AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ವಿಧಾನಸಭೆ ಚುನಾವಣೆ; ತುಂಬ ಆಸೆಯಿಂದ ಇದ್ದ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್​ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್​

ಸಿದ್ದೇಶ್​ ನಾಯ್ಕ್​ ಕುಂಭರ್ಜುವಾ ಕ್ಷೇತ್ರದಿಂದ ಟಿಕೆಟ್​ ಸಿಗುವ ಭರವಸೆಯಲ್ಲಿ ಇದ್ದರು. ಆದರೆ ಮನೋಹರ್ ಪರಿಕ್ಕರ್​ ಪುತ್ರ ಉತ್ಪಾಲ್​ ಪರಿಕ್ಕರ್​ರಂತೆಯೇ ಇವರಿಗೂ ನಿರಾಸೆಯೇ ಆಗಿದೆ.

ಗೋವಾ ವಿಧಾನಸಭೆ ಚುನಾವಣೆ; ತುಂಬ ಆಸೆಯಿಂದ ಇದ್ದ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್​ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್​
ಸಿದ್ದೇಶ್​ ನಾಯ್ಕ್​
TV9 Web
| Edited By: |

Updated on: Jan 26, 2022 | 5:52 PM

Share

ಪಣಜಿ: ಗೋವಾ ವಿಧಾನಸಭೆ ಚುನಾವಣೆ (Goa Assembly Election 2022) ಹಿನ್ನೆಲೆಯಲ್ಲಿ ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಕೊನೆಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೊನೆಯ ಲಿಸ್ಟ್​ನಲ್ಲೂ ಕೂಡ ಕೇಂದ್ರ ಸಚಿವ ಶ್ರೀಪಾದ್​ ನಾಯ್ಕ್​ ಅವರ ಪುತ್ರ ಸಿದ್ದೇಶ್​ ನಾಯ್ಕ್​ ಹೆಸರಿಲ್ಲ. ಕೇಂದ್ರ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್​ ಪುತ್ರ ಉತ್ಪಾಲ್​ ಪರಿಕ್ಕರ್​ಗೆ ಕೂಡ ಬಿಜೆಪಿ ಈ ಚುನಾವಣೆಯಲ್ಲಿ ಟಿಕೆಟ್ ನೀಡಲಿಲ್ಲ. ಪಣಜಿ ಕ್ಷೇತ್ರದಿಂದ, ಬಿಜೆಪಿಯಿಂದಲೇ ಸ್ಪರ್ಧಿಸುವ ಆಸೆ ಹೊತ್ತಿದ್ದ ಅವರು, ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆದಿದ್ದಾರೆ. ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಅದರ ಬೆನ್ನಲ್ಲೇ ಈಗ ಬಿಜೆಪಿ ಇನ್ನೊಬ್ಬರು ಸಚಿವರ ಪುತ್ರನಿಗೂ ಟಿಕೆಟ್​ ನೀಡಲಿಲ್ಲ. ಅಂದಹಾಗೆ, ಸಿದ್ದೇಶ್​ ನಾಯ್ಕ್​ ಕುಂಭರ್ಜುವಾ ಕ್ಷೇತ್ರದಿಂದ ಟಿಕೆಟ್​ ಸಿಗುವ ಭರವಸೆಯಲ್ಲಿ ಇದ್ದರು.

ಪ್ರಸಕ್ತ ಗೋವಾ ವಿಧಾನಸಭೆ ಸ್ಪೀಕರ್ ಆಗಿರುವ ರಾಜೇಶ್​ ಪಟ್ನೇಕರ್​ ವಿಧಾನಸಭೆ ಚುನಾವಣೆಯಲ್ಲಿ ಅವರ ಸ್ವಕ್ಷೇತ್ರವಾದ ಬಿಚೋಲಿಮ್​ನಿಂದ ಸ್ಪರ್ಧಿಸಲಿದ್ದಾರೆ. ಹಾಗೇ, ಬಿಜೆಪಿ ಶಾಸಕ, ಮಾಜಿ ಸಚಿವ ಪಾಂಡುರಂಗ ಮಡ್ಕೈಕರ್ ಅವರ ಪತ್ನಿ ಜೈನಿತಾ ಅವರಿಗೂ ಸಹ ಬಿಜೆಪಿ ಟಿಕೆಟ್​ ನೀಡಿದೆ.

ತಮಗೆ ಟಿಕೆಟ್ ನೀಡದೆ ಇರುವುದಕ್ಕೆ ಉತ್ಪಾಲ್​ ಪರಿಕ್ಕರ್​ ತುಂಬ ಬೇಸರ ವ್ಯಕ್ತಪಡಿಸಿದ್ದರು. ನೋವಿನಿಂದ ಮಾತನಾಡಿದ್ದ ಅವರು,  2019ರಲ್ಲಿ ನಡೆದ ಗೋವಾ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ (ಮನೋಹರ್ ಪರಿಕ್ಕರ್​ ನಿಧನದ ನಂತರ ನಡೆದ ಚುನಾವಣೆ)ನಾನು ಕೆಲಸ ಮಾಡಿದ್ದೇನೆ. ಈ ಪಕ್ಷದಲ್ಲಿ ಕಳೆದ 30ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಬೆಂಬಲ ನನಗೆ ಇದೆ ಎಂಬುದನ್ನು ಬಿಜೆಪಿ ವರಿಷ್ಠರಿಗೆ ಮನವರಿಕೆ ಮಾಡಲು ಕೈಲಾದಷ್ಟರ ಮಟ್ಟಿಗೆ ಪ್ರಯತ್ನ ಪಟ್ಟಿದ್ದೇನೆ. ಇಲ್ಲಿನ ಕಾರ್ಯಕರ್ತರು ಅಂದು ಪಕ್ಷ ಕಟ್ಟಲು ನನ್ನ ತಂದೆಯವರೊಂದಿಗೆ ಶ್ರಮಿಸಿದ್ದರು. ಅವರೆಲ್ಲರೂ ಈಗ ನನ್ನ ಜೊತೆ ಇದ್ದು, ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಪಣಜಿಯ ಜನರ ಬೆಂಬಲವೂ ನನಗಿತ್ತು. ಹಾಗಿದ್ದಾಗ್ಯೂ ಪಣಜಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ನನಗೆ ಟಿಕೆಟ್​ ಸಿಗಲಿಲ್ಲ ಎಂದು  ಹೇಳಿದ್ದರು.

ಇದನ್ನೂ ಓದಿ: ಮಿನ್ನಲ್​ ಮುರಳಿ ಚಿತ್ರದ ಹೀರೋನಂತೆ ರೆಡಿಯಾಗಿ ಪೋಸ್ಟ್​ ವೆಡ್ಡಿಂಗ್​ ಫೋಟೋಶೂಟ್​ ಮಾಡಿಸಿದ ವರ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು