AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goa Assembly Election 2022: ಗೋವಾದಲ್ಲಿ ಆಮ್​ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಮಿತ್ ಪಾಲೇಕರ್​; ಅರವಿಂದ್ ಕೇಜ್ರಿವಾಲ್​ ಘೋಷಣೆ

Amit Palekar: ಅಮಿತ್ ಪಾಲೇಕರ್​ ಹಿರಿಯ ನ್ಯಾಯವಾದಿ ಮತ್ತು ಸಾಮಾಜಿಕ ಕಾರ್ಯಕರ್ತರಾಗಿದ್ದರು. 2021ರ ಆಗಸ್ಟ್​​ನಲ್ಲಿ ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಗೋವಾದ ಸೇಂಟ್​ಕ್ರೂಜ್​ ನಿವಾಸಿ.

Goa Assembly Election 2022: ಗೋವಾದಲ್ಲಿ ಆಮ್​ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಮಿತ್ ಪಾಲೇಕರ್​; ಅರವಿಂದ್ ಕೇಜ್ರಿವಾಲ್​ ಘೋಷಣೆ
ಅಮಿತ್ ಪಾಲೇಕರ್​ ಜತೆ ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on:Jan 19, 2022 | 12:49 PM

Share

ಫೆ.10ರಿಂದ ಪ್ರಾರಂಭವಾಗಲಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ  ಪಂಜಾಬ್​, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ನಿನ್ನೆಯಷ್ಟೇ ಪಂಜಾಬ್​​ನಲ್ಲಿ ಆಪ್​ ಮುಖ್ಯಮಂತ್ರಿ ಅಭ್ಯರ್ಥಿಯ ಘೋಷಣೆಯಾಗಿತ್ತು. ಹಾಗೇ, ಇಂದು ಗೋವಾದಲ್ಲಿ ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಅದರಂತೆ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಪ್​ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಅಮಿತ್ ಪಾಲೇಕರ್.  ಇಂದು ಸುದ್ದಿಗೋಷ್ಠಿ ನಡೆಸಿದ ಅರವಿಂದ್ ಕೇಜ್ರಿವಾಲ್​ ಈ ಘೋಷಣೆ ಮಾಡಿದ್ದು, ಗೋವಾದ ಒಟ್ಟು 40 ವಿಧಾನಸಭಾ ಕ್ಷೇತ್ರಗಳಲ್ಲಿ ಆಮ್​ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಎಂದೂ ಹೇಳಿದ್ದಾರೆ. ಅಂದಹಾಗೆ, ಈ ಪಕ್ಷ 2017ರ ಗೋವಾ ಚುನಾವಣೆಯಲ್ಲಿ ಒಂದೇ ಒಂದೂ ಕ್ಷೇತ್ರವನ್ನೂ ಗೆದ್ದಿರಲಿಲ್ಲ.

ಅಮಿತ್ ಪಾಲೇಕರ್​ ಹಿರಿಯ ನ್ಯಾಯವಾದಿ ಮತ್ತು ಸಾಮಾಜಿಕ ಕಾರ್ಯಕರ್ತರಾಗಿದ್ದರು. 2021ರ ಆಗಸ್ಟ್​​ನಲ್ಲಿ ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಗೋವಾದ ಸೇಂಟ್​ಕ್ರೂಜ್​ ನಿವಾಸಿ. ಮೊದಲಿನಿಂದಲೂ ಸಾಮಾಜಿಕ ಕಾರ್ಯಕರ್ತನಾಗಿದ್ದ ಅವರು, ಆಮ್​ ಆದ್ಮಿ ಪಕ್ಷಕ್ಕೆ ನಾನು ಸೇರ್ಪಡೆಯಾಗಲು ಕಾರಣ, ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ಕೊಡುವ ಏಕೈಕ ಪಕ್ಷ ಇದು ಎಂದು ಹೇಳಿದ್ದರು.  ಹಾಗೇ ಅರವಿಂದ್ ಕೇಜ್ರಿವಾಲ್​ರನ್ನು ಶ್ಲಾಘಿಸಿದ್ದರು.

ಗೋವಾದ ಕೊರ್ಟಾಲಿಮ್​ ಎಂಬ ಹಳ್ಳಿಯಲ್ಲಿ ಭಾನುವಾರ ಮನೆಮನೆ ಪ್ರಚಾರ ನಡೆಸಿದ್ದ ಅರವಿಂದ್ ಕೇಜ್ರಿವಾಲ್​ ಮತ್ತು ಇತರ ಆಪ್​ ಸದಸ್ಯರು, ಅಲ್ಲಿನ ಜನರೊಂದಿಗೆ ಸಂವಾದ ನಡೆಸಿದ್ದರು.  ಈ ವೇಳೆ ಮಾತನಾಡಿದ್ದ ಅರವಿಂದ್ ಕೇಜ್ರಿವಾಲ್​, ಗೋವಾದ ಜನರು ಆಮ್​ ಆದ್ಮಿ ಪಕ್ಷಕ್ಕೆ ಮತ ಹಾಕಲು ಉತ್ಸುಕರಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಬದಲಾವಣೆ ಬೇಕಾಗಿದೆ. ದೆಹಲಿಯಲ್ಲಿ ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಇಲ್ಲಿನ ಜನರಿಗೆ ಗೊತ್ತಿದೆ. ಈ ರಾಜ್ಯದಲ್ಲಿ ಕೂಡ ಹಾಗೇ ಅಭಿವೃದ್ಧಿಯಾಗಬೇಕು ಎಂಬುದು ಇಲ್ಲಿನವರ ಬಯಕೆ ಎಂದು ಹೇಳಿದ್ದರು. ಗೋವಾದಲ್ಲಿ ಫೆ.14ರಂದು ಮತದಾನ ನಡೆಯಲಿದ್ದು, ಮಾರ್ಚ್​ 10ರಂದು ಮತಎಣಿಕೆ ನಡೆಯಲಿದೆ.

ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಶಿಕ್ಷಣ, ಆರೋಗ್ಯ, ಉದ್ಯಮ, ವ್ಯಾಪಾರ, ಗಣಿಗಾರಿಕೆ, ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಅರವಿಂದ್ ಕೇಜ್ರಿವಾಲ್​ ಈಗಾಗಲೇ ಭರವಸೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ನಿರುದ್ಯೋಗಿಗಳಿಗೆ, ಉದ್ಯೋಗ ಸಿಗುವವರೆಗೂ ಮಾಸಿಕ 3 ಸಾವಿರ ರೂಪಾಯಿ ಭತ್ಯೆ ನೀಡುವ ಘೋಷಣೆಯನ್ನೂ ಹಿಂದೆಯೇ ಮಾಡಿದ್ದಾರೆ. ಪಂಜಾಬ್​, ಉತ್ತರಾಖಂಡ್​​ಗಳಲ್ಲೂ ಕೂಡ ಇಂಥ ಹತ್ತು-ಹಲವು ಆಕರ್ಷಕ ಭರವಸೆಯನ್ನು ಅರವಿಂದ್ ಕೇಜ್ರಿವಾಲ್​ ನೀಡಿದ್ದಾರೆ. ಇನ್ನು ಪಂಜಾಬ್​ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ  ಭಗವಂತ್ ಮಾನ್​ ಅವರನ್ನು ಆಪ್ ಆಯ್ಕೆ ಮಾಡಿದೆ.

ಇದನ್ನೂ ಓದಿ: ಒಂದು ಹುಡುಗಾಟದಿಂದ ಜಗತ್ತಿನಾದ್ಯಂತ ಸುದ್ದಿಯಾದ ಹಳದಿ ಕಾರಿನ ಹುಡುಗಿ; ಎಚ್ಚರತಪ್ಪಿದ್ದರೆ ಜೀವ ಹೋಗುತ್ತಿತ್ತು !

Published On - 12:32 pm, Wed, 19 January 22

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು