AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೆ ಮುನ್ನ ಗುಜರಾತ್‌ನಲ್ಲಿ ₹290 ಕೋಟಿ ಮೌಲ್ಯದ ನಗದು, ಡ್ರಗ್ಸ್ ಮತ್ತು ಮದ್ಯ ವಶ

ನಾಡಿಯಾಡ್ ಮತ್ತು ವಡೋದರಾದಿಂದ ಐದು ಜನರನ್ನು ಬಂಧಿಸಲಾಗಿದ್ದು, ಅಹಮದಾಬಾದ್‌ನ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲಾಗಿದೆ.

ಚುನಾವಣೆಗೆ ಮುನ್ನ ಗುಜರಾತ್‌ನಲ್ಲಿ ₹290 ಕೋಟಿ ಮೌಲ್ಯದ ನಗದು, ಡ್ರಗ್ಸ್ ಮತ್ತು ಮದ್ಯ ವಶ
ಗುಜರಾತಿನಲ್ಲಿ ವಶಪಡಿಸಿಕೊಂಡ ವಸ್ತು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 30, 2022 | 10:52 PM

ಗುರುವಾರ ಮೊದಲ ಹಂತದಲ್ಲಿ 89 ಸ್ಥಾನಗಳಿಗೆ 788 ಅಭ್ಯರ್ಥಿಗಳಿಗೆ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ (Gujarat) ಈಗಾಗಲೇ ₹290 ಕೋಟಿ ಮೌಲ್ಯದ ನಗದು, ಡ್ರಗ್ಸ್, ಮದ್ಯ ಮತ್ತು ಉಚಿತ ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ವಶಪಡಿಸಿಕೊಂಡಕ್ಕಿಂತ 10 ಪಟ್ಟು ಹೆಚ್ಚು ವಸ್ತುಗಳನ್ನು ವಶಪಡಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.2017ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು ವಶಪಡಿಸಿಕೊಂಡ ಮೊತ್ತ ₹27.21 ಕೋಟಿ. ನವೆಂಬರ್ 29 ರ ಹೊತ್ತಿಗೆ ಒಟ್ಟು ವಶಪಡಿಸಿಕೊಳ್ಳುವಿಕೆಯು ₹290.24 ಕೋಟಿಗಳಷ್ಟಿತ್ತು. 2017 ರಲ್ಲಿ ವಶಪಡಿಸಿಕೊಂಡಿದ್ದಕ್ಕಿಂತ 10.66 ಪಟ್ಟು ಜಾಸ್ತಿಯಾಗಿದೆ ಇದು. ಅನೇಕ ಕಾನೂನು ಜಾರಿ ಸಂಸ್ಥೆಗಳು ಅದರ ಯೋಜನೆ ಮತ್ತು ವೀಕ್ಷಣೆಯ ಪರಿಣಾಮವಾಗಿ ರಾಜ್ಯದ ಚುನಾವಣಾ ಪ್ರಕ್ರಿಯೆಯು ದಾಖಲೆಯ ವಶಪಡಿಸಿಕೊಳ್ಳುವಿಕೆ ಆಗಿದೆ ಎಂದು ಚುನಾವಣಾ ಆಯೋಗ (Election Commission) ಹೇಳಿದೆ.ಗುಜರಾತ್‌ನ ಎಟಿಎಸ್ ಅಧಿಕಾರಿಗಳ ಗುಂಪು ವಡೋದರಾ (ಗ್ರಾಮೀಣ) ಮತ್ತು ವಡೋದರಾ ನಗರದಲ್ಲಿ ನಡೆಸಲಾಗುತ್ತಿರುವ ಮಹತ್ವದ ಡ್ರಗ್ಸ್ ಭಾರೀ ರವಾನೆಯ ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುನ್ನಡೆಸುತ್ತಿದೆ.ಈ ತಂಡವು ಸುಮಾರು ₹ 478 ಕೋಟಿ ಮೌಲ್ಯದ ಸರಿಸುಮಾರು 143 ಕೆಜಿ ಮೆಫೆಡ್ರೋನ್ (ಸಿಂಥೆಟಿಕ್ ನಾರ್ಕೋಟಿಕ್) ಅನ್ನು ಪತ್ತೆ ಮಾಡಿದೆ ಮತ್ತು ಎರಡು ಮೆಫೆಡ್ರೋನ್ ಔಷಧ ತಯಾರಿಕಾ ಕೇಂದ್ರಗಳನ್ನು ಪತ್ತೆ ಮಾಡಿದೆ.

ನಾಡಿಯಾಡ್ ಮತ್ತು ವಡೋದರಾದಿಂದ ಐದು ಜನರನ್ನು ಬಂಧಿಸಲಾಗಿದ್ದು, ಅಹಮದಾಬಾದ್‌ನ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲಾಗಿದೆ. 1985 ರ ಎನ್‌ಡಿಪಿಎಸ್ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕಾರ್ಯಾಚರಣೆ ಪ್ರಗತಿಯಲ್ಲಿದೆ ಮತ್ತು ಕಾರ್ಯಾಚರಣೆ ಪೂರ್ಣಗೊಂಡ ನಂತರ ಸಂಪೂರ್ಣ ವಿವರಗಳು ಲಭ್ಯವಾಗುತ್ತವೆ ಎಂದು ಚುನಾವಣಾ ಸಮಿತಿ ಹೇಳಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 89 ಸ್ಥಾನಗಳ ಪೈಕಿ 2017ರ ಚುನಾವಣೆಯಲ್ಲಿ ಬಿಜೆಪಿ 48, ಕಾಂಗ್ರೆಸ್ 40, ಒಂದು ಸ್ಥಾನವನ್ನು ಪಕ್ಷೇತರ ಅಭ್ಯರ್ಥಿ ಗೆದ್ದುಕೊಂಡಿದ್ದರು.ಗುರುವಾರ ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ 14,382 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 5ಕ್ಕೆ (ಸೋಮವಾರ) ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ