AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಕಾಂಗ್ರೆಸ್ ಚುನಾವಣಾ ರ‍್ಯಾಲಿ ವೇಳೆ ನುಗ್ಗಿದ ಗೂಳಿ; ಬಿಜೆಪಿಯದ್ದೇ ಕೈವಾಡ ಎಂದ ಗೆಹ್ಲೋಟ್

Gujarat Assembly Elections: ಬಿಜೆಪಿಗೆ ಹಿಡಿಶಾಪ ಹಾಕಿರುವ ಅಶೋಕ್ ಗೆಹ್ಲೋಟ್, ನಾನು ಚಿಕ್ಕಂದಿನಿಂದಲೂ ಕಾಂಗ್ರೆಸ್ ಸಭೆ ನಡೆದಾಗಲೆಲ್ಲ ಈ ಬಿಜೆಪಿಗರು ಗೂಳಿ, ಹಸುಗಳನ್ನು ಬಿಡುವುದನ್ನು ನೋಡುತ್ತಿದ್ದೇನೆ ಎಂದಿದ್ದಾರೆ.

ಗುಜರಾತ್​ನಲ್ಲಿ ಕಾಂಗ್ರೆಸ್ ಚುನಾವಣಾ ರ‍್ಯಾಲಿ ವೇಳೆ ನುಗ್ಗಿದ ಗೂಳಿ; ಬಿಜೆಪಿಯದ್ದೇ ಕೈವಾಡ ಎಂದ ಗೆಹ್ಲೋಟ್
ಅಶೋಕ್ ಗೆಹ್ಲೋಟ್Image Credit source: Zee News
TV9 Web
| Updated By: ಸುಷ್ಮಾ ಚಕ್ರೆ|

Updated on: Nov 29, 2022 | 4:19 PM

Share

ಅಹಮದಾಬಾದ್: ಗುಜರಾತ್​ನಲ್ಲಿ ಚುನಾವಣೆಗೂ (Gujarat Assembly Elections 2022) ಮುನ್ನ ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಗುಜರಾತ್ ಚುನಾವಣೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ (Social Media) ವೈರಲ್ ಆಗಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಭಾಷಣ ಮಾಡುತ್ತಿದ್ದಾಗ ಗೂಳಿಯೊಂದು ಆ ಸ್ಥಳಕ್ಕೆ ನುಗ್ಗಿದೆ. ಗುಜರಾತ್‌ನ ಮೆಹ್ಸಾನಾದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಚುನಾವಣಾ ರ‍್ಯಾಲಿ ಇತ್ತು. ಈ ವೇಳೆ ಗೂಳಿಯೊಂದು ಸಭೆಯ ಮಧ್ಯದಲ್ಲಿ ನುಗ್ಗಿತು. ಈ ಬಗ್ಗೆ ಬಿಜೆಪಿಗೆ ಹಿಡಿಶಾಪ ಹಾಕಿರುವ ಅಶೋಕ್ ಗೆಹ್ಲೋಟ್, ನಾನು ಚಿಕ್ಕಂದಿನಿಂದಲೂ ಕಾಂಗ್ರೆಸ್ ಸಭೆ ನಡೆದಾಗಲೆಲ್ಲ ಈ ಬಿಜೆಪಿಗರು ಗೂಳಿ, ಹಸುಗಳನ್ನು ಬಿಡುವುದನ್ನು ನೋಡುತ್ತಿದ್ದೇನೆ ಎಂದಿದ್ದಾರೆ.

ನಮ್ಮ ಸಭೆಗೆ ಅಡ್ಡಿಪಡಿಸಲು ಬಿಜೆಪಿಯವರು ಈ ಗೂಳಿಯನ್ನು ಕಳುಹಿಸಿದ್ದಾರೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಚುನಾವಣೆಗೂ ಮುನ್ನ ಬಿಜೆಪಿ ನಮ್ಮ ಸಭೆಗಳಿಗೆ ಅಡ್ಡಿಪಡಿಸಲು ಇಂತಹ ಇನ್ನಷ್ಟು ತಂತ್ರಗಳನ್ನು ಅನುಸರಿಸಲಿದೆ. ಗೂಳಿ ಸಭೆಗೆ ಪ್ರವೇಶಿಸಿದಾಗ ಗೊಂದಲ ಉಂಟಾಯಿತು. ಸಭೆಯಲ್ಲಿ ಸೇರಿದ್ದ ಜನರಿಗೆ ಶಾಂತವಾಗಿರಲು ಹೇಳಿದ ಸಿಎಂ ಅಶೋಕ್ ಗೆಹ್ಲೋಟ್, ಗೂಳಿ ತಾನಾಗಿಯೇ ಹೊರಹೋಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Ashok Gehlot: ಸಚಿನ್ ಪೈಲಟ್​ನಂತಹ ದೇಶದ್ರೋಹಿ ಸಿಎಂ ಆಗಲು ಅಸಾಧ್ಯ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟೀಕೆ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಗೂಳಿ ಅಲ್ಲಿ ಇಲ್ಲಿ ಓಡುತ್ತಿದ್ದು, ಅದನ್ನು ತಪ್ಪಿಸಲು ಜನರು ಓಡಿದ್ದಾರೆ. ಇಷ್ಟೆಲ್ಲ ಗದ್ದಲದ ನಡುವೆ ಅಶೋಕ್ ಗೆಹ್ಲೋಟ್ ವೇದಿಕೆಯಿಂದ ಶಾಂತವಾಗಿರುವಂತೆ ಜನರಿಗೆ ಸಲಹೆ ನೀಡುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಇದು ಬಿಜೆಪಿಯ ಷಡ್ಯಂತ್ರ ಎಂದು ಬಿಜೆಪಿಯನ್ನು ಗುರಿಯಾಗಿಸಿಕೊಂಡು ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ