AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿಯರಿಗೆ 21,000 ರೂ., ಎಲ್​ಪಿಜಿ ಸಿಲಿಂಡರ್​ಗೆ 500 ರೂ. ಸಬ್ಸಿಡಿ; ದೆಹಲಿ ಜನರಿಗೆ ಬಿಜೆಪಿ ಭರವಸೆ

ಫೆಬ್ರವರಿ 5ರಂದು ದೆಹಲಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ‘ವಿಕಸಿತ ದೆಹಲಿ’ ಶೀರ್ಷಿಕೆಯಡಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಮಹಿಳಾ ಸಬಲೀಕರಣ, ಭ್ರಷ್ಟಾಚಾರ ನಿರ್ಮೂಲನೆಗೆ ಬದ್ಧವಾಗಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ 2,500 ರೂ. ನೀಡುತ್ತೇವೆ. ಗರ್ಭಿಣಿಯರಿಗೆ 21,000 ರೂ. ನೀಡಲಾಗುವುದು ಎಂದು ದೆಹಲಿಯ ಜನರಿಗೆ ಬಿಜೆಪಿ ಭರವಸೆ ನೀಡಿದೆ.

ಗರ್ಭಿಣಿಯರಿಗೆ 21,000 ರೂ., ಎಲ್​ಪಿಜಿ ಸಿಲಿಂಡರ್​ಗೆ 500 ರೂ. ಸಬ್ಸಿಡಿ; ದೆಹಲಿ ಜನರಿಗೆ ಬಿಜೆಪಿ ಭರವಸೆ
Bjp President Jp Nadda
ಸುಷ್ಮಾ ಚಕ್ರೆ
|

Updated on:Jan 17, 2025 | 4:07 PM

Share

ನವದೆಹಲಿ: ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಈಗಾಗಲೇ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿವೆ. ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ಗರ್ಭಿಣಿಯರಿಗೆ 21,000 ರೂ. ಮತ್ತು 6 ತಿಂಗಳು ಪೌಷ್ಠಿಕಾಂಶ ಪದಾರ್ಥಗಳ ಕಿಟ್‌ಗಳನ್ನು ನೀಡಲಾಗುವುದು ಎಂದು ಘೋಷಿಸಿದೆ. ಜೊತೆಗೆ ಮೊದಲ ಮಗುವಿಗೆ 5,000 ರೂ. ಮತ್ತು ಎರಡನೇ ಮಗುವಿಗೆ 6,000 ರೂ. ನೀಡಲಾಗುವುದು ಎಂದು ಘೋಷಿಸಿದೆ.

ಫೆಬ್ರವರಿ 5ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಮಹಿಳೆಯರು, ಹಿಂದುಳಿದವರು ಮತ್ತು ಹಿರಿಯ ನಾಗರಿಕರಿಗೆ ಪ್ರಮುಖ ಉಪಕ್ರಮಗಳನ್ನು ನೀಡುವ ಭರವಸೆ ನೀಡುವ ಮೂಲಕ ಬಿಜೆಪಿ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ದೆಹಲಿಯ ಮಹಿಳಾ ಮತದಾರರನ್ನು ಆಕರ್ಷಿಸುವ ಪ್ರಯತ್ನದಲ್ಲಿರುವ ಬಿಜೆಪಿ, ದೆಹಲಿಯ ಪ್ರತಿಯೊಬ್ಬ ಮಹಿಳೆಗೆ 2,500 ರೂ.ಗಳನ್ನು ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ. ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರ ಕಲ್ಯಾಣಕ್ಕಾಗಿ ಆರ್ಥಿಕ ನೆರವು ನೀಡುವ ಗುರಿಯನ್ನು ಈ ಕ್ರಮ ಹೊಂದಿದೆ. ಹೆಚ್ಚುತ್ತಿರುವ ಅಡುಗೆ ಅನಿಲದ ವೆಚ್ಚವನ್ನು ಎದುರಿಸುತ್ತಿರುವ ಮನೆಗಳಿಗೆ ಪರಿಹಾರವನ್ನು ತರುವ ಎಲ್‌ಪಿಜಿ ಸಿಲಿಂಡರ್‌ಗಳಿಗೆ 500 ರೂ. ಸಬ್ಸಿಡಿ ನೀಡುವುದಾಗಿಯೂ ಬಿಜೆಪಿ ಪ್ರತಿಜ್ಞೆ ಮಾಡಿದೆ.

ಇದನ್ನೂ ಓದಿ: Arvind Kejriwal Net Worth: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಬಳಿ ಇರುವ ಒಟ್ಟು ಆಸ್ತಿ ಎಷ್ಟು?

ಬಿಜೆಪಿಯ ಆಡಳಿತ ಮಾದರಿಯು ಸಮಾಜದ ಎಲ್ಲಾ ವರ್ಗಗಳ, ವಿಶೇಷವಾಗಿ ಅಂಚಿನಲ್ಲಿರುವ ಸಮುದಾಯಗಳ ಕಲ್ಯಾಣದ ಮೇಲೆ ಕೇಂದ್ರೀಕೃತವಾಗಿರುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಈಗ ಚಾಲ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಕಲ್ಯಾಣ ಯೋಜನೆಗಳು ಮುಂದುವರಿಯುತ್ತವೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತದಾರರಿಗೆ ಭರವಸೆ ನೀಡಿದರು.

ದೆಹಲಿ ವಿಧಾನಸಭಾ ಚುನಾವಣೆಗಳು ಫೆಬ್ರವರಿ 5ರಂದು ನಡೆಯಲಿದ್ದು, ಫಲಿತಾಂಶಗಳು ಫೆಬ್ರವರಿ 8ರಂದು ಪ್ರಕಟವಾಗಲಿವೆ. ಈ ಚುನಾವಣೆಯು ದೆಹಲಿಯ ಭವಿಷ್ಯದ ರಾಜಕೀಯ ಭೂದೃಶ್ಯವನ್ನು ನಿರ್ಧರಿಸುತ್ತದೆ.

ಬಿಜೆಪಿ ಪ್ರಣಾಳಿಕೆಯಲ್ಲಿನ ಪ್ರಮುಖ ಭರವಸೆಗಳು:

  1. ಮಹಿಳಾ ಸಮೃದ್ಧಿ ಯೋಜನೆಯಡಿ ದೆಹಲಿಯ ಮಹಿಳೆಯರಿಗೆ 2,500 ರೂ.
  2. ದೆಹಲಿಯ ಬಡ ಮಹಿಳೆಯರಿಗೆ 500 ರೂ. ಸಿಲಿಂಡರ್ ಸಬ್ಸಿಡಿ.
  3. ಪ್ರತಿ ಹೋಳಿ ಮತ್ತು ದೀಪಾವಳಿಯಂದು 1 ಸಿಲಿಂಡರ್.
  4. ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿ ತಾಯಂದಿರಿಗೆ 21,000 ರೂ. ನೀಡಲಾಗುವುದು.
  5. ಮೊದಲ ಸಂಪುಟದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನ, ಹೆಚ್ಚುವರಿ ಆರೋಗ್ಯ ರಕ್ಷಣೆಗೆ 50,000 ರೂ.
  6. 60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,000-2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3,000 ರೂ.ಗಳನ್ನು ಪಡೆಯುವ ಪಿಂಚಣಿ ಯೋಜನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Fri, 17 January 25

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ