ಛತ್ತೀಸ್‌ಗಢ ಚುನಾವಣಾ ಪ್ರಚಾರ ಸಭೆಯಲ್ಲಿ ತಾನು ಬಿಡಿಸಿದ ಚಿತ್ರ ತೋರಿಸಿದ ಬಾಲಕಿ; ಮೋದಿ ಮೆಚ್ಚುಗೆ

ವೇದಿಕೆಯಿಂದ ಇದನ್ನು ಗಮನಿಸಿದ ಮೋದಿ, ನಾನು ನಿನ್ನ ಚಿತ್ರವನ್ನು ನೋಡಿದ್ದೇನೆ. ತುಂಬಾ ಚೆನ್ನಾಗಿ ಬಿಡಿಸಿದ್ದಿ. ನಾನು ನಿನ್ನನ್ನು ಆಶೀರ್ವದಿಸುತ್ತೇನೆ. ಆದರೆ ಇಷ್ಟು ಹೊತ್ತು ನಿಂತು ಸುಸ್ತಾಗಿರಬಹುದು. ಕುಳಿತುಕೊಳ್ಳಿ ಎಂದು ಹೇಳಿದ್ದಾರೆ. ಬಾಲಕಿ ಬಿಡಿಸಿದ ಚಿತ್ರವನ್ನು ಕೊಡುವಂತೆ ಅಲ್ಲಿದ್ದ ಪೊಲೀಸರಿಗೆ ಹೇಳಿದ ಮೋದಿ ಅದ ಮೇಲೆ ವಿಳಾಸ ಬರೆಯುವಂತೆ ಹೇಳಿದ್ದಾರೆ.

ಛತ್ತೀಸ್‌ಗಢ ಚುನಾವಣಾ ಪ್ರಚಾರ ಸಭೆಯಲ್ಲಿ ತಾನು ಬಿಡಿಸಿದ ಚಿತ್ರ ತೋರಿಸಿದ ಬಾಲಕಿ; ಮೋದಿ ಮೆಚ್ಚುಗೆ
ನರೇಂದ್ರ ಮೋದಿ
Follow us
|

Updated on:Nov 02, 2023 | 8:40 PM

ಕನ್ಕೇರ್ ನವೆಂಬರ್02: ಛತ್ತೀಸ್‌ಗಢ (Chhattisgarh) ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಗುರುವಾರ (ನವೆಂಬರ್ 2) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಛತ್ತೀಸ್‌ಗಢದ ಕನ್ಕೇರ್‌ನಲ್ಲಿ ಪ್ರಚಾರ ನಡೆಸಿದರು. ಇಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ಭಾಷಣದ ವೇಳೆ ಅವರು ಜನ ಸಮೂಹದ ಮಧ್ಯೆ ಬಾಲಕಿಯೊಬ್ಬಳು ಮೋದಿಯವರ ಚಿತ್ರವನ್ನು ತೋರಿಸಲು ಯತ್ನಿಸಿದ್ದಾಳೆ. ವೇದಿಕೆಯಿಂದ ಇದನ್ನು ಗಮನಿಸಿದ ಮೋದಿ, ನಾನು ನಿನ್ನ ಚಿತ್ರವನ್ನು ನೋಡಿದ್ದೇನೆ. ತುಂಬಾ ಚೆನ್ನಾಗಿ ಬಿಡಿಸಿದ್ದಿ. ನಾನು ನಿನ್ನನ್ನು ಆಶೀರ್ವದಿಸುತ್ತೇನೆ. ಆದರೆ ಇಷ್ಟು ಹೊತ್ತು ನಿಂತು ಸುಸ್ತಾಗಿರಬಹುದು. ಕುಳಿತುಕೊಳ್ಳಿ ಎಂದು ಹೇಳಿದ್ದಾರೆ. ಬಾಲಕಿ ಬಿಡಿಸಿದ ಚಿತ್ರವನ್ನು ಕೊಡುವಂತೆ ಅಲ್ಲಿದ್ದ ಪೊಲೀಸರಿಗೆ ಹೇಳಿದ ಮೋದಿ ಅದ ಮೇಲೆ ವಿಳಾಸ ಬರೆಯುವಂತೆ ಹೇಳಿದ್ದಾರೆ. ನಾನು ಮಗುವಿಗೆ ಪತ್ರ ಬರೆಯುತ್ತೇನೆ ಎಂದು ಮೋದಿ ಹೇಳಿದಾಗ ಸಭೆಯಲ್ಲಿ ಪಾಲ್ಗೊಂಡಿದ್ದ ಜನರೆಲ್ಲರೂ ಹರ್ಷ ವ್ಯಕ್ತಪಡಿಸಿದರು.

ಬಳಿಕ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಕಂಡಿದ್ದೇನೆ ಎಂದ ಅವರು, ಈ ಐದು ವರ್ಷದಲ್ಲಿ ಕಾಂಗ್ರೆಸ್ ನಾಯಕರ ಮನೆ, ಕಟ್ಟಡ, ವಾಹನಗಳು ಮಾತ್ರ ಅಭಿವೃದ್ಧಿ ಕಂಡಿವೆ.

ಛತ್ತೀಸ್‌ಗಢದಲ್ಲಿ ಬಿಜೆಪಿ ಅಭಿವೃದ್ಧಿ ಬಿರುಗಾಳಿ

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಛತ್ತೀಸ್‌ಗಢ ರಾಜ್ಯವನ್ನು ನಿರ್ಲಕ್ಷಿಸಲಾಗಿತ್ತು, ಆದರೆ ಛತ್ತೀಸ್‌ಗಢದ ಅಭಿವೃದ್ಧಿಗೆ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಪ್ರತಿಯೊಬ್ಬ ಬಡ, ಬುಡಕಟ್ಟು ಮತ್ತು ಹಿಂದುಳಿದ ವರ್ಗದ ರಕ್ಷಣೆಗೆ ಪ್ರಯತ್ನಿಸುತ್ತಿದೆ ಎಂದು ಹೇಳಿದರು. ಛತ್ತೀಸ್‌ಗಢದಲ್ಲಿ ಬಿಜೆಪಿ ಅಭಿವೃದ್ಧಿಯ ಬಿರುಗಾಳಿ ಬೀಸಲಿದೆ ಎಂದರು.

ಇದನ್ನೂ ಓದಿ: 15 ತಿಂಗಳ ಪುಟ್ಟ ಮಗುವಿಗಾಗಿ ಮಿಡಿದ ಸಿಎಂ ಹೃದಯ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಮನವಿ

ಛತ್ತೀಸ್‌ಗಢದ ಯುವಕರಿಗೆ ಕಾಂಗ್ರೆಸ್ ದೊಡ್ಡ ದ್ರೋಹ ಮಾಡಿದೆ. ಅವರು (ಕಾಂಗ್ರೆಸ್) ತಮ್ಮ ಭರವಸೆಗಳನ್ನು ಈಡೇರಿಸಲಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ, ಅವರು ನೇಮಕಾತಿಯಲ್ಲಿ ಭ್ರಷ್ಟಾಚಾರ ಮಾಡಿದರು. ಅವರು ರಾಜ್ಯದ ಪಿಎಸ್‌ಸಿಯನ್ನು ಕಾಂಗ್ರೆಸ್ ಸಮಿತಿಯ ಕಚೇರಿಯನ್ನಾಗಿ ಮಾಡಿದರು.

ಬುಡಕಟ್ಟು ವರ್ಗಕ್ಕೆ ಸೇರಿದ ದೇಶದ ಮೊದಲ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾಂಗ್ರೆಸ್ ಅವಮಾನಿಸಿದೆ. ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬುಡಕಟ್ಟು ಕುಟುಂಬದ ಮಗಳನ್ನು ರಾಷ್ಟ್ರಪತಿ ಮಾಡಲು ಬಿಜೆಪಿ ನಿರ್ಧರಿಸಿದೆ ಆದರೆ ಕಾಂಗ್ರೆಸ್ ಕೂಡ ಅದನ್ನು ವಿರೋಧಿಸಿದೆ ಎಂದು ಮೋದಿ ಹೇಳಿದ್ದಾರೆ

ವಿರೋಧ ಬಿಜೆಪಿ ವಿರುದ್ಧ ಅಲ್ಲ ಬದಲಿಗೆ ಆದಿವಾಸಿ ಮಗಳ ವಿರುದ್ಧ. ಛತ್ತೀಸ್‌ಗಢದ ಪ್ರತಿಯೊಬ್ಬ ಬುಡಕಟ್ಟು ಜನಾಂಗದವರು ಬುಡಕಟ್ಟು ಮಗಳ ಈ ಅವಮಾನವನ್ನು ಯಾವಾಗಲೂ ನೆನಪಿಸಿಕೊಳ್ಳಬೇಕು ಮತ್ತು ಕಾಂಗ್ರೆಸ್‌ ವಿರುದ್ಧ ಸೇಡು ತೀರಿಸಿಕೊಳ್ಳಬೇಕು ಎಂದು ಪ್ರಧಾನಿ ಹೇಳಿದರು.

ಕಾಂಗ್ರೆಸ್ ನಾಯಕರು ಪ್ರತಿ ಹಂತದಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ಮೋದಿ, ಛತ್ತೀಸ್‌ಗಢದಲ್ಲಿ ಕಳೆದ ಐದು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಅದರ ನಾಯಕರ ಬಂಗಲೆಗಳು ಮತ್ತು ಕಾರುಗಳ ಸಂಖ್ಯೆ ಹೆಚ್ಚಾಯಿತು. ಅವರ ಮಕ್ಕಳು ಮತ್ತು ಸಂಬಂಧಿಕರಿಗೆ ಮಾತ್ರ ಲಾಭವಾಗಿದೆ, ಬಡವರಿಗೆ ಅಲ್ಲ ಎಂದು ಪ್ರಧಾನಿ ಹೇಳಿದರು. ಎಂದರು.

ಕಾಂಗ್ರೆಸ್ ಇರುವಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಛತ್ತೀಸ್‌ಗಢವನ್ನು ದೇಶದ ಉನ್ನತ ರಾಜ್ಯಗಳ ಸಾಲಿನಲ್ಲಿ ತರುವುದು ಮತ್ತು ಬಡವರು, ಆದಿವಾಸಿಗಳು ಮತ್ತು ಹಿಂದುಳಿದವರ ಹಿತಾಸಕ್ತಿಗಳನ್ನು ಕಾಪಾಡುವುದು ಬಿಜೆಪಿಯ ನಿರ್ಣಯವಾಗಿದೆ. ಅಭಿವೃದ್ಧಿ ಹೊಂದಿದ ಭಾರತಕ್ಕೆ ಛತ್ತೀಸ್‌ಗಢದ ತ್ವರಿತ ಅಭಿವೃದ್ಧಿ ಅಗತ್ಯ. ಮುಂದಿನ ಐದು ವರ್ಷಗಳಲ್ಲಿ ನಾವು ಸಮೃದ್ಧ ಛತ್ತೀಸ್‌ಗಢದ ಅಡಿಪಾಯವನ್ನು ಬಲಪಡಿಸಬೇಕಾಗಿದೆ ಎಂದು ಮೋದಿ ಹೇಳಿದರು.

ಛತ್ತೀಸ್‌ಗಢದಲ್ಲಿ ರಮಣ್ ಸಿಂಗ್ ನೇತೃತ್ವದಲ್ಲಿ 15 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿ, 2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ  ಹೀನಾಯ ಸೋಲನುಭವಿಸಿತ್ತು. ಅಲ್ಲಿ ಮತ್ತೆ ಅಧಿಕಾರ ಹಿಡಿಯಲು ಪಕ್ಷ ಹವಣಿಸುತ್ತಿದೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯು ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:35 pm, Thu, 2 November 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ