AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಪಿ ಪಕ್ಷ 5 ರೂಪಾಯಿ ಕೆಲಸಕ್ಕೆ 5,000 ರೂ ಮೌಲ್ಯದ ಜಾಹೀರಾತು ನೀಡುತ್ತದೆ – ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿಕಿಡಿ

Tejasvi Surya: ದೆಹಲಿಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ಸರ್ಕಾರದ ವಿರುದ್ಧ ಮುಸುಕಿನ ದಾಳಿ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಡೆ ಕೇವಲ 5 ರೂ. ಮೌಲ್ಯದ ಕೆಲಸಕ್ಕಾಗಿ ₹ 5,000 ಪ್ರಚಾರ ಖರ್ಚು ಮಾಡುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಎಎಪಿ ಪಕ್ಷ 5 ರೂಪಾಯಿ ಕೆಲಸಕ್ಕೆ 5,000 ರೂ ಮೌಲ್ಯದ ಜಾಹೀರಾತು ನೀಡುತ್ತದೆ - ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿಕಿಡಿ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ
TV9 Web
| Edited By: ಸಾಧು ಶ್ರೀನಾಥ್​|

Updated on: Nov 10, 2022 | 11:43 AM

Share

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ಸರ್ಕಾರದ ಮೇಲಿನ ಮಾತಿನ ದಾಳಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು (BJP MP Tejasvi Surya) ಬುಧವಾರ ಅರವಿಂದ್ ಕೇಜ್ರಿವಾಲ್ ಅವರ ತಂಡ ಕೇವಲ 5 ರೂ ಮೌಲ್ಯದ ಕೆಲಸಕ್ಕಾಗಿ ಪ್ರಚಾರ ಗಿಟ್ಟಿಸಲು (advertisements) 25,000 ರೂ. ವ್ಯಯಿಸುತ್ತದೆ ಎಂದು ಹೇಳಿದರು. ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ (Gujarat Assembly Elections 2022) ಮುಂಚಿತವಾಗಿ ಗುಜರಾತ್‌ನಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಅವರು ಮೊದಲ ಬಾರಿಗೆ ಮತದಾರರೊಂದಿಗೆ ಸಂವಾದ ನಡೆಸಿದರು. ಆ ಸಂದರ್ಭದಲ್ಲಿ ಎಎಪಿ (Aam Aadmi Party -AAP) ಸರ್ಕಾರದ ಶಾಲಾ ಶಿಕ್ಷಣ ಮಾದರಿಯನ್ನು “ಲಿಕ್ಕರ್ ಮಾಫಿಯಾ” ವಿವಾದದೊಂದಿಗೆ ಹೋಲಿಕೆ ಮಾಡಿದರು.

“ಈ ಜನರು (ಎಎಪಿ ಪಕ್ಷದವರು) 5 ರೂಪಾಯಿ ಕೆಲಸಕ್ಕೆ 5,000 ರೂ ಮೌಲ್ಯದ ಜಾಹೀರಾತುಗಳನ್ನು ನೀಡುತ್ತಾರೆ. ನೀವು (ಗುಜರಾತ್‌ನ ಯುವಕರು) ಅಂತಹ ಜನರ ಬಗ್ಗೆ ಎಚ್ಚರದಿಂದಿರಬೇಕು. ಅವರು ತಮ್ಮ ಜೀವನವನ್ನಷ್ಟೇ ಹಾಳು ಮಾಡಿಕೊಳ್ಳುತ್ತಿಲ್ಲ, ಜೊತೆಗೆ ದೇಶವನ್ನೂ ಹಾಳು ಮಾಡುತ್ತಿದ್ದಾರೆ” ಎಂದು ಸಂಸದ ಸೂರ್ಯ ಹೇಳಿದರು.

“ನಾನು ಸಂಸದನಾದ ನಂತರ ಆಗಾಗ್ಗೆ ದೆಹಲಿಗೆ ಭೇಟಿ ನೀಡುತ್ತಿದ್ದೇನೆ. ದೆಹಲಿಯ ಶಾಲಾ ಶಿಕ್ಷಣದ ಮಾದರಿ ಏನು ಎಂದು ನಾನು ಸ್ನೇಹಿತರಿಗೆ ಕೇಳಿದೆ. ದೆಹಲಿಯ ಶಿಕ್ಷಣದ ಸನ್ನಿವೇಶವು ಪ್ರಸ್ತುತ ಬೆಳಕಿಗೆ ಬರುತ್ತಿರುವ ಮದ್ಯದ ಮಾಫಿಯಾ ವಿಷಯದಂತೆಯೇ ಇದೆ ಎಂದು ಅವರು ಹೇಳಿದರು.” ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ (2001 ರಿಂದ 2014) ಹೇಗೆ ಎಂದು ಸಭಿಕರಿಗೆ ನೆನಪಿಸಿದರು. ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಮಾರ್ಪಡಿಸಿದೆ. ಶಾಲೆಗಳಲ್ಲಿ ಡ್ರಾಪ್ಔಟ್ ಅನುಪಾತವನ್ನು ಸುಧಾರಿಸುವುದರಿಂದ ಪ್ರಾರಂಭಿಸಿ, ಗುಜರಾತ್ ಸಿಎಂ ಆಗಿ ಮೋದಿಯವರ ಪ್ರಯತ್ನದಿಂದಾಗಿ ಶಾಲೆ ಬಿಡುವವರ ಪ್ರಮಾಣ ಶೇ. 30ರಿಂದ ಕೇವಲ ಶೇ. 1ಕ್ಕೆ ಇಳಿದಿದೆ ಎಂದು ಸೂರ್ಯ ಹೇಳಿದರು.

ನಾವು ₹ 5,000 ಮೌಲ್ಯದ ಕೆಲಸ ಮಾಡುತ್ತೇವೆ ಆದರೆ ಅದರ ಬಗ್ಗೆ ಜನಸಾಮಾನ್ಯರಿಗೆ ತಿಳಿಸಲು ₹ 50 ಖರ್ಚು ಮಾಡುತ್ತೇವೆ. ₹50 ಕೆಲಸ ಮಾಡುವ ಮತ್ತು ಪ್ರಚಾರಕ್ಕಾಗಿ ₹ 5,000 ಮೌಲ್ಯದ ಜಾಹೀರಾತು ನೀಡುವ ಪಕ್ಷವಲ್ಲ ನಮ್ಮದು ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ. ಡಿಸೆಂಬರ್ 1 ಮತ್ತು 5 ರಂದು ನಡೆಯಲಿರುವ ರಾಜ್ಯ ಅಸೆಂಬ್ಲಿ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸುವ ಯುವಕರು ಗುಜರಾತ್‌ನ ರಾಜಕೀಯ ಸ್ಥಿರತೆಯನ್ನು ಮುಂದಕ್ಕೆ ಕೊಂಡೊಯ್ಯಲು ಸಹಾಯ ಮಾಡಬೇಕೆಂದು ಅವರು ಒತ್ತಾಯಿಸಿದರು.

ರಫ್ತು, ನೀರಾವರಿ ಕಾಲುವೆ ಜಾಲ, ವ್ಯಾಪಾರ ಮಾಡಲು ಸುಲಭ ಮತ್ತು ಹೂಡಿಕೆ ಆಕರ್ಷಿಸುವುದು ಸೇರಿದಂತೆ ಹಲವಾರು ರಂಗಗಳಲ್ಲಿ ಗುಜರಾತ್ ಪ್ರಥಮ ಸ್ಥಾನದಲ್ಲಿದೆ. 30 ವರ್ಷಗಳ ರಾಜಕೀಯ ಸ್ಥಿರತೆಯಿಂದಾಗಿ ಗುಜರಾತ್ ಮೊದಲ ಸ್ಥಾನದಲ್ಲಿದೆ. ಮೋದಿಯವರ ದೂರದೃಷ್ಟಿಯ ನಾಯಕತ್ವ ಮತ್ತು ಎಲ್ಲಾ ಗುಜರಾತಿಗಳ ಕಠಿಣ ಪರಿಶ್ರಮ. ರಾಜಕೀಯ ಸ್ಥಿರತೆಯು ಅಭಿವೃದ್ಧಿ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ಅವರು ಸಮರ್ಥಿಸಿಕೊಂಡರು. ಮುಂಬರುವ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಎಎಪಿ ಪಕ್ಷ ಪ್ರಮುಖ ಸವಾಲಾಗಿ ಹೊರಹೊಮ್ಮಿದೆ.

To read more national news click here

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ