AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Election 2021: ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್, ಬೆಂಗಾವಲು ಪಡೆ​ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ದಾಳಿ

ಮತ ಪ್ರಚಾರದಲ್ಲಿ ತೊಡಗಿದ್ದ ಪಾಯಲ್​​ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಳಿ ನಡೆದ ಸ್ಥಳದ ಫೋಟೋಗಳೂ ಕೂಡ ವೈರಲ್ ಆಗುತ್ತಿವೆ.

West Bengal Election 2021: ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್, ಬೆಂಗಾವಲು ಪಡೆ​ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ದಾಳಿ
ಪ್ರಚಾರದ ಸಂದರ್ಭದಲ್ಲಿ ಪಾಯಲ್​ ಬೆಂಬಲಿಗರ ಮೇಲೆ ಸಹ ದಾಳಿ ನಡೆದಿದೆ (ಫೋಟೋ ಕೃಪೆ: ಪಾಯಲ್​ ಸರ್ಕಾರ್​ ಟ್ವಿಟರ್​)
Follow us
Lakshmi Hegde
|

Updated on:Apr 04, 2021 | 4:03 PM

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಹಿಂಸೆ, ಹೊಡೆದಾಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಅಲ್ಲೀಗ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಏಪ್ರಿಲ್​ 6ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಮತದಾನಕ್ಕೆ ಇನ್ನೊಂದೇ ದಿನ ಬಾಕಿ ಇರುವಾಗ ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್ ಅವರ ಮೇಲೆ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬೆಹಾಲಾದ ಠಾಕೂರ್​ಪುರದಲ್ಲಿ ಘಟನೆ ನಡೆದಿದ್ದು, ಪಾಯಲ್​ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

ಮತ ಪ್ರಚಾರದಲ್ಲಿ ತೊಡಗಿದ್ದ ಪಾಯಲ್​​ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಳಿ ನಡೆದ ಸ್ಥಳದ ಫೋಟೋಗಳೂ ಕೂಡ ವೈರಲ್ ಆಗುತ್ತಿವೆ. ಬಿಜೆಪಿ ಇದುವರೆಗೆ ಈ ಬಗ್ಗೆ ಯಾವುದೇ ಹೇಳಿಕೆಯನ್ನೂ ಬಿಡುಗಡೆ ಮಾಡಿಲ್ಲ.

ನಟಿ ಪಾಯಲ್ ಸರ್ಕಾರ್​ ಅವರು ಫೆಬ್ರವರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನಗೆ ರಾಜಕೀಯದಲ್ಲಿ ಆಸಕ್ತಿ ಇದೆ. ಆದರೆ ನಾನು ಸಕ್ರಿಯವಾಗಿರಲಿಲ್ಲ. ಆದರೆ ಬಿಜೆಪಿ ಸಿದ್ಧಾಂತ ನನಗೆ ಹೆಚ್ಚು ಆಪ್ತ ಎನಿಸುವ ಕಾರಣ ನಾನು ಆ ಪಕ್ಷ ಸೇರುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು. ಪಾಯಲ್​ಗೆ ಕೇಂದ್ರ ಸರ್ಕಾರ Y ಶ್ರೇಣಿಯ ಭದ್ರತೆಯನ್ನು ನೀಡಿತ್ತು. ಅದಾದ ಬಳಿಕ ಮಾರ್ಚ್​ನಲ್ಲಿ ಪಾಯಲ್​ ಸೇರಿ ಒಟ್ಟು ಐವರು ಮುಖಂಡರಿಗೆ ಸಿಐಎಸ್​ಎಫ್​ ಶ್ರೇಣಿಯ ಭದ್ರತೆಯನ್ನು ನೀಡಲಾಗಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಾಯಲ್ ಪೂರ್ವ ಬೆಹಾಲಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇವರ ವಿರುದ್ಧ ತೃಣಮೂಲ ಕಾಂಗ್ರೆಸ್ನ ರತ್ನಾ ಚಟರ್ಜಿ ಕಣಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: Body Shaming; ಸುಮ್ಮನಿರುವುದು ಹೇಗೆ? : ಕಪ್ಪು ರೇಷಿಮೆ ಸೀರೆಯನ್ನೇ ಆರತಕ್ಷತೆಗೆ ಆಯ್ಕೆ ಮಾಡಿಕೊಂಡಿದ್ದೆ 

West Bengal Election 2021: ‘ದೀದಿ.. ಜನರ ನಂಬಿಕೆಗೆ ದ್ರೋಹ ಮಾಡಿದ ನೀವು ಸೋಲನ್ನು ಒಪ್ಪಿಕೊಳ್ಳಲೇಬೇಕು’-ಹೂಗ್ಲಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

Published On - 4:00 pm, Sun, 4 April 21

ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು