AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Channapatna Results 2024: ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆಲುವು, ಮೂರನೇ ಯತ್ನದಲ್ಲೂ ನಿಖಿಲ್​ಗೆ ಸೋಲು

ಉಪ ಚುನಾವಣೆ ಸಮರದಲ್ಲಿ ತೀವ್ರ ಪೈಪೋಟಿಗೆ, ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಮತ್ತು ಕಾಂಗ್ರೆಸ್ ಹಾಗೂ ಎನ್​ಡಿಎ ಮಿತ್ರಪಕ್ಷಗಳ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣದಲ್ಲಿ ಕೊನೆಗೂ ಡಿಸಿಎಂ ಡಿಕೆ ಶಿವಕುಮಾರ್, ಯೋಗೇಶ್ವರ್ ಪ್ರತಿಷ್ಠೆಗೆ ಗೆಲುವಾಗಿದೆ. ಈ ಮೂಲಕ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿಗೆ ಟಕ್ಕರ್ ಕೊಡುವಲ್ಲಿ ಯೋಗೇಶ್ವರ್ ಯಶಸ್ವಿಯಾಗಿದ್ದಾರೆ.

Channapatna Results 2024: ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆಲುವು, ಮೂರನೇ ಯತ್ನದಲ್ಲೂ ನಿಖಿಲ್​ಗೆ ಸೋಲು
ಸಿಪಿ ಯೋಗೇಶ್ವರ್ ಹಾಗೂ ಡಿಕೆ ಶಿವಕುಮಾರ್
Ganapathi Sharma
|

Updated on:Nov 23, 2024 | 3:24 PM

Share

ಚನ್ನಪಟ್ಟಣ, ನವೆಂಬರ್ 23: ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್​ಗೆ ಮೂರನೇ ಬಾರಿಯೂ ಮುಖಭಂಗವಾಗಿದೆ. ಈ ಹಿಂದೆ ಮಂಡ್ಯದಿಂದ ಲೋಕಸಭೆ ಚುನಾವಣೆ, ರಾಮನಗರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಂಡಿದ್ದ ಅವರು, ಇದೀಗ ಮೂರನೇ ಪ್ರಯತ್ನದಲ್ಲಿಯೂ ವಿಫಲರಾಗಿದ್ದಾರೆ.

25,515 ಮತಗಳ ಅಂತರದ ಗೆಲುವು

ಚನ್ನಪಟ್ಟಣ ಉಪಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ್​ಗೆ 1,12,642 ಮತ ದೊರೆತರೆ, ಎನ್​ಡಿಎ ಅಭ್ಯರ್ಥಿ ನಿಖಿಲ್‌ಗೆ 87,229 ಮತಗಳು ದೊರೆತಿವೆ. ಪಕ್ಷೇತರ ಅಭ್ಯರ್ಥಿಗಳಾದ ನಿಂಗರಾಜುಗೆ 2352, ಜೆ.ಟಿ.ಪ್ರಕಾಶ್‌ಗೆ 1649 ಮತಗಳು ದೊರೆತಿವೆ.

ಯೋಗೇಶ್ವರ್ ಗೆಲುವಿಗೆ ಕಾರಣವೇನು?

ಚನ್ನಪಟ್ಟಣದಲ್ಲಿ ಎರಡು ಬಾರಿ ಸೋತಿರುವ ಅನುಕಂಪ ಯೋಗೇಶ್ವರ್​ ಕೈ ಹಿಡಿದಿರಬಹುದು. ಇಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಯೋಗೇಶ್ವರ್ ಅವರಿಗೆ ಅವರದ್ದೇ ಆದ ವೈಯಕ್ತಿಕ ವರ್ಚಸ್ಸು ಇದೆ. ಯೋಗೇಶ್ವರ್ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿರುವುದರಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ಲಸ್ ಆಗುರಬಹುದು. ಜೊತೆ ಡಿಕೆ ಸಹೋದರರು ಯೋಗೇಶ್ವರ್​ ಬೆನ್ನಿಗೆ ನಿಂತಿರುವುದು ಕೂಡ ನೆರವಾಗಿದೆ. ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಒಗ್ಗಟ್ಟು ಪ್ರದರ್ಶನ ಸೇರಿ ಹಲವು ವಿಚಾರಗಳು ಸಿಪಿವೈಗೆ ವರವಾಗಿ ಪರಿಣಮಿಸಿದವು.

ಮತ್ತೆ ಅದೃಷ್ಟಪರೀಕ್ಷೆಯಲ್ಲಿ ಸೋತ ನಿಖಿಲ್

ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿತ್ತು. 2018ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋಲು. 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ಸೋಲು. ಹೀಗೆ ಎರಡು ಸೋಲು ಕಂಡಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಈಬಾರಿ ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಅತ್ತ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಸಿಪಿ ಯೋಗೇಶ್ವರ್​ಗೆ ಕೂಡಾ ಈ ಚುನಾವಣೆ ಅಗ್ನಿ ಪರೀಕ್ಷೆಯಾಗಿತ್ತು. ನಿಖಿಲ್, ಯೋಗೇಶ್ವರ್ ಅಭ್ಯರ್ಥಿಯಾದರೂ, ಇದು ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಯುದ್ಧವೇ ಆಗಿತ್ತು.

ನಿಖಿಲ್​ಗೆ ಹಿನ್ನಡೆಯಾದ ಅಂಶಗಳೇನು?

ನಿಖಿಲ್​ಗೆ ಮೈನಸ್ ಆಗಿರುವ ಮೊದಲನೇ ಪಾಯಿಂಟ್ ಅಂದರೆ ಕುಟುಂಬ ರಾಜಕಾರಣ ಮತ್ತು ಕೊನೇ ಕ್ಷಣದಲ್ಲಿ ಸ್ಪರ್ಧೆ ಮಾಡಿರುವುದು. ಅಲ್ಲದೆ, ಕುಮಾರಸ್ವಾಮಿ ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮಂಡ್ಯ ಸಂಸದ ಸ್ಥಾನಕ್ಕೆ ಹೋಗಿರುವ ಅಂಶ ಕೂಡಾ ಮುಖ್ಯವಾಯಿತು. ಇನ್ನು ಯೋಗೇಶ್ವರ್​ಗೆ ಟಿಕೆಟ್ ಕೊಡಲಿಲ್ಲ ಎಂಬ ಅನುಕಂಪ ನಿಖಿಲ್​ಗೆ​ ಮೈನಸ್ ಆಯಿತು ಎಂದೂ ಹೇಳಲಾಗುತ್ತಿದೆ. ಜೊತೆಗೆ ತಳ ಮಟ್ಟದಲ್ಲಿ ಬಿಜೆಪಿಯಿಂದ ಅಷ್ಟಾಗಿ ಸಹಕಾರ ಸಿಗದೇ ಹೋಗಿರುವ ಸಾಧ್ಯತೆಯೂ ಇಇದೆ. ಅಂತಿಮವಾಗಿ ಅವರದ್ದೇ ಕುಟುಂಬದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್ ವಿಚಾರವೂ ನಿಖಿಲ್​ಗೆ ಮೈನಸ್ ಆಗಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಲೈವ್ ಅಪ್​ಡೇಟ್ ಇಲ್ಲಿದೆ

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Sat, 23 November 24

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು