ಛತ್ತೀಸ್‌ಗಢ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಹೀನಾಯ ಸೋಲು ಖಚಿತ: ಮೋದಿ

ಇನ್ನು ಕೆಲವೇ ವರ್ಷಗಳಲ್ಲಿ ಛತ್ತೀಸ್‌ಗಢ ತನ್ನ 25 ವರ್ಷಗಳನ್ನು ಪೂರೈಸುತ್ತಿದೆ. ಇಂದು ಪ್ರಥಮ ಬಾರಿಗೆ ಮತದಾನ ಮಾಡಲಿರುವ ರಾಜ್ಯದ ಯುವಜನತೆ ಛತ್ತೀಸ್‌ಗಢದ ಸಮೃದ್ಧ ಕನಸುಗಳೊಂದಿಗೆ ಮುನ್ನಡೆಯುತ್ತಿದ್ದಾರೆ. ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ಎಂಬ ಪ್ರತಿಜ್ಞೆಯೊಂದಿಗೆ ಅವರು ಅಭಿವೃದ್ಧಿ ಹೊಂದಿದ ಛತ್ತೀಸ್‌ಗಢದ ಪ್ರತಿಜ್ಞೆಯನ್ನು ಸಹ ತೆಗೆದುಕೊಂಡಿದ್ದಾರೆ

ಛತ್ತೀಸ್‌ಗಢ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಹೀನಾಯ ಸೋಲು ಖಚಿತ: ಮೋದಿ
ನರೇಂದ್ರ ಮೋದಿ
Follow us
|

Updated on:Nov 15, 2023 | 3:22 PM

ದೆಹಲಿ ನವೆಂಬರ್ 15:  ಈ ಬಾರಿ ಛತ್ತೀಸ್‌ಗಢದ (Chhattisgarh) ಚುನಾವಣಾ ಪ್ರಚಾರದ ವೇಳೆ ನನ್ನ ಅನುಭವಗಳು ಅದ್ಭುತ ಮತ್ತು ಅಭೂತಪೂರ್ವವಾಗಿವೆ. ಛತ್ತೀಸ್‌ಗಢಿಯಾ..ಸಬ್ ಸೇ ಬಡಿಯಾ (ಛತ್ತೀಸಗಢ ಎಲ್ಲಕ್ಕಿಂತ ಉತ್ತಮ) ಎಂದು ಹೇಳಲಾಗುತ್ತದೆ. ಸುತ್ತಲೂ ಅದರ ಪ್ರತಿಧ್ವನಿಯನ್ನು ನಾನು ಅನುಭವಿಸಿದೆ. ಛತ್ತೀಸ್‌ಗಢದ ಕಷ್ಟಪಟ್ಟು ದುಡಿಯುವ ಜನರು ತಮ್ಮ ರಾಜ್ಯವನ್ನು ಉತ್ತಮ ಮತ್ತು ಅತ್ಯುತ್ತಮವಾಗಿಸಲು ಹೊಸ ಭರವಸೆಗಳು ಮತ್ತು ಹೊಸ ಶಕ್ತಿಯಿಂದ ತುಂಬಿದ್ದಾರೆ. ಛತ್ತೀಸ್‌ಗಢವನ್ನು ದುರಾಡಳಿತ ಮತ್ತು ಭ್ರಷ್ಟಾಚಾರದ ಕಪಿಮುಷ್ಠಿಯಿಂದ ಯಾರಾದರೂ ಮುಕ್ತಗೊಳಿಸಲು ಸಾಧ್ಯವಾದರೆ ಅದು ಬಿಜೆಪಿಯಿಂದ (BJP) ಮಾತ್ರ ಎಂಬುದು ಅವರಿಗೆ ತಿಳಿದಿದೆ. ಬಿಜೆಪಿ ಮಾಡಿದೆ, ಬಿಜೆಪಿ ಮಾತ್ರ ಸುಧಾರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನು ಕೆಲವೇ ವರ್ಷಗಳಲ್ಲಿ ಛತ್ತೀಸ್‌ಗಢ ತನ್ನ 25 ವರ್ಷಗಳನ್ನು ಪೂರೈಸುತ್ತಿದೆ. ಇಂದು ಪ್ರಥಮ ಬಾರಿಗೆ ಮತದಾನ ಮಾಡಲಿರುವ ರಾಜ್ಯದ ಯುವಜನತೆ ಛತ್ತೀಸ್‌ಗಢದ ಸಮೃದ್ಧ ಕನಸುಗಳೊಂದಿಗೆ ಮುನ್ನಡೆಯುತ್ತಿದ್ದಾರೆ. ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ಎಂಬ ಪ್ರತಿಜ್ಞೆಯೊಂದಿಗೆ ಅವರು ಅಭಿವೃದ್ಧಿ ಹೊಂದಿದ ಛತ್ತೀಸ್‌ಗಢದ ಪ್ರತಿಜ್ಞೆಯನ್ನು ಸಹ ತೆಗೆದುಕೊಂಡಿದ್ದಾರೆ. ಅವರು ತಮ್ಮ ಜೀವನದ ಮುಂದಿನ 25 ವರ್ಷಗಳನ್ನು ಅಭಿವೃದ್ಧಿ ಹೊಂದಿದ ಛತ್ತೀಸ್‌ಗಢ-ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪಕ್ಕಾಗಿ ಮೀಸಲಿಡುವ ಗುರಿಯನ್ನು ಹೊಂದಿದ್ದಾರೆ.

ರಾಜ್ಯದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗಗಳ ಯುವಕರು ನಮ್ಮ ಅಭಿವೃದ್ಧಿ ಮಾದರಿಯೊಂದಿಗೆ ಸಂಪರ್ಕ ಸಾಧಿಸುತ್ತಿರುವ ರೀತಿ ತುಂಬಾ ಉತ್ತೇಜನಕಾರಿಯಾಗಿದೆ. ಛತ್ತೀಸ್‌ಗಢದ ಯುವಕರ ಈ ಶಕ್ತಿ ಬದಲಾವಣೆಯ ಹೊಸ ಅಧ್ಯಾಯವನ್ನೇ ಬರೆಯಲಿದೆ.

ಇದನ್ನೂ ಓದಿ: ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶಕ್ಕಾಗಿ ಬಿಜೆಪಿ ಆಯ್ಕೆ ಮಾಡಿ: ಮತದಾರರಲ್ಲಿ ಮೋದಿ ಮನವಿ

ಛತ್ತೀಸ್‌ಗಢದ ಮಹತಾರಿ, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಕೂಡ ರಾಜ್ಯದ ಅಭಿವೃದ್ಧಿಯ ಪತಾಕೆಯನ್ನು ಹಾರಿಸಿದ್ದಾರೆ. ಇಂದು, ಭಾರತವು ಮಹಿಳಾ ಸಬಲೀಕರಣಕ್ಕಾಗಿ ಪ್ರಯತ್ನಿಸುತ್ತಿರುವ ರೀತಿಯಲ್ಲಿ, ಛತ್ತೀಸ್‌ಗಢದಲ್ಲೂ ಅದರ ಪರಿಣಾಮವನ್ನು ನಾವು ನೋಡಬಹುದು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಖಚಿತ. ಜನರು ಬಿಜೆಪಿಯ ಉತ್ತಮ ಆಡಳಿತವನ್ನು ನಂಬುತ್ತಿದ್ದಾರೆಯೇ ಹೊರತು ಕಾಂಗ್ರೆಸ್‌ನ ಪೊಳ್ಳು ಭರವಸೆಗಳನ್ನಲ್ಲ. ಬಿಜೆಪಿ ತನ್ನ ಪ್ರತಿಯೊಂದು ನಿರ್ಣಯವನ್ನು ಈಡೇರಿಸಲು ಬದ್ಧವಾಗಿದೆ.

ರಾಜ್ಯದಲ್ಲಿ ಬರಲಿರುವ ಬಿಜೆಪಿ ಸರ್ಕಾರವು ನಿಮ್ಮ ಆಕಾಂಕ್ಷೆಗಳು ಮತ್ತು ರಾಜ್ಯದ ಏಳಿಗೆಯ ಸರ್ಕಾರದ ಎಂದು ಛತ್ತೀಸ್‌ಗಢದ ಜನತೆಗೆ ಭರವಸೆ ನೀಡುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Wed, 15 November 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ