AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಕಾಂಗ್ರೆಸ್ ಚುನಾವಣಾ ರ‍್ಯಾಲಿ ವೇಳೆ ನುಗ್ಗಿದ ಗೂಳಿ; ಬಿಜೆಪಿಯದ್ದೇ ಕೈವಾಡ ಎಂದ ಗೆಹ್ಲೋಟ್

Gujarat Assembly Elections: ಬಿಜೆಪಿಗೆ ಹಿಡಿಶಾಪ ಹಾಕಿರುವ ಅಶೋಕ್ ಗೆಹ್ಲೋಟ್, ನಾನು ಚಿಕ್ಕಂದಿನಿಂದಲೂ ಕಾಂಗ್ರೆಸ್ ಸಭೆ ನಡೆದಾಗಲೆಲ್ಲ ಈ ಬಿಜೆಪಿಗರು ಗೂಳಿ, ಹಸುಗಳನ್ನು ಬಿಡುವುದನ್ನು ನೋಡುತ್ತಿದ್ದೇನೆ ಎಂದಿದ್ದಾರೆ.

ಗುಜರಾತ್​ನಲ್ಲಿ ಕಾಂಗ್ರೆಸ್ ಚುನಾವಣಾ ರ‍್ಯಾಲಿ ವೇಳೆ ನುಗ್ಗಿದ ಗೂಳಿ; ಬಿಜೆಪಿಯದ್ದೇ ಕೈವಾಡ ಎಂದ ಗೆಹ್ಲೋಟ್
ಅಶೋಕ್ ಗೆಹ್ಲೋಟ್Image Credit source: Zee News
TV9 Web
| Edited By: |

Updated on: Nov 29, 2022 | 4:19 PM

Share

ಅಹಮದಾಬಾದ್: ಗುಜರಾತ್​ನಲ್ಲಿ ಚುನಾವಣೆಗೂ (Gujarat Assembly Elections 2022) ಮುನ್ನ ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಗುಜರಾತ್ ಚುನಾವಣೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ (Social Media) ವೈರಲ್ ಆಗಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಭಾಷಣ ಮಾಡುತ್ತಿದ್ದಾಗ ಗೂಳಿಯೊಂದು ಆ ಸ್ಥಳಕ್ಕೆ ನುಗ್ಗಿದೆ. ಗುಜರಾತ್‌ನ ಮೆಹ್ಸಾನಾದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಚುನಾವಣಾ ರ‍್ಯಾಲಿ ಇತ್ತು. ಈ ವೇಳೆ ಗೂಳಿಯೊಂದು ಸಭೆಯ ಮಧ್ಯದಲ್ಲಿ ನುಗ್ಗಿತು. ಈ ಬಗ್ಗೆ ಬಿಜೆಪಿಗೆ ಹಿಡಿಶಾಪ ಹಾಕಿರುವ ಅಶೋಕ್ ಗೆಹ್ಲೋಟ್, ನಾನು ಚಿಕ್ಕಂದಿನಿಂದಲೂ ಕಾಂಗ್ರೆಸ್ ಸಭೆ ನಡೆದಾಗಲೆಲ್ಲ ಈ ಬಿಜೆಪಿಗರು ಗೂಳಿ, ಹಸುಗಳನ್ನು ಬಿಡುವುದನ್ನು ನೋಡುತ್ತಿದ್ದೇನೆ ಎಂದಿದ್ದಾರೆ.

ನಮ್ಮ ಸಭೆಗೆ ಅಡ್ಡಿಪಡಿಸಲು ಬಿಜೆಪಿಯವರು ಈ ಗೂಳಿಯನ್ನು ಕಳುಹಿಸಿದ್ದಾರೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಚುನಾವಣೆಗೂ ಮುನ್ನ ಬಿಜೆಪಿ ನಮ್ಮ ಸಭೆಗಳಿಗೆ ಅಡ್ಡಿಪಡಿಸಲು ಇಂತಹ ಇನ್ನಷ್ಟು ತಂತ್ರಗಳನ್ನು ಅನುಸರಿಸಲಿದೆ. ಗೂಳಿ ಸಭೆಗೆ ಪ್ರವೇಶಿಸಿದಾಗ ಗೊಂದಲ ಉಂಟಾಯಿತು. ಸಭೆಯಲ್ಲಿ ಸೇರಿದ್ದ ಜನರಿಗೆ ಶಾಂತವಾಗಿರಲು ಹೇಳಿದ ಸಿಎಂ ಅಶೋಕ್ ಗೆಹ್ಲೋಟ್, ಗೂಳಿ ತಾನಾಗಿಯೇ ಹೊರಹೋಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Ashok Gehlot: ಸಚಿನ್ ಪೈಲಟ್​ನಂತಹ ದೇಶದ್ರೋಹಿ ಸಿಎಂ ಆಗಲು ಅಸಾಧ್ಯ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟೀಕೆ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಗೂಳಿ ಅಲ್ಲಿ ಇಲ್ಲಿ ಓಡುತ್ತಿದ್ದು, ಅದನ್ನು ತಪ್ಪಿಸಲು ಜನರು ಓಡಿದ್ದಾರೆ. ಇಷ್ಟೆಲ್ಲ ಗದ್ದಲದ ನಡುವೆ ಅಶೋಕ್ ಗೆಹ್ಲೋಟ್ ವೇದಿಕೆಯಿಂದ ಶಾಂತವಾಗಿರುವಂತೆ ಜನರಿಗೆ ಸಲಹೆ ನೀಡುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಇದು ಬಿಜೆಪಿಯ ಷಡ್ಯಂತ್ರ ಎಂದು ಬಿಜೆಪಿಯನ್ನು ಗುರಿಯಾಗಿಸಿಕೊಂಡು ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ