AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AAP: ಅಹಮದಾಬಾದ್ ಆಪ್ ಕಚೇರಿಯ ಮೇಲೆ ಗುಜರಾತ್ ಪೊಲೀಸರ ದಾಳಿ

Arvind Kejriwal: ಗುಜರಾತ್ ಜನರಿಂದ ಆಪ್​ಗೆ ಸಿಗುತ್ತಿರುವ ಬೆಂಬಲವು ಬಿಜೆಪಿಯಲ್ಲಿ ಅಭದ್ರತೆ ಹುಟ್ಟುಹಾಕಿದೆ. ಆಪ್ ಪರವಾದ ಅಲೆಯೇ ಬೀಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್​ ತಿಳಿಸಿದ್ದಾರೆ.

AAP: ಅಹಮದಾಬಾದ್ ಆಪ್ ಕಚೇರಿಯ ಮೇಲೆ ಗುಜರಾತ್ ಪೊಲೀಸರ ದಾಳಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 12, 2022 | 10:27 AM

Share

ದೆಹಲಿ: ಅಹಮದಾಬಾದ್​ನಲ್ಲಿರುವ ಆಪ್ ಆದ್ಮಿ ಪಕ್ಷದ (Aam Aadmi Party – AAP) ಕಚೇರಿ ಮೇಲೆ ಗುಜರಾತ್ ಪೊಲೀಸರು ಸೋಮವಾರ ದಾಳಿ ನಡೆಸಿದ್ದಾರೆ. ಗುಜರಾತ್​ನಲ್ಲಿ ಆಪ್​ಗೆ ಸಿಗುತ್ತಿರುವ ಬೆಂಬಲದಿಂದ ಕಂಗಾಲಾಗಿರುವ ಬಿಜೆಪಿಯು ಸಲ್ಲದ ಕ್ರಮಗಳ ಮೂಲಕ ಪಕ್ಷವನ್ನು ಕಟ್ಟಿಹಾಕಲು ಯತ್ನಿಸುತ್ತಿದೆ ಎಂದು ಆಪ್ ಆರೋಪ ಮಾಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಹಮದಾಬಾದ್​ ಭೇಟಿಯ ನಂತರ ಈ ದಾಳಿ ನಡೆದಿದೆ ಎಂದು ಆಪ್​ ಪಕ್ಷದ ಗುಜರಾತ್ ಘಟಕವು ಟ್ವೀಟ್ ಮೂಲಕ ತಿಳಿಸಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಆಪ್ ನಾಯಕ ಅರವಿಂದ್ ಕೇಜ್ರಿವಾಲ್, ‘ಗುಜರಾತ್ ಪೊಲೀಸರಿಗೆ ಪಕ್ಷದ ಕಚೇರಿಯಲ್ಲಿ ಏನೂ ಸಿಗಲಿಲ್ಲ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಪ್ರಾಮಾಣಿಕತೆಯು ಶಂಕಿಸಲು ಆಗದಷ್ಟು ಸ್ವಚ್ಛವಾಗಿದೆ’ ಎಂದು ಹೇಳಿದ್ದಾರೆ. ಆಪ್ ಪಕ್ಷದ ಆರೋಪದ ಬಗ್ಗೆ ಗುಜರಾತ್ ಪೊಲೀಸರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

‘ಗುಜರಾತ್ ಜನರಿಂದ ಆಪ್​ಗೆ ಸಿಗುತ್ತಿರುವ ಬೆಂಬಲವು ಬಿಜೆಪಿಯಲ್ಲಿ ಅಭದ್ರತೆ ಹುಟ್ಟುಹಾಕಿದೆ. ಆಪ್ ಪರವಾದ ಅಲೆಯೇ ಬೀಸುತ್ತಿದೆ’ ಎಂದು ಅರವಿಂದ್ ಕೇಜ್ರಿವಾಲ್​ ಹಿಂದಿಯಲ್ಲಿ ಮಾಡಿರುವ ಟ್ವೀಟ್​ನಲ್ಲಿ ತಿಳಿಸಿದ್ದಾರೆ. ‘ದೆಹಲಿಯ ನಂತರ ಗುಜರಾತ್​ನಲ್ಲಿ ದಾಳಿಗಳು ಆರಂಭವಾಗಿವೆ. ದೆಹಲಿಯಲ್ಲಿಯೂ ಅವರಿಗೆ ಏನೂ ಸಿಗಲಿಲ್ಲ, ಗುಜರಾತ್​ನಲ್ಲಿಯೂ ಏನೂ ಸಿಗುವುದಿಲ್ಲ. ನಾವು ದೇಶಭಕ್ತ ಪ್ರಾಮಾಣಿಕ ಜನರಿದ್ದೇವೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಅಹಮದಾಬಾದ್​ಗೆ ಕೇಜ್ರಿವಾಲ್ ಭೇಟಿ ನೀಡಿದ ಕೇವಲ 2 ಗಂಟೆಗಳ ನಂತರ ಈ ದಾಳಿಗಳು ನಡೆದಿವೆ ಎಂದು ಆಪ್ ಪಕ್ಷದ ಗುಜರಾತ್ ಘಟಕದ ನಾಯಕ ಐಸೂದನ್ ಗಾಧ್ವಿ ಆರೋಪ ಮಾಡಿದ್ದಾರೆ. ಕಚೇರಿಯಲ್ಲಿ ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಹುಡುಕಾಡಿದರು. ಅವರಿಗೆ ಏನೂ ಸಿಗಲಿಲ್ಲ. ಅವರು ಖಂಡಿತ ಮತ್ತೊಮ್ಮೆ ಬರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಇದೇ ವರ್ಷದ ಅಂತ್ಯದಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ.

Published On - 10:21 am, Mon, 12 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?