AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ವಿಧಾನಸಭೆ ಚುನಾವಣೆ; ತುಂಬ ಆಸೆಯಿಂದ ಇದ್ದ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್​ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್​

ಸಿದ್ದೇಶ್​ ನಾಯ್ಕ್​ ಕುಂಭರ್ಜುವಾ ಕ್ಷೇತ್ರದಿಂದ ಟಿಕೆಟ್​ ಸಿಗುವ ಭರವಸೆಯಲ್ಲಿ ಇದ್ದರು. ಆದರೆ ಮನೋಹರ್ ಪರಿಕ್ಕರ್​ ಪುತ್ರ ಉತ್ಪಾಲ್​ ಪರಿಕ್ಕರ್​ರಂತೆಯೇ ಇವರಿಗೂ ನಿರಾಸೆಯೇ ಆಗಿದೆ.

ಗೋವಾ ವಿಧಾನಸಭೆ ಚುನಾವಣೆ; ತುಂಬ ಆಸೆಯಿಂದ ಇದ್ದ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್​ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್​
ಸಿದ್ದೇಶ್​ ನಾಯ್ಕ್​
TV9 Web
| Edited By: |

Updated on: Jan 26, 2022 | 5:52 PM

Share

ಪಣಜಿ: ಗೋವಾ ವಿಧಾನಸಭೆ ಚುನಾವಣೆ (Goa Assembly Election 2022) ಹಿನ್ನೆಲೆಯಲ್ಲಿ ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಕೊನೆಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೊನೆಯ ಲಿಸ್ಟ್​ನಲ್ಲೂ ಕೂಡ ಕೇಂದ್ರ ಸಚಿವ ಶ್ರೀಪಾದ್​ ನಾಯ್ಕ್​ ಅವರ ಪುತ್ರ ಸಿದ್ದೇಶ್​ ನಾಯ್ಕ್​ ಹೆಸರಿಲ್ಲ. ಕೇಂದ್ರ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್​ ಪುತ್ರ ಉತ್ಪಾಲ್​ ಪರಿಕ್ಕರ್​ಗೆ ಕೂಡ ಬಿಜೆಪಿ ಈ ಚುನಾವಣೆಯಲ್ಲಿ ಟಿಕೆಟ್ ನೀಡಲಿಲ್ಲ. ಪಣಜಿ ಕ್ಷೇತ್ರದಿಂದ, ಬಿಜೆಪಿಯಿಂದಲೇ ಸ್ಪರ್ಧಿಸುವ ಆಸೆ ಹೊತ್ತಿದ್ದ ಅವರು, ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆದಿದ್ದಾರೆ. ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಅದರ ಬೆನ್ನಲ್ಲೇ ಈಗ ಬಿಜೆಪಿ ಇನ್ನೊಬ್ಬರು ಸಚಿವರ ಪುತ್ರನಿಗೂ ಟಿಕೆಟ್​ ನೀಡಲಿಲ್ಲ. ಅಂದಹಾಗೆ, ಸಿದ್ದೇಶ್​ ನಾಯ್ಕ್​ ಕುಂಭರ್ಜುವಾ ಕ್ಷೇತ್ರದಿಂದ ಟಿಕೆಟ್​ ಸಿಗುವ ಭರವಸೆಯಲ್ಲಿ ಇದ್ದರು.

ಪ್ರಸಕ್ತ ಗೋವಾ ವಿಧಾನಸಭೆ ಸ್ಪೀಕರ್ ಆಗಿರುವ ರಾಜೇಶ್​ ಪಟ್ನೇಕರ್​ ವಿಧಾನಸಭೆ ಚುನಾವಣೆಯಲ್ಲಿ ಅವರ ಸ್ವಕ್ಷೇತ್ರವಾದ ಬಿಚೋಲಿಮ್​ನಿಂದ ಸ್ಪರ್ಧಿಸಲಿದ್ದಾರೆ. ಹಾಗೇ, ಬಿಜೆಪಿ ಶಾಸಕ, ಮಾಜಿ ಸಚಿವ ಪಾಂಡುರಂಗ ಮಡ್ಕೈಕರ್ ಅವರ ಪತ್ನಿ ಜೈನಿತಾ ಅವರಿಗೂ ಸಹ ಬಿಜೆಪಿ ಟಿಕೆಟ್​ ನೀಡಿದೆ.

ತಮಗೆ ಟಿಕೆಟ್ ನೀಡದೆ ಇರುವುದಕ್ಕೆ ಉತ್ಪಾಲ್​ ಪರಿಕ್ಕರ್​ ತುಂಬ ಬೇಸರ ವ್ಯಕ್ತಪಡಿಸಿದ್ದರು. ನೋವಿನಿಂದ ಮಾತನಾಡಿದ್ದ ಅವರು,  2019ರಲ್ಲಿ ನಡೆದ ಗೋವಾ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ (ಮನೋಹರ್ ಪರಿಕ್ಕರ್​ ನಿಧನದ ನಂತರ ನಡೆದ ಚುನಾವಣೆ)ನಾನು ಕೆಲಸ ಮಾಡಿದ್ದೇನೆ. ಈ ಪಕ್ಷದಲ್ಲಿ ಕಳೆದ 30ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಬೆಂಬಲ ನನಗೆ ಇದೆ ಎಂಬುದನ್ನು ಬಿಜೆಪಿ ವರಿಷ್ಠರಿಗೆ ಮನವರಿಕೆ ಮಾಡಲು ಕೈಲಾದಷ್ಟರ ಮಟ್ಟಿಗೆ ಪ್ರಯತ್ನ ಪಟ್ಟಿದ್ದೇನೆ. ಇಲ್ಲಿನ ಕಾರ್ಯಕರ್ತರು ಅಂದು ಪಕ್ಷ ಕಟ್ಟಲು ನನ್ನ ತಂದೆಯವರೊಂದಿಗೆ ಶ್ರಮಿಸಿದ್ದರು. ಅವರೆಲ್ಲರೂ ಈಗ ನನ್ನ ಜೊತೆ ಇದ್ದು, ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಪಣಜಿಯ ಜನರ ಬೆಂಬಲವೂ ನನಗಿತ್ತು. ಹಾಗಿದ್ದಾಗ್ಯೂ ಪಣಜಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ನನಗೆ ಟಿಕೆಟ್​ ಸಿಗಲಿಲ್ಲ ಎಂದು  ಹೇಳಿದ್ದರು.

ಇದನ್ನೂ ಓದಿ: ಮಿನ್ನಲ್​ ಮುರಳಿ ಚಿತ್ರದ ಹೀರೋನಂತೆ ರೆಡಿಯಾಗಿ ಪೋಸ್ಟ್​ ವೆಡ್ಡಿಂಗ್​ ಫೋಟೋಶೂಟ್​ ಮಾಡಿಸಿದ ವರ

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ