AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat, HP Assembly Election 2022: ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗೆ ಇಂದು ದಿನಾಂಕ ನಿಗದಿ

ಎಲ್ಲ ರಾಜಕೀಯ ಪಕ್ಷಗಳೂ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿವೆ.

Gujarat, HP Assembly Election 2022: ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗೆ ಇಂದು ದಿನಾಂಕ ನಿಗದಿ
ಚುನಾವಣಾ ಆಯೋಗ
TV9 Web
| Edited By: |

Updated on:Oct 14, 2022 | 11:00 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ತವರು ರಾಜ್ಯ ಗುಜರಾತ್ (Gujarat) ಮತ್ತು ಚುನಾವಣಾ ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವ ಪಡೆದಿರುವ ಹಿಮಾಚಲ ಪ್ರದೇಶ (Himachal Pradesh) ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು (Election Commission of India – EC) ಇಂದು (ಅ 14) ಮಧ್ಯಾಹ್ನ ದಿನಾಂಕ ಘೋಷಿಸಲಿದೆ. ಗುಜರಾತ್​ನಲ್ಲಿ ಆಮ್ ಆದ್ಮಿ ಪಕ್ಷವು (ಆಪ್) ಚಟುವಟಿಕೆ ಚುರುಕುಗೊಳಿಸಿದ್ದು, ಪಂಜಾಬ್ ಮಾದರಿಯ ಫಲಿತಾಂಶ ಮರುಕಳಿಸುವ ವಿಶ್ವಾಸದಲ್ಲಿದೆ. ಲೋಕಸಭೆ ಚುನಾವಣೆ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಶೀಘ್ರದಲ್ಲಿಯೇ ನಡೆಯುವ ಚುನಾವಣೆಗಳ ಮೇಲೆ ಈ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪರಿಣಾಮ ಬೀರುವ ನಿರೀಕ್ಷೆಯಿರುವುದರಿಂದ ಎಲ್ಲ ರಾಜಕೀಯ ಪಕ್ಷಗಳೂ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿವೆ.

ಗುಜರಾತ್​ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಬಿಜೆಪಿ ಹಲವು ಸಮಾವೇಶ ಮತ್ತು ಜನಸಂಪರ್ಕ ಕಾರ್ಯಕ್ರಮಗಳನ್ನು ನಡೆಸಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಬಹಿರಂಗ ಸಭೆಗಳಲ್ಲಿ ಮಾತನಾಡಿದ್ದರು. ರಾಹುಲ್ ಗಾಂಧಿ ಪಾದಯಾತ್ರೆಯ ನಂತರ ಹೊಸ ಚೈತನ್ಯ ಪಡೆದುಕೊಳ್ಳುತ್ತಿರುವ ಕಾಂಗ್ರೆಸ್ ಸದ್ಯದ ಮಟ್ಟಿಗೆ ಎರಡೂ ರಾಜ್ಯಗಳಲ್ಲಿ ಪ್ರಬಲವಾಗಿಲ್ಲ. ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಯ ಬಗ್ಗೆ ವರಿಷ್ಠರು ಗಮನ ಹರಿಸಿದ್ದಾರೆ. ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಹಲವು ಬಾರಿ ಗುಜರಾತ್​ಗೆ ಭೇಟಿ ನೀಡಿದ್ದು ಸಂಘಟನೆ ಚುರುಕುಗೊಳಿಸಲು ಯತ್ನಿಸಿದ್ದಾರೆ. ಗುಜರಾತ್​ನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಹಣಾಹಣಿ ನಡೆಯುವ ನಿರೀಕ್ಷೆಯಿದೆ.

ಕಳೆದ ಬಾರಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಯಾಸದ ಗೆಲುವು ಸಾಧಿಸಿತ್ತು. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಮೇಲೆ ಗುಜರಾತ್ ಫಲಿತಾಂಶವು ಪರಿಣಾಮ ಬೀರಬಹುದು ಎಂಬ ವಿಶ್ಲೇಷಣೆಗಳ ಹಿನ್ನೆಲೆಯಲ್ಲಿ ಬಿಜೆಪಿ ಅದನ್ನು ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿದೆ.

Published On - 10:48 am, Fri, 14 October 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ