AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಜನರಿಗೆ ಅನ್ಯಾಯ ಮಾಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಅಖಿಲೇಶ್ ಯಾದವ್

ನಿಜ ಹೇಳಬೇಕೆಂದರೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಇನ್ನೂ ಹೆಚ್ಚಿನ ಸ್ಥಾನಗಳನ್ನು ಕಳೆದುಕೊಳ್ಳುತ್ತಿತ್ತು. ನಾನು ಅಯೋಧ್ಯೆಯ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ನೀವು ಆಗಾಗ ಅಯೋಧ್ಯೆಯ ನೋವನ್ನು ನೋಡಿರಬಹುದು. ಅವರ ಜಮೀನಿಗೆ ಸೂಕ್ತ ಪರಿಹಾರ ನೀಡಿಲ್ಲ, ಅನ್ಯಾಯ ಮಾಡಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಅಯೋಧ್ಯೆಯ ಜನರಿಗೆ ಅನ್ಯಾಯ ಮಾಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಅಖಿಲೇಶ್ ಯಾದವ್
ಅಖಿಲೇಶ್ ಯಾದವ್Image Credit source: X/ @yadavakhilesh ·
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 06, 2024 | 4:17 PM

Share

ಲಖನೌ  ಜೂನ್ 06: ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ಯಶಸ್ಸಿಗೆ ಕಾರಣರಾಗಿರುವ ಸಮಾಜವಾದಿ ಪಕ್ಷದ (Samajwadi Party) ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav), ಫೈಜಾಬಾದ್ (ಅಯೋಧ್ಯೆ) ನಲ್ಲಿ ಬಿಜೆಪಿಯ ಆಘಾತಕಾರಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಜನವರಿಯಲ್ಲಿ ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ ಉದ್ಘಾಟನೆ ನಡೆದ ಕಾರಣ ಈ ಕ್ಷೇತ್ರದಲ್ಲಿ ಬಿಜೆಪಿ (BJP) ಸುಲಭ ಗೆಲುವು ಸಾಧಿಸಲಿದೆ ಎಂದು ಚುನಾವಣಾ ಪಂಡಿತರು ಭವಿಷ್ಯ ನುಡಿದಿದ್ದರು ಆದರೆ, ಅಚ್ಚರಿಯ ಬೆಳವಣಿಗೆ ಎಂದರೆ ಚುನಾವಣಾ ಫಲಿತಾಂಶ ಪ್ರಕಟವಾದಾಗ ಅಖಿಲೇಶ್ ಯಾದವ್ ಅವರ ಪಕ್ಷ ಸಮಾಜವಾದಿ ಪಾರ್ಟಿ ಇಲ್ಲಿ ಬಿಜೆಪಿಗಿಂತ ಮೇಲುಗೈ ಸಾಧಿಸಿತು.

ನಿಜ ಹೇಳಬೇಕೆಂದರೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಇನ್ನೂ ಹೆಚ್ಚಿನ ಸ್ಥಾನಗಳನ್ನು ಕಳೆದುಕೊಳ್ಳುತ್ತಿತ್ತು. ನಾನು ಅಯೋಧ್ಯೆಯ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ನೀವು ಆಗಾಗ ಅಯೋಧ್ಯೆಯ ನೋವನ್ನು ನೋಡಿರಬಹುದು. ಅವರ ಜಮೀನಿಗೆ ಸೂಕ್ತ ಪರಿಹಾರ ನೀಡಿಲ್ಲ, ಅನ್ಯಾಯ ಮಾಡಿದ್ದಾರೆ, ಮಾರುಕಟ್ಟೆ ಬೆಲೆಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ, ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಬಲವಂತವಾಗಿ ಅವರ ಭೂಮಿಯನ್ನು ಕಿತ್ತುಕೊಂಡಿದ್ದೀರಿ.ಪವಿತ್ರವಾದ ವಿಷಯಕ್ಕಾಗಿ ಬಡವರನ್ನು ನಾಶ ಮಾಡಿದ್ದೀರಿ. ಅದಕ್ಕಾಗಿಯೇ ಅಯೋಧ್ಯೆ ಮತ್ತು ಅಕ್ಕಪಕ್ಕದ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಅಖಿಲೇಶ್ ಹೇಳಿದ್ದಾರೆ.

ಏತನ್ಮಧ್ಯೆ, ಸಮಾಜವಾದಿ ಪಕ್ಷದ ನೂತನ ಸಂಸದ ಅವಧೇಶ್ ಪ್ರಸಾದ್ ಸಿಂಗ್, ರಾಮನ ಘನತೆಯನ್ನು ನಾಶಪಡಿಸಿದ್ದರಿಂದ ಬಿಜೆಪಿ ಸೋತಿದೆ ಎಂದು ಹೇಳಿದ್ದಾರೆ. “ಭಾರತೀಯ ಜನತಾ ಪಕ್ಷ ಅಯೋಧ್ಯೆಯ ಹೆಸರಿನಲ್ಲಿ ರಾಜಕೀಯ ಮಾಡಿದೆ. ಬಿಜೆಪಿಯು ‘ಮರ್ಯಾದಾ ಪುರುಷೋತ್ತಮ ರಾಮ’ನ ಘನತೆಯನ್ನು ನಾಶಪಡಿಸಿದೆ. ಹಣದುಬ್ಬರವಿದೆ, ಅವರ (ಬಿಜೆಪಿ) ಆಡಳಿತದಲ್ಲಿ ಉದ್ಯೋಗವಿಲ್ಲ, ಅವರು ನಮ್ಮ ಯೋಧರು, ರೈತರಿಗೆ ಅಗೌರವ ಮಾಡಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.

ಅವಧೇಶ್ ಪ್ರಸಾದ್ ಅವರು ಅಯೋಧ್ಯೆ ಚುನಾವಣಾ ಕ್ಷೇತ್ರದಲ್ಲಿ ಬಿಜೆಪಿಯ ಎರಡು ಬಾರಿ ಸಂಸದರಾಗಿದ್ದ ಲಲ್ಲು ಸಿಂಗ್ ಅವರನ್ನು 54,567 ಮತಗಳ ಸುಂದರ ಅಂತರದಿಂದ ಸೋಲಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ 16 ಕ್ಷೇತ್ರಗಳಲ್ಲಿ ಬಿಜೆಪಿ ದಡ ಸೇರಲು ನೆರವಾದ ಬಿಎಸ್‌ಪಿ ಅಭ್ಯರ್ಥಿಗಳು! ಹೇಗೆಂಬ ಮಾಹಿತಿ ಇಲ್ಲಿದೆ

ಸಾರ್ವತ್ರಿಕ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲಾಗಿದ್ದ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 2014 ಮತ್ತು 2019ರಲ್ಲಿ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ 80 ಸ್ಥಾನಗಳ ಪೈಕಿ ಕೇವಲ 33ರಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಯಿತು.

ಏತನ್ಮಧ್ಯೆ, ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ಕೂಡಾ ರಾಮಮಂದಿರ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ತಂದಕೊಡಲಿಲ್ಲ ಎಂದು ಹೇಳಿದ್ದಾರೆ. ಇಂದು ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆದರೆ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾ ರಚನೆಯಾಗಲಿದೆ. ಅತಿ ದೊಡ್ಡ ರಾಮ ಭಕ್ತನನ್ನು ಜನ ದಾಖಲೆಯ ಮತಗಳಿಂದ ಆಯ್ಕೆ ಮಾಡಿದ್ದಾರೆ ಎಂದು ಶಿವಪಾಲ್ ಯಾದವ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ