AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಭದ್ರಕೋಟೆಯಲ್ಲಿ ಹೊಸ ಪಕ್ಷವೊಂದು ಶೇಕಡಾ 15-20ರಷ್ಟು ಮತಗಳನ್ನು ಪಡೆಯುವುದೇ ದೊಡ್ಡ ಸಂಗತಿ: ಕೇಜ್ರಿವಾಲ್

ನಾನು ದೆಹಲಿಯ ಜನರನ್ನು ಅಭಿನಂದಿಸುತ್ತೇನೆ. ದೆಹಲಿಯ ಜನರು ಮತ್ತೊಮ್ಮೆ ಎಎಪಿ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದು ಸಮೀಕ್ಷೆಗಳು ತೋರಿಸಿವೆ. ಇದು ಫಲಿತಾಂಶವಾಗಲಿದೆ ಎಂದು ನಾನು ಭಾವಿಸುತ್ತೇನೆ. ನಾವು ನಾಳೆಯವರೆಗೆ ಕಾಯುತ್ತೇವೆ ಎಂದಿದ್ದಾರೆ ಕೇಜ್ರಿವಾಲ್.

ಬಿಜೆಪಿ ಭದ್ರಕೋಟೆಯಲ್ಲಿ ಹೊಸ ಪಕ್ಷವೊಂದು ಶೇಕಡಾ 15-20ರಷ್ಟು ಮತಗಳನ್ನು ಪಡೆಯುವುದೇ ದೊಡ್ಡ ಸಂಗತಿ: ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 06, 2022 | 3:19 PM

Share

ದೆಹಲಿ: ಆಡಳಿತಾರೂಢ ಬಿಜೆಪಿಗೆ (BJP) ಸವಾಲೆಸೆಯಲು ಗುಜರಾತ್‌ನಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದ ಆಮ್ ಆದ್ಮಿ ಪಕ್ಷ (AAP)ಗೆ ಜಯವಿಲ್ಲ ಭವಿಷ್ಯ ನುಡಿದಿರುವ ಎಕ್ಸಿಟ್ ಪೋಲ್‌ಗಳಿಗೆ (Exit Polls) ಅರವಿಂದ್ ಕೇಜ್ರಿವಾಲ್ (Arvind Kejriwal)ಅವರು ಇಂದು ಪ್ರತಿಕ್ರಿಯಿಸಿದ್ದಾರೆ. ಅದೇ ಹೊತ್ತಲ್ಲಿ ಎಎಪಿ ದೆಹಲಿ ನಾಗರಿಕ ಚುನಾವಣೆಯಲ್ಲಿ ಅಬ್ಬರದ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.ನಿನ್ನೆ ನಡೆದ ಎಕ್ಸಿಟ್ ಪೋಲ್‌ಗಳ ಪ್ರಕಾರ ದೆಹಲಿಯ ಪೌರಾಡಳಿತ ಸಂಸ್ಥೆ ಚುನಾವಣೆಯಲ್ಲಿ ಎಎಪಿ ಮುನ್ನಡೆ ಸಾಧಿಸಲಿದೆ. ಆದರೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಫ್ಲಾಪ್ ಶೋ ಎಂದು ಭವಿಷ್ಯ ನುಡಿದಿದೆ. ಗುಜರಾತ್‌ನಲ್ಲಿ ಎಎಪಿ 182 ಸ್ಥಾನಗಳಲ್ಲಿ ಎಂಟು ಸ್ಥಾನಗಳನ್ನು ಗೆಲ್ಲುತ್ತದೆ, ಕಾಂಗ್ರೆಸ್‌ಗಿಂತ (ಮಿತ್ರಪಕ್ಷಗಳೊಂದಿಗೆ 38) ಕೆಳಗೆ ಉಳಿಯುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಅಬ್ಬರದ ಮತ್ತು ಹುರುಪಿನ ಪ್ರಚಾರದೊಂದಿಗೆ, ಪಕ್ಷವು ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪರ್ಯಾಯವಾಗಿ ತನ್ನನ್ನು ತಾನು ಪ್ರಮುಖ ಪ್ರತಿಪಕ್ಷವಾಗಿ ಬಿಂಬಿಸಿತ್ತು.ಸಮೀಕ್ಷೆಗಳು ತಪ್ಪು ಎಂದು ಸಾಬೀತಾಗುತ್ತವೆ ಮತ್ತು ಪಕ್ಷವು ವಾಸ್ತವವಾಗಿ 100 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಎಎಪಿ ನಾಯಕರು ಹೇಳಿದ್ದಾರೆ.

ಫಲಿತಾಂಶಗಳು ಸಕಾರಾತ್ಮಕವಾಗಿವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ ಅದು ಕೂಡ ಬಿಜೆಪಿ ಭದ್ರಕೋಟೆಯಲ್ಲಿ ಹೊಸ ಪಕ್ಷ ಶೇಕಡಾ 15 ರಿಂದ 20 ರಷ್ಟು ಮತಗಳನ್ನು ಪಡೆಯುವುದು ದೊಡ್ಡ ಸಂಗತಿ ಎಂದು ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದು, “ನಾಳೆ ದಿನ (ಎಣಿಕೆಯ ದಿನ) ತನಕ ಕಾಯಿರಿ ಎಂದಿದ್ದಾರೆ.

ಮುನ್ಸಿಪಲ್ ಕಾರ್ಪೊರೇಷನ್‌ಗಳ ಮರು ಏಕೀಕರಣದ ನಂತರದ ಮೊದಲ ಚುನಾವಣೆಯಲ್ಲಿ ಬಿಜೆಪಿಯ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಎಎಪಿ ದೊಡ್ಡ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಯ ಸಮೀಕ್ಷೆ ಹೇಳಿದೆ. ನಾನು ದೆಹಲಿಯ ಜನರನ್ನು ಅಭಿನಂದಿಸುತ್ತೇನೆ. ದೆಹಲಿಯ ಜನರು ಮತ್ತೊಮ್ಮೆ ಎಎಪಿ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದು ಸಮೀಕ್ಷೆಗಳು ತೋರಿಸಿವೆ. ಇದು ಫಲಿತಾಂಶವಾಗಲಿದೆ ಎಂದು ನಾನು ಭಾವಿಸುತ್ತೇನೆ. ನಾವು ನಾಳೆಯವರೆಗೆ ಕಾಯುತ್ತೇವೆ ಎಂದಿದ್ದಾರೆ ಕೇಜ್ರಿವಾಲ್.

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು