AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Election 2021: ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್, ಬೆಂಗಾವಲು ಪಡೆ​ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ದಾಳಿ

ಮತ ಪ್ರಚಾರದಲ್ಲಿ ತೊಡಗಿದ್ದ ಪಾಯಲ್​​ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಳಿ ನಡೆದ ಸ್ಥಳದ ಫೋಟೋಗಳೂ ಕೂಡ ವೈರಲ್ ಆಗುತ್ತಿವೆ.

West Bengal Election 2021: ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್, ಬೆಂಗಾವಲು ಪಡೆ​ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ದಾಳಿ
ಪ್ರಚಾರದ ಸಂದರ್ಭದಲ್ಲಿ ಪಾಯಲ್​ ಬೆಂಬಲಿಗರ ಮೇಲೆ ಸಹ ದಾಳಿ ನಡೆದಿದೆ (ಫೋಟೋ ಕೃಪೆ: ಪಾಯಲ್​ ಸರ್ಕಾರ್​ ಟ್ವಿಟರ್​)
Lakshmi Hegde
|

Updated on:Apr 04, 2021 | 4:03 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಹಿಂಸೆ, ಹೊಡೆದಾಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಅಲ್ಲೀಗ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಏಪ್ರಿಲ್​ 6ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಮತದಾನಕ್ಕೆ ಇನ್ನೊಂದೇ ದಿನ ಬಾಕಿ ಇರುವಾಗ ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್ ಅವರ ಮೇಲೆ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬೆಹಾಲಾದ ಠಾಕೂರ್​ಪುರದಲ್ಲಿ ಘಟನೆ ನಡೆದಿದ್ದು, ಪಾಯಲ್​ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

ಮತ ಪ್ರಚಾರದಲ್ಲಿ ತೊಡಗಿದ್ದ ಪಾಯಲ್​​ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಳಿ ನಡೆದ ಸ್ಥಳದ ಫೋಟೋಗಳೂ ಕೂಡ ವೈರಲ್ ಆಗುತ್ತಿವೆ. ಬಿಜೆಪಿ ಇದುವರೆಗೆ ಈ ಬಗ್ಗೆ ಯಾವುದೇ ಹೇಳಿಕೆಯನ್ನೂ ಬಿಡುಗಡೆ ಮಾಡಿಲ್ಲ.

ನಟಿ ಪಾಯಲ್ ಸರ್ಕಾರ್​ ಅವರು ಫೆಬ್ರವರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನಗೆ ರಾಜಕೀಯದಲ್ಲಿ ಆಸಕ್ತಿ ಇದೆ. ಆದರೆ ನಾನು ಸಕ್ರಿಯವಾಗಿರಲಿಲ್ಲ. ಆದರೆ ಬಿಜೆಪಿ ಸಿದ್ಧಾಂತ ನನಗೆ ಹೆಚ್ಚು ಆಪ್ತ ಎನಿಸುವ ಕಾರಣ ನಾನು ಆ ಪಕ್ಷ ಸೇರುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು. ಪಾಯಲ್​ಗೆ ಕೇಂದ್ರ ಸರ್ಕಾರ Y ಶ್ರೇಣಿಯ ಭದ್ರತೆಯನ್ನು ನೀಡಿತ್ತು. ಅದಾದ ಬಳಿಕ ಮಾರ್ಚ್​ನಲ್ಲಿ ಪಾಯಲ್​ ಸೇರಿ ಒಟ್ಟು ಐವರು ಮುಖಂಡರಿಗೆ ಸಿಐಎಸ್​ಎಫ್​ ಶ್ರೇಣಿಯ ಭದ್ರತೆಯನ್ನು ನೀಡಲಾಗಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಾಯಲ್ ಪೂರ್ವ ಬೆಹಾಲಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇವರ ವಿರುದ್ಧ ತೃಣಮೂಲ ಕಾಂಗ್ರೆಸ್ನ ರತ್ನಾ ಚಟರ್ಜಿ ಕಣಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: Body Shaming; ಸುಮ್ಮನಿರುವುದು ಹೇಗೆ? : ಕಪ್ಪು ರೇಷಿಮೆ ಸೀರೆಯನ್ನೇ ಆರತಕ್ಷತೆಗೆ ಆಯ್ಕೆ ಮಾಡಿಕೊಂಡಿದ್ದೆ 

West Bengal Election 2021: ‘ದೀದಿ.. ಜನರ ನಂಬಿಕೆಗೆ ದ್ರೋಹ ಮಾಡಿದ ನೀವು ಸೋಲನ್ನು ಒಪ್ಪಿಕೊಳ್ಳಲೇಬೇಕು’-ಹೂಗ್ಲಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

Published On - 4:00 pm, Sun, 4 April 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ