AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Channapatna Results 2024: ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆಲುವು, ಮೂರನೇ ಯತ್ನದಲ್ಲೂ ನಿಖಿಲ್​ಗೆ ಸೋಲು

ಉಪ ಚುನಾವಣೆ ಸಮರದಲ್ಲಿ ತೀವ್ರ ಪೈಪೋಟಿಗೆ, ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಮತ್ತು ಕಾಂಗ್ರೆಸ್ ಹಾಗೂ ಎನ್​ಡಿಎ ಮಿತ್ರಪಕ್ಷಗಳ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣದಲ್ಲಿ ಕೊನೆಗೂ ಡಿಸಿಎಂ ಡಿಕೆ ಶಿವಕುಮಾರ್, ಯೋಗೇಶ್ವರ್ ಪ್ರತಿಷ್ಠೆಗೆ ಗೆಲುವಾಗಿದೆ. ಈ ಮೂಲಕ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿಗೆ ಟಕ್ಕರ್ ಕೊಡುವಲ್ಲಿ ಯೋಗೇಶ್ವರ್ ಯಶಸ್ವಿಯಾಗಿದ್ದಾರೆ.

Channapatna Results 2024: ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆಲುವು, ಮೂರನೇ ಯತ್ನದಲ್ಲೂ ನಿಖಿಲ್​ಗೆ ಸೋಲು
ಸಿಪಿ ಯೋಗೇಶ್ವರ್ ಹಾಗೂ ಡಿಕೆ ಶಿವಕುಮಾರ್
Ganapathi Sharma
|

Updated on:Nov 23, 2024 | 3:24 PM

Share

ಚನ್ನಪಟ್ಟಣ, ನವೆಂಬರ್ 23: ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್​ಗೆ ಮೂರನೇ ಬಾರಿಯೂ ಮುಖಭಂಗವಾಗಿದೆ. ಈ ಹಿಂದೆ ಮಂಡ್ಯದಿಂದ ಲೋಕಸಭೆ ಚುನಾವಣೆ, ರಾಮನಗರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಂಡಿದ್ದ ಅವರು, ಇದೀಗ ಮೂರನೇ ಪ್ರಯತ್ನದಲ್ಲಿಯೂ ವಿಫಲರಾಗಿದ್ದಾರೆ.

25,515 ಮತಗಳ ಅಂತರದ ಗೆಲುವು

ಚನ್ನಪಟ್ಟಣ ಉಪಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ್​ಗೆ 1,12,642 ಮತ ದೊರೆತರೆ, ಎನ್​ಡಿಎ ಅಭ್ಯರ್ಥಿ ನಿಖಿಲ್‌ಗೆ 87,229 ಮತಗಳು ದೊರೆತಿವೆ. ಪಕ್ಷೇತರ ಅಭ್ಯರ್ಥಿಗಳಾದ ನಿಂಗರಾಜುಗೆ 2352, ಜೆ.ಟಿ.ಪ್ರಕಾಶ್‌ಗೆ 1649 ಮತಗಳು ದೊರೆತಿವೆ.

ಯೋಗೇಶ್ವರ್ ಗೆಲುವಿಗೆ ಕಾರಣವೇನು?

ಚನ್ನಪಟ್ಟಣದಲ್ಲಿ ಎರಡು ಬಾರಿ ಸೋತಿರುವ ಅನುಕಂಪ ಯೋಗೇಶ್ವರ್​ ಕೈ ಹಿಡಿದಿರಬಹುದು. ಇಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಯೋಗೇಶ್ವರ್ ಅವರಿಗೆ ಅವರದ್ದೇ ಆದ ವೈಯಕ್ತಿಕ ವರ್ಚಸ್ಸು ಇದೆ. ಯೋಗೇಶ್ವರ್ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿರುವುದರಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ಲಸ್ ಆಗುರಬಹುದು. ಜೊತೆ ಡಿಕೆ ಸಹೋದರರು ಯೋಗೇಶ್ವರ್​ ಬೆನ್ನಿಗೆ ನಿಂತಿರುವುದು ಕೂಡ ನೆರವಾಗಿದೆ. ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಒಗ್ಗಟ್ಟು ಪ್ರದರ್ಶನ ಸೇರಿ ಹಲವು ವಿಚಾರಗಳು ಸಿಪಿವೈಗೆ ವರವಾಗಿ ಪರಿಣಮಿಸಿದವು.

ಮತ್ತೆ ಅದೃಷ್ಟಪರೀಕ್ಷೆಯಲ್ಲಿ ಸೋತ ನಿಖಿಲ್

ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿತ್ತು. 2018ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋಲು. 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ಸೋಲು. ಹೀಗೆ ಎರಡು ಸೋಲು ಕಂಡಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಈಬಾರಿ ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಅತ್ತ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಸಿಪಿ ಯೋಗೇಶ್ವರ್​ಗೆ ಕೂಡಾ ಈ ಚುನಾವಣೆ ಅಗ್ನಿ ಪರೀಕ್ಷೆಯಾಗಿತ್ತು. ನಿಖಿಲ್, ಯೋಗೇಶ್ವರ್ ಅಭ್ಯರ್ಥಿಯಾದರೂ, ಇದು ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಯುದ್ಧವೇ ಆಗಿತ್ತು.

ನಿಖಿಲ್​ಗೆ ಹಿನ್ನಡೆಯಾದ ಅಂಶಗಳೇನು?

ನಿಖಿಲ್​ಗೆ ಮೈನಸ್ ಆಗಿರುವ ಮೊದಲನೇ ಪಾಯಿಂಟ್ ಅಂದರೆ ಕುಟುಂಬ ರಾಜಕಾರಣ ಮತ್ತು ಕೊನೇ ಕ್ಷಣದಲ್ಲಿ ಸ್ಪರ್ಧೆ ಮಾಡಿರುವುದು. ಅಲ್ಲದೆ, ಕುಮಾರಸ್ವಾಮಿ ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮಂಡ್ಯ ಸಂಸದ ಸ್ಥಾನಕ್ಕೆ ಹೋಗಿರುವ ಅಂಶ ಕೂಡಾ ಮುಖ್ಯವಾಯಿತು. ಇನ್ನು ಯೋಗೇಶ್ವರ್​ಗೆ ಟಿಕೆಟ್ ಕೊಡಲಿಲ್ಲ ಎಂಬ ಅನುಕಂಪ ನಿಖಿಲ್​ಗೆ​ ಮೈನಸ್ ಆಯಿತು ಎಂದೂ ಹೇಳಲಾಗುತ್ತಿದೆ. ಜೊತೆಗೆ ತಳ ಮಟ್ಟದಲ್ಲಿ ಬಿಜೆಪಿಯಿಂದ ಅಷ್ಟಾಗಿ ಸಹಕಾರ ಸಿಗದೇ ಹೋಗಿರುವ ಸಾಧ್ಯತೆಯೂ ಇಇದೆ. ಅಂತಿಮವಾಗಿ ಅವರದ್ದೇ ಕುಟುಂಬದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್ ವಿಚಾರವೂ ನಿಖಿಲ್​ಗೆ ಮೈನಸ್ ಆಗಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಲೈವ್ ಅಪ್​ಡೇಟ್ ಇಲ್ಲಿದೆ

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Sat, 23 November 24

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ