂತೆ 15,464 ಸಿಬ್ಬಂದಿಯನ್ನು ಈ ಕೆಲಸಕ್ಕಾಗಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಕ್ಸಿಸ್ ಮೈ ಇಂಡಿಯಾ ಈ ಬಾರಿ ನಿರ್ಗಮನ ಸಮೀಕ್ಷೆಗಳನ್ನು ಬಿಡುಗಡೆ ಮಾಡಿಲ್ಲದಿರಬಹುದು, ಆದರೆ ನಿರ್ಗಮನ ಸಮೀಕ್ಷೆಗಳು ಬಿಜೆಪಿ ಗೆಲುವನ್ನು ಭವಿಷ್ಯ ನುಡಿದಿವೆ. ಶೇಕಡಾ 70 ರಷ್ಟು ಮತದಾರರು ಸಮೀಕ್ಷೆಗೆ ಉತ್ತರಿಸಲು ನಿರಾಕರಿಸಿದ್ದಾರೆ, ಇದರಿಂದಾಗಿ ನಿಖರವಾದ ಅಂಕಿಅಂಶಗಳನ್ನು ಪಡೆಯುವುದು ಕಷ್ಟಕರವಾಗಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಅಧ್ಯಕ್ಷ ಪ್ರದೀಪ್ ಗುಪ್ತಾ ಹೇಳಿದ್ದಾರೆ.
ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಮುನ್ನಡೆ, ಖರಗ್ಪುರದಲ್ಲಿ ಬಿಜೆಪಿಯ ದಿಲೀಪ್ ಘೋಷ್ ಮುನ್ನಡೆ, ಅಧೀರ್ ರಂಜನ್ ಚೌಧರಿ ಬಹರಂಪುರದಲ್ಲಿ ಹಿನ್ನಡೆ,ಸುವೆಂದು ಅಧಿಕಾರಿ ಭವಾನಿಪುರದಲ್ಲಿ ಹಿನ್ನಡೆ, ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ಮುನ್ನಡೆ.
ಆರಂಭಿಕ ಟ್ರೆಂಡ್ಗಳಲ್ಲಿ ಬಿಜೆಪಿ ಈಗ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದರೆ, ಟಿಎಂಸಿ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗುತ್ತಿದ್ದಂತೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜಲೇಬಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಐದು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆಯೂ ಇಂದು ನಡೆಯುತ್ತಿದೆ.
#WATCH | Delhi: Jalebis are being prepared at the BJP Headquarters in Delhi as counting of votes for the elections to the Assemblies of Assam, Keralam, Tamil Nadu, West Bengal and Puducherry begins.
Counting of votes for by-polls in seven Assembly constituencies of five… pic.twitter.com/9zBuvWQnfz
— ANI (@ANI) May 4, 2026
ತಮಿಳುನಾಡಿನಲ್ಲಿ ಐದು ಸ್ಥಾನಗಳಲ್ಲಿ ಡಿಎಂಕೆ ಮುನ್ನಡೆ, ಎಐಎಡಿಎಂಕೆ ಒಂದು ಸ್ಥಾನದಲ್ಲಿ ಮತ್ತು ಟಿ-ವಿಕೆ ಕೂಡ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಅಂಬಲ್ಪುಳ ಕ್ಷೇತ್ರದಲ್ಲಿ ಸಿಪಿಐ(ಎಂ) ಅಭ್ಯರ್ಥಿ ಎಚ್. ಸಲಾಂ ಮುನ್ನಡೆಯಲ್ಲಿದ್ದಾರೆ, ಕೊಚ್ಚಿಯಲ್ಲಿ ಪಕ್ಷದ ಅಭ್ಯರ್ಥಿ ಕೆ.ಜೆ. ಮ್ಯಾಕ್ಸಿ ಮುನ್ನಡೆಯಲ್ಲಿದ್ದಾರೆ.
ಚೋಪ್ರಾ ಮತ್ತು ಇಸ್ಲಾಂಪುರದಲ್ಲಿ ಟಿಎಂಸಿ ಮುನ್ನಡೆ ಸಾಧಿಸುತ್ತಿದ್ದರೆ, ಮಥಬಂಗಾ-ಅಲಿಪುರ್ದೂರ್ನಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಬಿಜೆಪಿ 8 ಸ್ಥಾನಗಳಲ್ಲಿ ಮತ್ತು ಟಿಎಂಸಿ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಅಸ್ಸಾಂನಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಇನ್ನೂ ಯಾವುದೇ ಸ್ಥಾನದಲ್ಲಿ ಮುನ್ನಡೆ ಸಾಧಿಸಿಲ್ಲ. ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದೆ.
ಪಶ್ಚಿಮ ಬಂಗಾಳ ಚುನಾವಣೆ 2026 ರಲ್ಲಿ ಖರಗ್ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ ಮಾತನಾಡಿ, ಇಲ್ಲಿನ ಜನರು ಬದಲಾವಣೆಯನ್ನು ಬಯಸುತ್ತಾರೆ. ಬಿಜೆಪಿ ಉತ್ತಮ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ ಎಂದರು.
ಟಿಎಂಸಿ ಎರಡು ಹಾಗೂ ಬಿಜೆಪಿ ಎರಡು ಸ್ಥಾನಗಳಲ್ಲಿ ಮುನ್ನಡೆ, ಚೋಪ್ರಾ ಮತ್ತು ಇಸ್ಲಾಂಪುರದಲ್ಲಿ ಟಿಎಂಸಿ ಮುನ್ನಡೆ ಸಾಧಿಸುತ್ತಿದ್ದರೆ, ಮಥಬಂಗಾ-ಅಲಿಪುರ್ದೂರ್ನಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ.
ಕೇರಳದಲ್ಲಿ ಸ್ಪರ್ಧೆಯೂ ಕುತೂಹಲಕಾರಿಯಾಗಿದೆ. ಪಿಣರಾಯಿ ವಿಜಯನ್ ನೇತೃತ್ವದ ಎಡರಂಗವು ಸತತ ಮೂರನೇ ಅವಧಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ, ಇದು ಹಿಂದೆಂದೂ ಸಾಧಿಸದ ಸಾಧನೆಯಾಗಿದೆ. ಆದಾಗ್ಯೂ, ಇಲ್ಲಿ ಸ್ಪರ್ಧೆ ತೀವ್ರವಾಗಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸುಮಾರು 72 ಸ್ಥಾನಗಳನ್ನು ಗೆಲ್ಲಬಹುದು.
2026ರ ಪಂಚರಾಜ್ಯ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಮತ ಎಣಿಕೆ ಈಗಾಗಲೇ ಆರಂಭವಾಗಿದೆ. ಮೊದಲು ಅಂಚೆ ಮತಪತ್ರಗಳ ಎಣಿಕೆ ನಡೆಯುತ್ತಿದೆ.
ಜೋರ್ಹತ್, ಮರಿಯಾನಿ ಮತ್ತು ಟಿಟಾಬೋರ್ ಸ್ಥಾನಗಳಿಗೆ ಎಣಿಕೆ ನಡೆಯುತ್ತಿದೆ, ಅಸ್ಸಾಂನ ಜೋರ್ಹತ್ನಲ್ಲಿರುವ ಎಣಿಕೆ ಕೇಂದ್ರದ ವೀಡಿಯೊ ಇಲ್ಲಿದೆ
#WATCH असम विधानसभा चुनाव 2026 | असम: वीडियो जोरहाट में एक काउंटिंग सेंटर के बाहर से है। जोरहाट, मरियानी और टिटाबोर विधानसभा सीटों के लिए वोटों की गिनती यहीं होगी।
126 विधानसभा सीटों के लिए वोटों की गिनती सुबह 8 बजे से शुरू होगी। pic.twitter.com/h2bzFnu2nA
— ANI_HindiNews (@AHindinews) May 4, 2026
ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಅವರು ರಾಜ್ಯದ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಕುರಿತು ಪ್ರಮುಖ ಮಾಹಿತಿಯನ್ನು ನೀಡಿದ್ದಾರೆ. ಎಲ್ಲೆಡೆ ವ್ಯವಸ್ಥೆಗಳು ಸ್ಥಿರವಾಗಿವೆ, ಮೂರು ಹಂತದ ಭದ್ರತಾ ವ್ಯವಸ್ಥೆ ಜಾರಿಯಲ್ಲಿದೆ ಎಂದು ಅವರು ಹೇಳಿದ್ದಾರೆ.
ಅಸ್ಸಾಂ ವಿಧಾನಸಭಾ ಚುನಾವಣೆ 2026 ರ ಮತ ಎಣಿಕೆ ಸೋಮವಾರ ರಾಜ್ಯಾದ್ಯಂತ ಬಿಗಿ ಭದ್ರತೆಯ ನಡುವೆ ಆರಂಭವಾಗಲಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬರುತ್ತದೆಯೇ ಅಥವಾ ವಿರೋಧ ಮೈತ್ರಿಕೂಟ ಗಮನಾರ್ಹ ಮುನ್ನಡೆ ಸಾಧಿಸುತ್ತದೆಯೇ ಎಂಬುದನ್ನು ಫಲಿತಾಂಶಗಳು ನಿರ್ಧರಿಸುತ್ತವೆ.
ತಮಿಳುನಾಡಿನಲ್ಲಿ ಮುಂದಿನ ಸರ್ಕಾರ ಯಾರು ರಚಿಸುತ್ತಾರೆ ಎಂಬುದು ಫಲಿತಾಂಶಗಳು ಹೊರಬಂದ ಕೆಲವೇ ದಿನಗಳಲ್ಲಿ ಸ್ಪಷ್ಟವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಸಮಯದಲ್ಲಿ ದಾಖಲೆಯ ಶೇಕಡಾ 85.1 ರಷ್ಟು ಮತದಾನ ದಾಖಲಾಗಿದೆ. ಸಾಮಾನ್ಯವಾಗಿ, ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ನೇರ ಸ್ಪರ್ಧೆ ಇತ್ತು. ಈ ಬಾರಿ ನಟ ವಿಜಯ್ ಅವರ ಪಕ್ಷ ಟಿವಿಕೆ ಕೂಡ ಕಣದಲ್ಲಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಮೈತ್ರಿಕೂಟವು ಮುನ್ನಡೆಯಲ್ಲಿದೆ ಮತ್ತು 120 ರಿಂದ 145 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಂದಾಜಿಸಲಾಗಿದೆ.
ಚೆನ್ನೈನಲ್ಲಿರುವ ಡಿಎಂಕೆ ಪ್ರಧಾನ ಕಚೇರಿ ಅಣ್ಣಾ ಅರಿವಲಯಂನ ಹೊರಗಿನಿಂದ ವೀಡಿಯೊ ಇಲ್ಲಿದೆ.
#WATCH तमिलनाडु विधानसभा चुनाव | वीडियो चेन्नई में DMK हेडक्वार्टर अन्ना अरिवालयम के बाहर से है।
राज्य की 234 विधानसभा सीटों के लिए वोटों की गिनती आज सुबह 8 बजे शुरू होगी। pic.twitter.com/LQzt2CNtrq
— ANI_HindiNews (@AHindinews) May 4, 2026
ಕೋಲ್ಕತ್ತಾದ ಭವಾನಿಪುರದಲ್ಲಿ ಮತ ಎಣಿಕೆಗೂ ಮುನ್ನ ಸಣ್ಣಪುಟ್ಟ ಗದ್ದಲ ಕಂಡುಬಂದಿದೆ. ಸ್ಥಳದಲ್ಲಿ ಭದ್ರತಾ ಪಡೆಗಳು ಹಾಜರಿವೆ.
ನಂದಿಗ್ರಾಮದಲ್ಲಿ ತೃಣಮೂಲ ಗೆಲ್ಲುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ನಂದಿಗ್ರಾಮದ ಟಿಎಂಸಿ ಅಭ್ಯರ್ಥಿ ಪವಿತ್ರಾ ಕರ್ ಹೇಳಿದ್ದಾರೆ.
ಇಂದು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಸುಭಾಷ್ ಚಂದ್ರ ಬೋಸ್ ಒಳಾಂಗಣ ಮೈದಾನದಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ರಾಜಧಾನಿ ಕೋಲ್ಕತ್ತಾದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ರಾಜ್ಯ ಪೊಲೀಸರ ಜತೆ CRPF ಪೊಲೀಸರ ಬಿಗಿ ಬಂದೋಬಸ್ತ್ ಇದ್ದು, 1500ಕ್ಕೂ ಹೆಚ್ಚು ಸಿಬ್ಬಂದಿಯ ನಿಯೋಜನೆ ಮಾಡಲಾಗಿದೆ. ಪೋಲಿಂಗ್ ಏಜೆಂಟ್ಗೆ QR ಕೋಡ್ ಆಧರಿಸಿ ಪರಿಶೀಲನೆ ಮಾಡಲಾಗುತ್ತಿದೆ.ಭದ್ರತಾ ಕಾರಣದಿಂದಾಗಿ 294 ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳನ್ನು 77ಕ್ಕೆ ಇಳಿಸಲಾಗಿದೆ.
Published On - 6:48 am, Mon, 4 May 26