AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ವಿಧಾನಸಭೆ ಚುನಾವಣೆ: ಒಂದೆಡೆ ಮೋದಿ ರೋಡ್ ಶೋ, ಮತ್ತೊಂದೆಡೆ ಬಂಡಾಯ, 7 ಶಾಸಕರು ಸಸ್ಪೆಂಡ್

ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಇದರ ಮಧ್ಯೆ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿದೆ.

ಗುಜರಾತ್ ವಿಧಾನಸಭೆ ಚುನಾವಣೆ: ಒಂದೆಡೆ ಮೋದಿ ರೋಡ್ ಶೋ, ಮತ್ತೊಂದೆಡೆ ಬಂಡಾಯ, 7 ಶಾಸಕರು ಸಸ್ಪೆಂಡ್
Narendra Modi
TV9 Web
| Edited By: |

Updated on: Nov 20, 2022 | 8:23 PM

Share

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ (Gujarat Assembly Elections 2022) ರಂಗೇರಿದ್ದು, ಆಡಳಿತಾರೂಢ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸಿದೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನ ಹಲವೆಡೆ ರೋಡ್​ ಶೋ ನಡೆಸುವ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ. ಇದರ ಮಧ್ಯೆ ಬಿಜೆಪಿ ಹಾಲಿ ಶಾಸಕರೇ ಪಕ್ಷಕ್ಕೆ ಕಂಟಕವಾಗಿದ್ದಾರೆ.

ಗುಜರಾತ್ ಚುನಾವಣಾ ರ್ಯಾಲಿಗಳಿಗೆ ಮುಂಚಿತವಾಗಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಮೋದಿ

ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್​ ಸಿಗದಿದ್ದರಿಂದ ಹಾಲಿ ಶಾಸಕರು ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ 7 ಶಾಸಕರನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಿಂದ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಕ್ಕಾಗಿ ಏಳು ಬಂಡಾಯ ನಾಯಕರನ್ನು ಅಮಾನತುಗೊಳಿಸಿ ಗುಜರಾತ್‌ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಕ್ಕಾಗಿ ಏಳು ಶಾಸಕರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ ಎಂದು ಸಿಆರ್ ಪಾಟೀಲ್ ತಿಳಿಸಿದ್ದಾರೆ.

ಹರ್ಸಾದ್ ವಾಸವ (ನಾಂದೋಡ್ ಕ್ಷೇತ್ರ- ನರ್ಮದಾ ಜಿಲ್ಲೆ), ಅರವಿಂದಭಾಯ್ ಲಡಾನಿ (ಕೇಶೋದ್-ಜುನಾಗಢ), ಛತ್ರಸಿನ್ಹ್ ಗುಂಜರ್ಸಾರಿಯಾ (ಧೃಂಗಧ್ರ – ಸುರೇಂದ್ರನಗರ), ಕೇತನ್ ಪಟೇಲ್ (ಪರ್ಡಿ – ವಲ್ಸಾದ್), ಭರತ್ ಚಾವ್ಡಾ (ರಾಜ್‌ಕೋಟ್ ಗ್ರಾಮಾಂತರ – ರಾಜ್‌ಕೋಟ್), ಉದಯ್ ಶಾ (ವೆರಾವಲ್ – ಗಿರ್ ಸೋಮನಾಥ್) ಮತ್ತು ಅಮ್ರೇಲಿ ಜಿಲ್ಲೆಯ ರಾಜುಲಾದಿಂದ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಕರಣ್ ಬರಯ್ಯ ಎಂಬುವವರನ್ನು ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ಮಾಧ್ಯಮ ಸಂಯೋಜಕ ಯಜ್ಞೇಶ್ ದವೆ ಮಾಹಿತಿ ನೀಡಿದ್ದಾರೆ.

ಗುಜರಾತ್ ತಲುಪಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಚಾರ ರ್ಯಾಲಿ ಆರಂಭಿಸುವ ಮುನ್ನ ಸೋಮನಾಥ ದೇವಾಲಯಕ್ಕೆ (Somnath temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.  ಗುಜರಾತ್ ನಲ್ಲಿ ಎರಡು ಹಂತಗಳಾಗಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ