AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ಮೋದಿ ಫೋಟೋ ತೆಗೆದುಹಾಕಿ: ಚುನಾವಣಾ ಆಯೋಗಕ್ಕೆ ಮನವಿ ಮಾಡಿದ ಎಎಪಿ

ಗುಜರಾತ್‌ನ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ತೆಗೆದುಹಾಕಲು ಚುನಾವಣಾ ಆಯೋಗಕ್ಕೆ ಎಎಪಿ ಮನವಿ ಮಾಡಿದೆ.

ಗುಜರಾತ್ ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ಮೋದಿ ಫೋಟೋ ತೆಗೆದುಹಾಕಿ: ಚುನಾವಣಾ ಆಯೋಗಕ್ಕೆ ಮನವಿ ಮಾಡಿದ ಎಎಪಿ
ಅರವಿಂದ್ ಕೇಜ್ರಿವಾಲ್, ನರೇಂದ್ರ ಮೋದಿ
TV9 Web
| Edited By: ಆಯೇಷಾ ಬಾನು|

Updated on:Nov 15, 2022 | 10:26 AM

Share

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ(Gujarat Assembly Elections 2022) ಪ್ರಚಾರ ಜೋರಾಗಿ ಸಾಗುತ್ತಿದೆ. ಇದರ ನಡುವೆ ಗುಜರಾತ್‌ನ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಭಾವಚಿತ್ರಗಳನ್ನು ಹಾಕಲಾಗಿದ್ದು ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಭಾಗವಾಗಿದೆ. ಹೀಗಾಗಿ ಮೋದಿ ಭಾವಚಿತ್ರಗಳನ್ನು ತೆಗೆದುಹಾಕಲು, ಅಥವಾ ಅದು ಕಾಣದಂತೆ ಮುಚ್ಚಲು ಆಮ್ ಆದ್ಮಿ ಪಕ್ಷ ಸೋಮವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಒಟ್ಟು 182 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಹೀಗಾಗಿ ಚುನಾವಣೆಯ ಪ್ರಚಾರ ಅಬ್ಬರದಿಂದ ಸಾಗಿದೆ. ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳು ಸರ್ಕಾರಿ ಕಚೇರಿಗಳಲ್ಲಿ ಹಾಕಲಾಗಿದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾದಂತೆ ಎಂದು ಎಎಪಿಯ ಕಾನೂನು ಘಟಕದ ಗುಜರಾತ್ ಕಾರ್ಯದರ್ಶಿ ಪುನೀತ್ ಜುನೇಜಾ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಉಚಿತ​ ವಿದ್ಯುತ್, ಸಾಲಮನ್ನಾ ಭರವಸೆ

ಇನ್ನು ಚುನಾವಣಾ ಆಯೋಗಕ್ಕೆ ನೀಡಿದ ತನ್ನ ಪ್ರಾತಿನಿಧ್ಯದಲ್ಲಿ, ಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷದ ಸ್ಟಾರ್ ಪ್ರಚಾರಕರ ಫೋಟೋಗಳನ್ನು ಹಾಕಲಾಗಿದ್ದು ಇದು ಚುನಾವಣೆಗಳ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಹಿತದೃಷ್ಟಿಯಿಂದ, ರಾಜ್ಯದಾದ್ಯಂತ ಎಲ್ಲಾ ಕಚೇರಿಗಳಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರಗಳನ್ನು ತೆಗೆದುಹಾಕಲು ಅಥವಾ ಕಾಣದಂತೆ ಮುಚ್ಚಲು ನಿರ್ದೇಶನವನ್ನು ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ಎಎಪಿ ಮನವಿ ಮಾಡಿದೆ.

ಸತತ ಏಳನೇ ಅವಧಿಗೆ ಅಧಿಕಾರ ನಡೆಸಲು ಬಯಸುತ್ತಿರುವ ಆಡಳಿತಾರೂಢ ಬಿಜೆಪಿಗೆ ಎಎಪಿ ಪಕ್ಷ ಗುಜರಾತ್​ನಲ್ಲೇ ಪ್ರಮುಖ ಎದುರಾಳಿ ಪಕ್ಷವಾಗಿದೆ. ಎಎಪಿ ಈಗಾಗಲೇ 178 ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

Published On - 9:55 am, Tue, 15 November 22

Follow Us
Web contact
Web contact

TV9 Kannada

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ