AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AAP: ಅಹಮದಾಬಾದ್ ಆಪ್ ಕಚೇರಿಯ ಮೇಲೆ ಗುಜರಾತ್ ಪೊಲೀಸರ ದಾಳಿ

Arvind Kejriwal: ಗುಜರಾತ್ ಜನರಿಂದ ಆಪ್​ಗೆ ಸಿಗುತ್ತಿರುವ ಬೆಂಬಲವು ಬಿಜೆಪಿಯಲ್ಲಿ ಅಭದ್ರತೆ ಹುಟ್ಟುಹಾಕಿದೆ. ಆಪ್ ಪರವಾದ ಅಲೆಯೇ ಬೀಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್​ ತಿಳಿಸಿದ್ದಾರೆ.

AAP: ಅಹಮದಾಬಾದ್ ಆಪ್ ಕಚೇರಿಯ ಮೇಲೆ ಗುಜರಾತ್ ಪೊಲೀಸರ ದಾಳಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
TV9 Web
| Edited By: |

Updated on:Sep 12, 2022 | 10:27 AM

Share

ದೆಹಲಿ: ಅಹಮದಾಬಾದ್​ನಲ್ಲಿರುವ ಆಪ್ ಆದ್ಮಿ ಪಕ್ಷದ (Aam Aadmi Party – AAP) ಕಚೇರಿ ಮೇಲೆ ಗುಜರಾತ್ ಪೊಲೀಸರು ಸೋಮವಾರ ದಾಳಿ ನಡೆಸಿದ್ದಾರೆ. ಗುಜರಾತ್​ನಲ್ಲಿ ಆಪ್​ಗೆ ಸಿಗುತ್ತಿರುವ ಬೆಂಬಲದಿಂದ ಕಂಗಾಲಾಗಿರುವ ಬಿಜೆಪಿಯು ಸಲ್ಲದ ಕ್ರಮಗಳ ಮೂಲಕ ಪಕ್ಷವನ್ನು ಕಟ್ಟಿಹಾಕಲು ಯತ್ನಿಸುತ್ತಿದೆ ಎಂದು ಆಪ್ ಆರೋಪ ಮಾಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಹಮದಾಬಾದ್​ ಭೇಟಿಯ ನಂತರ ಈ ದಾಳಿ ನಡೆದಿದೆ ಎಂದು ಆಪ್​ ಪಕ್ಷದ ಗುಜರಾತ್ ಘಟಕವು ಟ್ವೀಟ್ ಮೂಲಕ ತಿಳಿಸಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಆಪ್ ನಾಯಕ ಅರವಿಂದ್ ಕೇಜ್ರಿವಾಲ್, ‘ಗುಜರಾತ್ ಪೊಲೀಸರಿಗೆ ಪಕ್ಷದ ಕಚೇರಿಯಲ್ಲಿ ಏನೂ ಸಿಗಲಿಲ್ಲ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಪ್ರಾಮಾಣಿಕತೆಯು ಶಂಕಿಸಲು ಆಗದಷ್ಟು ಸ್ವಚ್ಛವಾಗಿದೆ’ ಎಂದು ಹೇಳಿದ್ದಾರೆ. ಆಪ್ ಪಕ್ಷದ ಆರೋಪದ ಬಗ್ಗೆ ಗುಜರಾತ್ ಪೊಲೀಸರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

‘ಗುಜರಾತ್ ಜನರಿಂದ ಆಪ್​ಗೆ ಸಿಗುತ್ತಿರುವ ಬೆಂಬಲವು ಬಿಜೆಪಿಯಲ್ಲಿ ಅಭದ್ರತೆ ಹುಟ್ಟುಹಾಕಿದೆ. ಆಪ್ ಪರವಾದ ಅಲೆಯೇ ಬೀಸುತ್ತಿದೆ’ ಎಂದು ಅರವಿಂದ್ ಕೇಜ್ರಿವಾಲ್​ ಹಿಂದಿಯಲ್ಲಿ ಮಾಡಿರುವ ಟ್ವೀಟ್​ನಲ್ಲಿ ತಿಳಿಸಿದ್ದಾರೆ. ‘ದೆಹಲಿಯ ನಂತರ ಗುಜರಾತ್​ನಲ್ಲಿ ದಾಳಿಗಳು ಆರಂಭವಾಗಿವೆ. ದೆಹಲಿಯಲ್ಲಿಯೂ ಅವರಿಗೆ ಏನೂ ಸಿಗಲಿಲ್ಲ, ಗುಜರಾತ್​ನಲ್ಲಿಯೂ ಏನೂ ಸಿಗುವುದಿಲ್ಲ. ನಾವು ದೇಶಭಕ್ತ ಪ್ರಾಮಾಣಿಕ ಜನರಿದ್ದೇವೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಅಹಮದಾಬಾದ್​ಗೆ ಕೇಜ್ರಿವಾಲ್ ಭೇಟಿ ನೀಡಿದ ಕೇವಲ 2 ಗಂಟೆಗಳ ನಂತರ ಈ ದಾಳಿಗಳು ನಡೆದಿವೆ ಎಂದು ಆಪ್ ಪಕ್ಷದ ಗುಜರಾತ್ ಘಟಕದ ನಾಯಕ ಐಸೂದನ್ ಗಾಧ್ವಿ ಆರೋಪ ಮಾಡಿದ್ದಾರೆ. ಕಚೇರಿಯಲ್ಲಿ ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಹುಡುಕಾಡಿದರು. ಅವರಿಗೆ ಏನೂ ಸಿಗಲಿಲ್ಲ. ಅವರು ಖಂಡಿತ ಮತ್ತೊಮ್ಮೆ ಬರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಇದೇ ವರ್ಷದ ಅಂತ್ಯದಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ.

Published On - 10:21 am, Mon, 12 September 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!