West Bengal Election 2021: ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್, ಬೆಂಗಾವಲು ಪಡೆ​ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ದಾಳಿ

ಮತ ಪ್ರಚಾರದಲ್ಲಿ ತೊಡಗಿದ್ದ ಪಾಯಲ್​​ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಳಿ ನಡೆದ ಸ್ಥಳದ ಫೋಟೋಗಳೂ ಕೂಡ ವೈರಲ್ ಆಗುತ್ತಿವೆ.

West Bengal Election 2021: ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್, ಬೆಂಗಾವಲು ಪಡೆ​ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ದಾಳಿ
ಪ್ರಚಾರದ ಸಂದರ್ಭದಲ್ಲಿ ಪಾಯಲ್​ ಬೆಂಬಲಿಗರ ಮೇಲೆ ಸಹ ದಾಳಿ ನಡೆದಿದೆ (ಫೋಟೋ ಕೃಪೆ: ಪಾಯಲ್​ ಸರ್ಕಾರ್​ ಟ್ವಿಟರ್​)
Follow us
|

Updated on:Apr 04, 2021 | 4:03 PM

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಹಿಂಸೆ, ಹೊಡೆದಾಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಅಲ್ಲೀಗ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಏಪ್ರಿಲ್​ 6ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಮತದಾನಕ್ಕೆ ಇನ್ನೊಂದೇ ದಿನ ಬಾಕಿ ಇರುವಾಗ ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್ ಅವರ ಮೇಲೆ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬೆಹಾಲಾದ ಠಾಕೂರ್​ಪುರದಲ್ಲಿ ಘಟನೆ ನಡೆದಿದ್ದು, ಪಾಯಲ್​ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

ಮತ ಪ್ರಚಾರದಲ್ಲಿ ತೊಡಗಿದ್ದ ಪಾಯಲ್​​ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಳಿ ನಡೆದ ಸ್ಥಳದ ಫೋಟೋಗಳೂ ಕೂಡ ವೈರಲ್ ಆಗುತ್ತಿವೆ. ಬಿಜೆಪಿ ಇದುವರೆಗೆ ಈ ಬಗ್ಗೆ ಯಾವುದೇ ಹೇಳಿಕೆಯನ್ನೂ ಬಿಡುಗಡೆ ಮಾಡಿಲ್ಲ.

ನಟಿ ಪಾಯಲ್ ಸರ್ಕಾರ್​ ಅವರು ಫೆಬ್ರವರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನಗೆ ರಾಜಕೀಯದಲ್ಲಿ ಆಸಕ್ತಿ ಇದೆ. ಆದರೆ ನಾನು ಸಕ್ರಿಯವಾಗಿರಲಿಲ್ಲ. ಆದರೆ ಬಿಜೆಪಿ ಸಿದ್ಧಾಂತ ನನಗೆ ಹೆಚ್ಚು ಆಪ್ತ ಎನಿಸುವ ಕಾರಣ ನಾನು ಆ ಪಕ್ಷ ಸೇರುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು. ಪಾಯಲ್​ಗೆ ಕೇಂದ್ರ ಸರ್ಕಾರ Y ಶ್ರೇಣಿಯ ಭದ್ರತೆಯನ್ನು ನೀಡಿತ್ತು. ಅದಾದ ಬಳಿಕ ಮಾರ್ಚ್​ನಲ್ಲಿ ಪಾಯಲ್​ ಸೇರಿ ಒಟ್ಟು ಐವರು ಮುಖಂಡರಿಗೆ ಸಿಐಎಸ್​ಎಫ್​ ಶ್ರೇಣಿಯ ಭದ್ರತೆಯನ್ನು ನೀಡಲಾಗಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಾಯಲ್ ಪೂರ್ವ ಬೆಹಾಲಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇವರ ವಿರುದ್ಧ ತೃಣಮೂಲ ಕಾಂಗ್ರೆಸ್ನ ರತ್ನಾ ಚಟರ್ಜಿ ಕಣಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: Body Shaming; ಸುಮ್ಮನಿರುವುದು ಹೇಗೆ? : ಕಪ್ಪು ರೇಷಿಮೆ ಸೀರೆಯನ್ನೇ ಆರತಕ್ಷತೆಗೆ ಆಯ್ಕೆ ಮಾಡಿಕೊಂಡಿದ್ದೆ 

West Bengal Election 2021: ‘ದೀದಿ.. ಜನರ ನಂಬಿಕೆಗೆ ದ್ರೋಹ ಮಾಡಿದ ನೀವು ಸೋಲನ್ನು ಒಪ್ಪಿಕೊಳ್ಳಲೇಬೇಕು’-ಹೂಗ್ಲಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

Published On - 4:00 pm, Sun, 4 April 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್