AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ

Covid Vaccine ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಂದಲೂ ಕ್ರೆಡಿಟ್​ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ
ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on: Mar 06, 2021 | 12:48 PM

Share

ದೆಹಲಿ: ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರೂ ತೆಗೆದುಕೊಂಡಿದ್ದಾರೆ. ಹೀಗೆ ಕೊರೊನಾ ಲಸಿಕೆ (Covid  ಪಡೆದವರಿಗೆ ಒಂದು ಡಿಜಿಟಲ್​ ಸರ್ಟಿಫಿಕೇಟ್​ ನೀಡಲಾಗುತ್ತಿದ್ದು ಅದರ ಕೆಳಗೆ ಮೂಲೆಯಲ್ಲಿ ಮೋದಿಯವರ ಫೋಟೋ ಇದೆ. ಇದರ ಬಗ್ಗೆ ಈಗಾಗಲೇ ಪ್ರತಿಪಕ್ಷಗಳು ಆಕ್ಷೇಪವನ್ನೂ ಎತ್ತಿವೆ. ಲಸಿಕೆ ಹೆಸರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಬ್ಲಿಸಿಟಿ ಪಡೆಯುತ್ತಿದ್ದಾರೆ ಎಂದೂ ಆರೋಪಿಸುತ್ತಿವೆ. ಅದರಲ್ಲಿ ತೃಣಮೂಲ ಕಾಂಗ್ರೆಸ್​ ಒಂದು ಹೆಜ್ಜೆ ಮುಂದೆ ಹೋಗಿ ಚುನಾವಣಾ ಆಯೋಗಕ್ಕೆ ಕೂಡ ದೂರು ಕೊಟ್ಟಿದ್ದರು. ಅದರ ಪರಿಣಾಮವಾಗಿ, ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಪಡೆದವರಿಗೆ ನೀಡುವ ಡಿಜಿಟಲ್​ ಸರ್ಟಿಫಿಕೇಟ್​ನಲ್ಲಿ ಮೋದಿ ಫೋಟೋವನ್ನು ತೆಗೆಯಬೇಕು ಎಂದು ಚುನಾವಣಾ ಆಯೋಗ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.

ಏಪ್ರಿಲ್​ ತಿಂಗಳಲ್ಲಿ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಚುನಾವಣಾ ಆಯೋಗದ ಆದೇಶದ ಅನ್ವಯ ಈ ಎಲ್ಲ ರಾಜ್ಯಗಳಲ್ಲಿ ಲಸಿಕೆ ಪಡೆಯುವವರಿಗೆ ನೀಡುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಹಾಕುವಂತಿಲ್ಲ.

ಚುನಾವಣೆ ಹತ್ತಿರ ಬರುತ್ತಿದೆ. ಈ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್​ ಲಸಿಕೆ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಂದಲೂ ಕ್ರೆಡಿಟ್​ ಪಡೆಯುತ್ತಿದ್ದಾರೆ. ಹಾಗಾಗಿ ಅವರ ಫೋಟೋವನ್ನು ಸರ್ಟಿಫಿಕೇಟ್​​ನಿಂದ ತೆಗೆಯಬೇಕು ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಬಳಿಕ ಆರೋಗ್ಯ ಇಲಾಖೆಗೆ ಪತ್ರ ಬರೆದ EC, ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮಬಂಗಾಳ, ಪುದುಚೇರಿಗಳಲ್ಲಿ ಫೆ.26ರಿಂದ ನೀತಿ ಸಂಹಿತೆ ಜಾರಿಯಾಗಿದೆ. ಅದರ ಅನ್ವಯ ಪ್ರಧಾನಿ ಮೋದಿಯವರ ಫೋಟೋ ಸರ್ಟಿಫಿಕೇಟ್​ನಲ್ಲಿ ಇರುವಂತಿಲ್ಲ ಎಂದು ತಿಳಿಸಿದೆ.

ಎರಡು ಲಸಿಕೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದಾಗಲೂ ಪ್ರತಿಪಕ್ಷಗಳು ಬಿಜೆಪಿ ಲಸಿಕೆ ಎಂದು ಹೇಳಿದ್ದವು. ಲಸಿಕೆ ಹೆಸರಲ್ಲಿ ಕೇಂದ್ರ ಸರ್ಕಾರ ಕ್ರೆಡಿಟ್​ ತೆಗೆದುಕೊಳ್ಳುತ್ತಿದೆ ಎಂದೂ ಆರೋಪಿಸಿದ್ದವು.

ಇದನ್ನೂ ಓದಿ: ಕೊವಿಡ್​ ಲಸಿಕೆ ಬಗ್ಗೆ ನಿಮಗೆ ಗೊತ್ತಿರಬೇಕಾದ Top 9 ಸಂಗತಿಗಳು

How To | ಕೊವಿಡ್-19 ಲಸಿಕೆ ಸ್ವೀಕರಿಸಲು ಹೆಸರು ನೋಂದಣಿ ಹೇಗೆ?

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್