AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Polls 2022: ಮಾ.7ರವರೆಗೂ ಚುನಾವಣೋತ್ತರ ಸಮೀಕ್ಷೆಗಳಿಗೆ ನಿರ್ಬಂಧ, ಉಲ್ಲಂಘಿಸಿದರೆ ಜೈಲು: ಚುನಾವಣಾ ಆಯೋಗದ ಆದೇಶ

ಚುನಾವಣಾ ಆಯೋಗದ ನಿರ್ಬಂಧ ಉಲ್ಲಂಘಿಸಿ ಯಾರಾದರೂ ಎಕ್ಸಿಟ್​ ಪೋಲ್​ ಪ್ರಕಟಿಸಿದರೆ ಅಂಥವರಿಗೆ 2 ವರ್ಷಗಳ ಅವಧಿವರೆಗೆ ಜೈಲು ಶಿಕ್ಷೆ ನೀಡಬಹದು, ದಂಡ ವಿಧಿಸಬಹುದು ಎಂದು ಚುನಾವಣಾ ಆಯೋಗ ಹೊರಡಿಸಿದ ಅಧಿಸೂಚನೆಯಲ್ಲಿ ಉಲ್ಲೇಖವಿದೆ.

Assembly Polls 2022: ಮಾ.7ರವರೆಗೂ ಚುನಾವಣೋತ್ತರ ಸಮೀಕ್ಷೆಗಳಿಗೆ ನಿರ್ಬಂಧ, ಉಲ್ಲಂಘಿಸಿದರೆ ಜೈಲು: ಚುನಾವಣಾ ಆಯೋಗದ ಆದೇಶ
ಚುನಾವಣಾ ಆಯೋಗ
TV9 Web
| Edited By: |

Updated on:Jan 30, 2022 | 8:40 AM

Share

ದೆಹಲಿ: ಗೋವಾ, ಉತ್ತರಪ್ರದೇಶ, ಉತ್ತರಾಖಂಡ್​, ಪಂಜಾಬ್​, ಗೋವಾ, ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆ (Assembly Election 2022) ಸಮೀಪಿಸುತ್ತಿರುವ ಬೆನ್ನಲ್ಲೇ ಚುನಾವಣಾ ಆಯೋಗ (Election Commission)ಮಹತ್ವದ ಆದೇಶ ಹೊರಡಿಸಿದೆ. ಮಾರ್ಚ್​ 7ರವರೆಗೆ ಯಾರೂ ಸಹ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸುವಂತಿಲ್ಲ ಎಂದು ಭಾನುವಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ಯಾವುದೇ ವ್ಯಕ್ತಿ ಚುನಾವಣೋತ್ತರ ಸಮೀಕ್ಷೆ ನಡೆಸಬಾರದು, ಎಕ್ಸಿಟ್​ ಪೋಲ್​ ಫಲಿತಾಂಶವನ್ನು ಮುದ್ರಣ ಮಾಡಬಾರದು ಅಥವಾ ಇನ್ಯಾವುದೇ ರೀತಿಯಲ್ಲೂ ಪ್ರಕಟಿಸಬಾರದು, ಪ್ರಚಾರ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ. 

ಎಕ್ಸಿಟ್​ ಪೋಲ್​​ಗೆ ಹೇರಲಾಗಿರುವ ನಿರ್ಬಂಧ ಫೆ.10ರಿಂದ ಮುಂಜಾನೆ 7ಗಂಟೆಯಿಂದ ಜಾರಿಯಾಗಲಿದ್ದು, ಮಾರ್ಚ್ 7ರ ಸಂಜೆ 6.30ರವರೆಗೆ ಇರಲಿದೆ.  ಅಲ್ಲದೆ ಮತದಾನ ಮುಕ್ತಾಯವಾಗಿ 48 ಗಂಟೆಗಳ ಯಾವುದೇ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅಭಿಪ್ರಾಯ ಸಮೀಕ್ಷೆ ಅಥವಾ ಇನ್ನಿತರ ಸಮೀಕ್ಷೆ ವರದಿ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದೂ ಸಹ ಚುನಾವಣಾ ಆಯೋಗ ಹೇಳಿದೆ. ಅಂದರೆ ಒಟ್ಟು 5 ರಾಜ್ಯಗಳಲ್ಲಿ, ವಿವಿಧ ದಿನಗಳಲ್ಲಿ ಮತದಾನ ನಡೆಯಲಿದೆ. ಆಯಾ ಪ್ರದೇಶದಲ್ಲಿ ನಡೆಯುವ ಮತದಾನಕ್ಕೆ ಇದು ಅನ್ವಯ ಆಗಲಿದೆ.

ಚುನಾವಣಾ ಆಯೋಗದ ನಿರ್ಬಂಧ ಉಲ್ಲಂಘಿಸಿ ಯಾರಾದರೂ ಎಕ್ಸಿಟ್​ ಪೋಲ್​ ಪ್ರಕಟಿಸಿದರೆ ಅಂಥವರಿಗೆ 2 ವರ್ಷಗಳ ಅವಧಿವರೆಗೆ ಜೈಲು ಶಿಕ್ಷೆ ನೀಡಬಹದು, ದಂಡ ವಿಧಿಸಬಹುದು ಅಥವಾ ಜೈಲು ಮತ್ತು ದಂಡ ಎರಡೂ ವಿಧಿಸಬಹುದು ಎಂದೂ ಅಧಿಸೂಚನೆಯಲ್ಲಿ ಉಲ್ಲೇಖವಿದೆ.  ಇನ್ನು ಫೆ.10ರಿಂದ ಒಟ್ಟು ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಪ್ರಾರಂಭವಾಗಲಿದೆ. ಅದರಲ್ಲಿ ಉತ್ತರಪ್ರದೇಶದಲ್ಲಿ ಏಳು ಮತ್ತು ಮಣಿಪುರದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫೆ.10ರಂದು ಉತ್ತರಪ್ರದೇಶದ ಆಯ್ದ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆ.27ರಂದು ಮೊದಲ ಹಂತದ ಮತದಾನ ನಡೆಯುವುದು. ಗೋವಾ, ಉತ್ತರಾಖಂಡ್​​ನಲ್ಲಿ ಫೆ.14ರಂದು ಒಂದೇ ಹಂತದಲ್ಲಿ ಮತದಾನ ಮುಗಿಯುವುದು. ಪಂಜಾಬ್​​ನಲ್ಲಿ ಫೆ.20ರಂದು ಮತದಾನ ನಡೆಯಲಿದೆ. ಎಲ್ಲ ರಾಜ್ಯಗಳ ಮತ ಎಣಿಕೆ ಮಾರ್ಚ್​ 10ಕ್ಕೆ ಇದೆ.

ಇದನ್ನೂ ಓದಿ: ಬಾವಿಗೆ ಬಿದ್ದಿದ್ದ ಮೊಬೈಲ್ ತೆಗೆಯಲು ಹೋಗಿ ಪ್ರಾಣ ಕಳೆದು ಕೊಂಡ ಯುವಕ; 65 ಅಡಿ ಆಳದ ಕಿರು ಬಾವಿಯಲ್ಲಿ ಉಸಿರುಗಟ್ಟಿ ಸಾವು

Published On - 7:57 am, Sun, 30 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ