AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ರೆಸಾರ್ಟ್ ವಾಸದ ಬೆನ್ನಲ್ಲೇ  ತಮ್ಮ ಅಭ್ಯರ್ಥಿಗಳಿಗೆ ಕಾವಲಾಗಿ ನಿಂತ ಎಎಪಿ

Goa Assembly Election ಕಾಂಗ್ರೆಸ್ ತನ್ನ ಶಾಸಕ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಿದ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷವೂ ತನ್ನ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಎಎಪಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗೋವಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ರೆಸಾರ್ಟ್ ವಾಸದ ಬೆನ್ನಲ್ಲೇ  ತಮ್ಮ ಅಭ್ಯರ್ಥಿಗಳಿಗೆ ಕಾವಲಾಗಿ ನಿಂತ ಎಎಪಿ
ಅರವಿಂದ ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 09, 2022 | 3:17 PM

ಪಂಜಿಂ: ಗೋವಾದಲ್ಲಿ (Goa Election) ಕಾಂಗ್ರೆಸ್ ತನ್ನ ಶಾಸಕ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಿದ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷವೂ(AAP) ತನ್ನ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಎಎಪಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಗೋವಾದಲ್ಲಿ ಅತಂತ್ರ  ಅಸೆಂಬ್ಲಿ ಮತ್ತು ಬಿಜೆಪಿಯೊಂದಿಗೆ ಕಾಂಗ್ರೆಸ್‌ನ  ಜಿದ್ದಾಜಿದ್ದಿ ಪೈಪೋಟಿ ಭವಿಷ್ಯವಾಣಿಯೊಂದಿಗೆ 2017 ರ ಪುನರಾವರ್ತನೆಯನ್ನು ತಪ್ಪಿಸಲು ಎಎಪಿ ಮತ್ತು ಕಾಂಗ್ರೆಸ್ ಎರಡೂ ತಮ್ಮ ಅಭ್ಯರ್ಥಿಗಳಿಗೆ ಕಾವಲಿರಲು ನಿರ್ಧರಿಸಿವೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಉತ್ತರ ಗೋವಾದ ರೆಸಾರ್ಟ್‌ಗೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ. ಅವರು ಗುರುವಾರದ ಮತ ಎಣಿಕೆ ಮುಗಿದು ಫಲಿತಾಂಶ ಹೊರಬೀಳುವವರೆಗೆ ಅಲ್ಲಿಯೇ ಇರುತ್ತಾರೆ. ಚುನಾವಣೋತ್ತರ ಸಮೀಕ್ಷೆಗಳು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ಗೆ ಮೂರು ಸ್ಥಾನಗಳನ್ನು ಭವಿಷ್ಯ ನುಡಿದಿವೆ. ಆಮ್ ಆದ್ಮಿ ಪಕ್ಷಕ್ಕೆ ಯಾವುದೇ ಸ್ಥಾನ ಸಿಗುವುದಿಲ್ಲ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿವೆ. ಆದರೆ ಕಳೆದ ಬಾರಿಯ ಫಲಿತಾಂಶವನ್ನು ಗಮನಿಸಿದರೆ ಕಾಂಗ್ರೆಸ್ ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳುತ್ತಿಲ್ಲ. ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಮುನ್ನ ಗೋವಾದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಮಂಗಳವಾರ ಎನ್‌ಡಿಟಿವಿ ಜತೆ ಮಾತನಾಡಿದ್ದು ತಮ್ಮ ಪಕ್ಷವು “ಅಭ್ಯರ್ಥಿಗಳನ್ನು ಕದಿಯುವವರ” ವಿರುದ್ಧ ಕಾವಲು ಕಾಯುತ್ತಿದೆ ಎಂದು ಹೇಳಿದ್ದಾರೆ. 2017 ರ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ, ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಕಾಂಗ್ರೆಸ್ ಗೋವಾದಲ್ಲಿ ಸರ್ಕಾರ ರಚಿಸಲು ವಿಫಲವಾದಾಗ, ಪಕ್ಷವು ತನ್ನ ಮನೆಯನ್ನು ಹೆಚ್ಚು ಪ್ರಬಲವಾಗಿ ಕಾಪಾಡುತ್ತಿದೆ. ಈ ಬಾರಿ  ಅಭ್ಯರ್ಥಿಗಳನ್ನು “ಕಳವು” ಮಾಡಲು ಬಿಡುವುದಿಲ್ಲ ಎಂದು ಹೇಳಿದರು.

“ಬಿಜೆಪಿ ವಿರೋಧಿ ರಂಗ”ಕ್ಕಾಗಿ ಕಾಂಗ್ರೆಸ್ ಇತರ ಪಕ್ಷಗಳೊಂದಿಗೆ ಸಂಪರ್ಕದಲ್ಲಿದೆ. ಬಂಗಾಳ ಮತ್ತು ದೆಹಲಿಯಂತಹ ಇತರ ರಾಜ್ಯಗಳಲ್ಲಿ ತಿಳಿದಿರುವ ವಿರೋಧಿಗಳಾದ ಎಎಪಿ ಮತ್ತು ಟಿಎಂಸಿಯೊಂದಿಗೆ ನೀವು ಸಂಪರ್ಕದಲ್ಲಿದ್ದಾರೆಯೇ ಎಂದು ಎನ್‌ಡಿಟಿವಿ ಕೇಳಿದ ಪ್ರಶ್ನೆಗೆ, ಚಿದಂಬರಂ ಅವರು, “ನಾವು ನೇರವಾಗಿ ಅಲ್ಲ, ಆದರೆ ನಮ್ಮ ಪಕ್ಷದ ಗೋವಾ ನಾಯಕರು ಇತರ ಪಕ್ಷಗಳ ಗೋವಾ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದರು.

ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ತೃಣಮೂಲ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಮೈತ್ರಿಯನ್ನು ಈ ಹಿಂದೆ ಪ್ರಸ್ತಾಪಿಸಿತ್ತು. ಆದರೆ ಚಿದಂಬರಂ ಅವರು ಗೋವಾದಲ್ಲಿ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾಪವನ್ನು “ಪರಿಗಣಿಸಲಾಗಿಲ್ಲ” ಎಂದು ಹೇಳಿದರು.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆದಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: Goa Assembly Election: ಗೋವಾದಲ್ಲಿ ಅಧಿಕಾರಕ್ಕೇರಲು ಟಿಎಂಸಿ, ಆಮ್ ಆದ್ಮಿ ಜೊತೆ ಮೈತ್ರಿಗೆ ಕಾಂಗ್ರೆಸ್ ಸಿದ್ಧತೆ

ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!