AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕರೂಪ ನಾಗರಿಕ ಸಂಹಿತೆ ಬೇಕು, ಅದಕ್ಕೆ ಎಲ್ಲ ಸಮುದಾಯದವರು ಒಪ್ಪಬೇಕು: ಗುಜರಾತಿನಲ್ಲಿ ಅರವಿಂದ ಕೇಜ್ರಿವಾಲ್

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಉದ್ದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕೇಜ್ರಿವಾಲ್, ಆಡಳಿತ ಪಕ್ಷವು ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇದೇ ಭರವಸೆಯನ್ನು ನೀಡಿತ್ತು.

ಏಕರೂಪ ನಾಗರಿಕ ಸಂಹಿತೆ ಬೇಕು, ಅದಕ್ಕೆ ಎಲ್ಲ ಸಮುದಾಯದವರು ಒಪ್ಪಬೇಕು: ಗುಜರಾತಿನಲ್ಲಿ ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on: Oct 30, 2022 | 2:37 PM

Share

ದೆಹಲಿ: ಏಕರೂಪ ನಾಗರಿಕ ಸಂಹಿತೆಯನ್ನು ಬೇಕು ಆದರೆ ಬಿಜೆಪಿ ಮೋಸ ಮಾಡಲು ಪ್ರಯತ್ನಿಸುತ್ತಿದೆ ಎಂದು ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಗುಜರಾತ್‌ನಲ್ಲಿರುವ (Gujarat Assembly Elections) ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (Aam Aadmi Party)ಮುಖ್ಯಸ್ಥ ಅರವಿಂದ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಉದ್ದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕೇಜ್ರಿವಾಲ್, ಆಡಳಿತ ಪಕ್ಷವು ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇದೇ ಭರವಸೆಯನ್ನು ನೀಡಿತ್ತು. ಆದರೆ ಚುನಾವಣೆಯಲ್ಲಿ ಗೆದ್ದ ನಂತರ ಅದನ್ನು ಕಾರ್ಯಗತಗೊಳಿಸಲಿಲ್ಲ ಎಂದು ಹೇಳಿದರು. ಅವರು ಉತ್ತರಾಖಂಡ ಚುನಾವಣೆಯಲ್ಲಿ ಗೆದ್ದ ನಂತರ ಸಮಿತಿಯನ್ನು ರಚಿಸಿದರು. ಈಗ ಅದು ಕಣ್ಮರೆಯಾಗಿದೆ ಎಂದು ಹೇಳಿದ ಕೇಜ್ರಿವಾಲ್, ಗುಜರಾತ್ ಚುನಾವಣೆಗೆ ಮೂರು ದಿನಗಳ ಮೊದಲು ಅವರು ಸಮಿತಿಯನ್ನು ರಚಿಸಿದ್ದಾರೆ. ಅದು ಚುನಾವಣೆಯ ನಂತರ ಕಣ್ಮರೆಯಾಗುತ್ತದೆ ಎಂದಿದ್ದಾರೆ. ಭಾವನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕು. ಸಂವಿಧಾನದ 44 ನೇ ವಿಧಿಯು ಹಾಗೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಸ್ಪಷ್ಟವಾಗಿ ಹೇಳುತ್ತದೆ. ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಒಪ್ಪಿಗೆಯೊಂದಿಗೆ ಅದನ್ನು ಮಾಡಬೇಕು.

ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇದನ್ನು ಏಕೆ ಜಾರಿಗೊಳಿಸುವುದಿಲ್ಲ?.ದೇಶದಾದ್ಯಂತ ಇದನ್ನು ಏಕೆ ಜಾರಿಗೊಳಿಸಬಾರದು. ಅವರು ಲೋಕಸಭೆ ಚುನಾವಣೆಗಾಗಿ ಕಾಯುತ್ತಿದ್ದಾರೆಯೇ? ಎಂದು ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ಮುಸ್ಲಿಮರಿಗೆ ವಿವಾದಾತ್ಮಕ ವಿಷಯವಾದ ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಲು ಯೋಜಿಸುತ್ತಿದೆ, ಅದು ಧರ್ಮ ಆಧಾರಿತ ಕಾನೂನುಗಳನ್ನು ತೆಗೆದುಹಾಕುತ್ತದೆ ಎಂದು ಎಂದು ಬಿಜೆಪಿ ನಿನ್ನೆ ಹೇಳಿತ್ತು ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆಯುವ ಗಿಮಿಕ್ ಎಂದು ಕಾಂಗ್ರೆಸ್ ಇದನ್ನು ಟೀಕಿಸಿದೆ. ಅಂತಹ ಕಾನೂನನ್ನು ಹೇಗೆ ಕಾರ್ಯಗತಗೊಳಿಸಬಹುದು ಎಂಬುದನ್ನು ಪರಿಶೀಲಿಸಲು ಗುಜರಾತ್ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯನ್ನು ಪ್ರಸ್ತಾಪಿಸಿದೆ. ನಾಗರಿಕ ಸಂಹಿತೆಯು ರಾಜ್ಯಗಳಿಗಿಂತ ಕೇಂದ್ರದ ಡೊಮೇನ್ ಎಂದು ವ್ಯಾಪಕವಾಗಿ ನಂಬಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇಂದು ನಡೆದ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಸಮಿತಿಯನ್ನು ರಚಿಸಲಾಗಿದೆ” ಎಂದು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಹೇಳಿದ್ದಾರೆ.

ಮೇ ತಿಂಗಳಲ್ಲಿ, ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಯುಸಿಸಿ ಜಾರಿಗೊಳಿಸುವ ನಿರ್ಧಾರವನ್ನು ಪ್ರಕಟಿಸಿತ್ತು. ಅದೇ ತಿಂಗಳು, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಕೂಡ ಯುಸಿಸಿಯನ್ನು ಶೀಘ್ರದಲ್ಲೇ ರಾಜ್ಯಕ್ಕೆ ತರಲಾಗುವುದು ಎಂದು ಘೋಷಿಸಿದ್ದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!