AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಗುಜರಾತಿನಲ್ಲಿ10 ಬಾರಿ ಶಾಸಕರಾಗಿದ್ದ ಮೋಹನ್ ರಥ್ವಾ ಕಾಂಗ್ರೆಸ್​​ಗೆ ಗುಡ್ ಬೈ; ಬಿಜೆಪಿಗೆ ಸೇರುವ ಸಾಧ್ಯತೆ

ಹಿರಿಯ ನಾಯಕ, 10 ಬಾರಿ ಶಾಸಕರಾಗಿದ್ದ ಮೋಹನ್ ರಥ್ವಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಸಾಧ್ಯತೆ ಇದೆ

Breaking ಗುಜರಾತಿನಲ್ಲಿ10 ಬಾರಿ ಶಾಸಕರಾಗಿದ್ದ ಮೋಹನ್ ರಥ್ವಾ ಕಾಂಗ್ರೆಸ್​​ಗೆ ಗುಡ್ ಬೈ; ಬಿಜೆಪಿಗೆ ಸೇರುವ ಸಾಧ್ಯತೆ
TV9 Web
| Edited By: |

Updated on:Nov 08, 2022 | 7:41 PM

Share

ಅಹಮದಾಬಾದ್: ಗುಜರಾತ್‌ನಲ್ಲಿ 10 ಬಾರಿ ಕಾಂಗ್ರೆಸ್ (Congress) ಶಾಸಕರಾಗಿರುವ ಮೋಹನ್‌ಸಿನ್ಹ್ ರಥ್ವಾ (Mohansinh Rathva) ಪಕ್ಷ ತೊರೆದಿದ್ದಾರೆ. ಎರಡು ದಶಕಗಳಿಂದ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಹೆಣಗಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ  (Narendra Modi) ಅವರ ತವರು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಒಂದು ತಿಂಗಳಿರುವಾಗ ಈ ಹಿರಿಯ ನಾಯಕ ಪಕ್ಷವನ್ನು ತೊರೆದಿದ್ದಾರೆ. 78 ವರ್ಷದ ರಥ್ವಾ ಅವರು ನಾಳೆ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಛೋಟಾ ಉದಯಪುರ (ಪರಿಶಿಷ್ಟ ಪಂಗಡಗಳು, ಅಥವಾ ಎಸ್ಟಿ) ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ತಮ್ಮ ರಾಜೀನಾಮೆ ಪತ್ರವನ್ನು ಗುಜರಾತ್ ಕಾಂಗ್ರೆಸ್ ಮುಖ್ಯಸ್ಥ ಜಗದೀಶ್ ಠಾಕೋರ್ ಅವರಿಗೆ ಕಳುಹಿಸಿದ್ದಾರೆ. ರಥ್ವಾ ತನ್ನ ಭದ್ರಕೋಟೆಯಲ್ಲಿ ಬುಡಕಟ್ಟು ಜನಾಂಗದವರಲ್ಲಿ ಜನಪ್ರಿಯರಾಗಿದ್ದಾರೆ. 2012 ರ ಮೊದಲು, ಅವರು ಛೋಟಾ ಉದಯಪುರ ಜಿಲ್ಲೆಯ ಪಾವಿ-ಜೆಟ್ಪುರ್ (ST) ಕ್ಷೇತ್ರವನ್ನು ಪ್ರತಿನಿಧಿಸಿದರು.ಈ ಬಾರಿ ಗುಜರಾತ್ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಇತ್ತೀಚೆಗೆ ಘೋಷಿಸಿದ್ದಾರೆ. ಆದರೆ ಅವರ ಮಗ ರಾಜೇಂದ್ರಸಿನ್ಹ್ ರಥ್ವಾ ಅವರ ಸ್ಥಾನದಿಂದ ಸ್ಪರ್ಧಿಸಲು ಬಯಸುತ್ತಾರೆ.

ಬಿಜೆಪಿ ತನ್ನ ಮಗನಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡುತ್ತದೆಯೇ ಎಂದು ಕೇಳಿದಾಗ ರಥ್ವಾ ಅವರು  100 ಪರ್ಸೆಂಟ್  ಖಚಿತ ಎಂದು ಹೇಳಿದರು.

“ಆದಾಗ್ಯೂ, ನಾನು ಟಿಕೆಟ್‌ಗಾಗಿ ಪ್ರಯತ್ನಿಸಿಲ್ಲ. ನನಗೆ ಈಗ ವಯಸ್ಸಾಗುತ್ತಿದೆ. ನನ್ನ ಮಗ ರಾಜೇಂದ್ರಸಿಂಹ ಎಂಜಿನಿಯರ್. ಅವರು ಬಿಇ (ಬ್ಯಾಚುಲರ್ ಆಫ್ ಎಂಜಿನಿಯರಿಂಗ್) ಸಿವಿಲ್ ಇಂಜಿನಿಯರ್. ನಾವು ಬಿಜೆಪಿಗೆ ಸೇರಬೇಕು ಎಂದು ಅವನ ಬಯಕೆಯಾಗಿತ್ತು ಎಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ರಥ್ವಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Published On - 7:04 pm, Tue, 8 November 22

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ