AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Election 2021: ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್, ಬೆಂಗಾವಲು ಪಡೆ​ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ದಾಳಿ

ಮತ ಪ್ರಚಾರದಲ್ಲಿ ತೊಡಗಿದ್ದ ಪಾಯಲ್​​ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಳಿ ನಡೆದ ಸ್ಥಳದ ಫೋಟೋಗಳೂ ಕೂಡ ವೈರಲ್ ಆಗುತ್ತಿವೆ.

West Bengal Election 2021: ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್, ಬೆಂಗಾವಲು ಪಡೆ​ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ದಾಳಿ
ಪ್ರಚಾರದ ಸಂದರ್ಭದಲ್ಲಿ ಪಾಯಲ್​ ಬೆಂಬಲಿಗರ ಮೇಲೆ ಸಹ ದಾಳಿ ನಡೆದಿದೆ (ಫೋಟೋ ಕೃಪೆ: ಪಾಯಲ್​ ಸರ್ಕಾರ್​ ಟ್ವಿಟರ್​)
Lakshmi Hegde
|

Updated on:Apr 04, 2021 | 4:03 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಹಿಂಸೆ, ಹೊಡೆದಾಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಅಲ್ಲೀಗ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಏಪ್ರಿಲ್​ 6ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಮತದಾನಕ್ಕೆ ಇನ್ನೊಂದೇ ದಿನ ಬಾಕಿ ಇರುವಾಗ ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್ ಅವರ ಮೇಲೆ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬೆಹಾಲಾದ ಠಾಕೂರ್​ಪುರದಲ್ಲಿ ಘಟನೆ ನಡೆದಿದ್ದು, ಪಾಯಲ್​ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

ಮತ ಪ್ರಚಾರದಲ್ಲಿ ತೊಡಗಿದ್ದ ಪಾಯಲ್​​ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಳಿ ನಡೆದ ಸ್ಥಳದ ಫೋಟೋಗಳೂ ಕೂಡ ವೈರಲ್ ಆಗುತ್ತಿವೆ. ಬಿಜೆಪಿ ಇದುವರೆಗೆ ಈ ಬಗ್ಗೆ ಯಾವುದೇ ಹೇಳಿಕೆಯನ್ನೂ ಬಿಡುಗಡೆ ಮಾಡಿಲ್ಲ.

ನಟಿ ಪಾಯಲ್ ಸರ್ಕಾರ್​ ಅವರು ಫೆಬ್ರವರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನಗೆ ರಾಜಕೀಯದಲ್ಲಿ ಆಸಕ್ತಿ ಇದೆ. ಆದರೆ ನಾನು ಸಕ್ರಿಯವಾಗಿರಲಿಲ್ಲ. ಆದರೆ ಬಿಜೆಪಿ ಸಿದ್ಧಾಂತ ನನಗೆ ಹೆಚ್ಚು ಆಪ್ತ ಎನಿಸುವ ಕಾರಣ ನಾನು ಆ ಪಕ್ಷ ಸೇರುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು. ಪಾಯಲ್​ಗೆ ಕೇಂದ್ರ ಸರ್ಕಾರ Y ಶ್ರೇಣಿಯ ಭದ್ರತೆಯನ್ನು ನೀಡಿತ್ತು. ಅದಾದ ಬಳಿಕ ಮಾರ್ಚ್​ನಲ್ಲಿ ಪಾಯಲ್​ ಸೇರಿ ಒಟ್ಟು ಐವರು ಮುಖಂಡರಿಗೆ ಸಿಐಎಸ್​ಎಫ್​ ಶ್ರೇಣಿಯ ಭದ್ರತೆಯನ್ನು ನೀಡಲಾಗಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಾಯಲ್ ಪೂರ್ವ ಬೆಹಾಲಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇವರ ವಿರುದ್ಧ ತೃಣಮೂಲ ಕಾಂಗ್ರೆಸ್ನ ರತ್ನಾ ಚಟರ್ಜಿ ಕಣಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: Body Shaming; ಸುಮ್ಮನಿರುವುದು ಹೇಗೆ? : ಕಪ್ಪು ರೇಷಿಮೆ ಸೀರೆಯನ್ನೇ ಆರತಕ್ಷತೆಗೆ ಆಯ್ಕೆ ಮಾಡಿಕೊಂಡಿದ್ದೆ 

West Bengal Election 2021: ‘ದೀದಿ.. ಜನರ ನಂಬಿಕೆಗೆ ದ್ರೋಹ ಮಾಡಿದ ನೀವು ಸೋಲನ್ನು ಒಪ್ಪಿಕೊಳ್ಳಲೇಬೇಕು’-ಹೂಗ್ಲಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

Published On - 4:00 pm, Sun, 4 April 21

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು