AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goa Assembly Election 2022: ಗೋವಾದಲ್ಲಿ ಆಮ್​ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಮಿತ್ ಪಾಲೇಕರ್​; ಅರವಿಂದ್ ಕೇಜ್ರಿವಾಲ್​ ಘೋಷಣೆ

Amit Palekar: ಅಮಿತ್ ಪಾಲೇಕರ್​ ಹಿರಿಯ ನ್ಯಾಯವಾದಿ ಮತ್ತು ಸಾಮಾಜಿಕ ಕಾರ್ಯಕರ್ತರಾಗಿದ್ದರು. 2021ರ ಆಗಸ್ಟ್​​ನಲ್ಲಿ ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಗೋವಾದ ಸೇಂಟ್​ಕ್ರೂಜ್​ ನಿವಾಸಿ.

Goa Assembly Election 2022: ಗೋವಾದಲ್ಲಿ ಆಮ್​ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಮಿತ್ ಪಾಲೇಕರ್​; ಅರವಿಂದ್ ಕೇಜ್ರಿವಾಲ್​ ಘೋಷಣೆ
ಅಮಿತ್ ಪಾಲೇಕರ್​ ಜತೆ ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on:Jan 19, 2022 | 12:49 PM

Share

ಫೆ.10ರಿಂದ ಪ್ರಾರಂಭವಾಗಲಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ  ಪಂಜಾಬ್​, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ನಿನ್ನೆಯಷ್ಟೇ ಪಂಜಾಬ್​​ನಲ್ಲಿ ಆಪ್​ ಮುಖ್ಯಮಂತ್ರಿ ಅಭ್ಯರ್ಥಿಯ ಘೋಷಣೆಯಾಗಿತ್ತು. ಹಾಗೇ, ಇಂದು ಗೋವಾದಲ್ಲಿ ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಅದರಂತೆ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಪ್​ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಅಮಿತ್ ಪಾಲೇಕರ್.  ಇಂದು ಸುದ್ದಿಗೋಷ್ಠಿ ನಡೆಸಿದ ಅರವಿಂದ್ ಕೇಜ್ರಿವಾಲ್​ ಈ ಘೋಷಣೆ ಮಾಡಿದ್ದು, ಗೋವಾದ ಒಟ್ಟು 40 ವಿಧಾನಸಭಾ ಕ್ಷೇತ್ರಗಳಲ್ಲಿ ಆಮ್​ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಎಂದೂ ಹೇಳಿದ್ದಾರೆ. ಅಂದಹಾಗೆ, ಈ ಪಕ್ಷ 2017ರ ಗೋವಾ ಚುನಾವಣೆಯಲ್ಲಿ ಒಂದೇ ಒಂದೂ ಕ್ಷೇತ್ರವನ್ನೂ ಗೆದ್ದಿರಲಿಲ್ಲ.

ಅಮಿತ್ ಪಾಲೇಕರ್​ ಹಿರಿಯ ನ್ಯಾಯವಾದಿ ಮತ್ತು ಸಾಮಾಜಿಕ ಕಾರ್ಯಕರ್ತರಾಗಿದ್ದರು. 2021ರ ಆಗಸ್ಟ್​​ನಲ್ಲಿ ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಗೋವಾದ ಸೇಂಟ್​ಕ್ರೂಜ್​ ನಿವಾಸಿ. ಮೊದಲಿನಿಂದಲೂ ಸಾಮಾಜಿಕ ಕಾರ್ಯಕರ್ತನಾಗಿದ್ದ ಅವರು, ಆಮ್​ ಆದ್ಮಿ ಪಕ್ಷಕ್ಕೆ ನಾನು ಸೇರ್ಪಡೆಯಾಗಲು ಕಾರಣ, ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ಕೊಡುವ ಏಕೈಕ ಪಕ್ಷ ಇದು ಎಂದು ಹೇಳಿದ್ದರು.  ಹಾಗೇ ಅರವಿಂದ್ ಕೇಜ್ರಿವಾಲ್​ರನ್ನು ಶ್ಲಾಘಿಸಿದ್ದರು.

ಗೋವಾದ ಕೊರ್ಟಾಲಿಮ್​ ಎಂಬ ಹಳ್ಳಿಯಲ್ಲಿ ಭಾನುವಾರ ಮನೆಮನೆ ಪ್ರಚಾರ ನಡೆಸಿದ್ದ ಅರವಿಂದ್ ಕೇಜ್ರಿವಾಲ್​ ಮತ್ತು ಇತರ ಆಪ್​ ಸದಸ್ಯರು, ಅಲ್ಲಿನ ಜನರೊಂದಿಗೆ ಸಂವಾದ ನಡೆಸಿದ್ದರು.  ಈ ವೇಳೆ ಮಾತನಾಡಿದ್ದ ಅರವಿಂದ್ ಕೇಜ್ರಿವಾಲ್​, ಗೋವಾದ ಜನರು ಆಮ್​ ಆದ್ಮಿ ಪಕ್ಷಕ್ಕೆ ಮತ ಹಾಕಲು ಉತ್ಸುಕರಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಬದಲಾವಣೆ ಬೇಕಾಗಿದೆ. ದೆಹಲಿಯಲ್ಲಿ ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಇಲ್ಲಿನ ಜನರಿಗೆ ಗೊತ್ತಿದೆ. ಈ ರಾಜ್ಯದಲ್ಲಿ ಕೂಡ ಹಾಗೇ ಅಭಿವೃದ್ಧಿಯಾಗಬೇಕು ಎಂಬುದು ಇಲ್ಲಿನವರ ಬಯಕೆ ಎಂದು ಹೇಳಿದ್ದರು. ಗೋವಾದಲ್ಲಿ ಫೆ.14ರಂದು ಮತದಾನ ನಡೆಯಲಿದ್ದು, ಮಾರ್ಚ್​ 10ರಂದು ಮತಎಣಿಕೆ ನಡೆಯಲಿದೆ.

ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಶಿಕ್ಷಣ, ಆರೋಗ್ಯ, ಉದ್ಯಮ, ವ್ಯಾಪಾರ, ಗಣಿಗಾರಿಕೆ, ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಅರವಿಂದ್ ಕೇಜ್ರಿವಾಲ್​ ಈಗಾಗಲೇ ಭರವಸೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ನಿರುದ್ಯೋಗಿಗಳಿಗೆ, ಉದ್ಯೋಗ ಸಿಗುವವರೆಗೂ ಮಾಸಿಕ 3 ಸಾವಿರ ರೂಪಾಯಿ ಭತ್ಯೆ ನೀಡುವ ಘೋಷಣೆಯನ್ನೂ ಹಿಂದೆಯೇ ಮಾಡಿದ್ದಾರೆ. ಪಂಜಾಬ್​, ಉತ್ತರಾಖಂಡ್​​ಗಳಲ್ಲೂ ಕೂಡ ಇಂಥ ಹತ್ತು-ಹಲವು ಆಕರ್ಷಕ ಭರವಸೆಯನ್ನು ಅರವಿಂದ್ ಕೇಜ್ರಿವಾಲ್​ ನೀಡಿದ್ದಾರೆ. ಇನ್ನು ಪಂಜಾಬ್​ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ  ಭಗವಂತ್ ಮಾನ್​ ಅವರನ್ನು ಆಪ್ ಆಯ್ಕೆ ಮಾಡಿದೆ.

ಇದನ್ನೂ ಓದಿ: ಒಂದು ಹುಡುಗಾಟದಿಂದ ಜಗತ್ತಿನಾದ್ಯಂತ ಸುದ್ದಿಯಾದ ಹಳದಿ ಕಾರಿನ ಹುಡುಗಿ; ಎಚ್ಚರತಪ್ಪಿದ್ದರೆ ಜೀವ ಹೋಗುತ್ತಿತ್ತು !

Published On - 12:32 pm, Wed, 19 January 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್