AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಉಚಿತ​ ವಿದ್ಯುತ್, ಸಾಲಮನ್ನಾ ಭರವಸೆ

ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಅನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವುದಾಗಿ ಭರವಸೆ ನೀಡಿದೆ.

ಗುಜರಾತ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಉಚಿತ​ ವಿದ್ಯುತ್, ಸಾಲಮನ್ನಾ ಭರವಸೆ
ಕಾಂಗ್ರೆಸ್ ಪಕ್ಷ
TV9 Web
| Edited By: |

Updated on:Nov 12, 2022 | 4:18 PM

Share

ಅಹಮದಾಬಾದ್‌: ಗುಜರಾತ್ ವಿಧಾನಸಭೆ ಚುನಾವಣೆ (Gujarat Assembly elections) ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಪ್ರಚಾರ ಚುರುಕುಗೊಳಿಸಿದೆ. ಇದೀಗ ಕಾಂಗ್ರೆಸ್ ಪ್ರಣಾಳಿಕೆ(Congress Manifesto) ಬಿಡುಗಡೆ ಮಾಡಿದೆ. ಗುಜರಾತ್​ ಕಾಂಗ್ರೆಸ್​ ಉಸ್ತುವಾರಿ ಹೊತ್ತುಕೊಂಡಿರುವ ಅಶೋಕ್​ ಗೆಹ್ಲೋಟ್​ ಇಂದು(ನವೆಂಬರ್ 12) ಪ್ರಣಾಳಿಕೆಯನ್ನು ರಿಲೀಸ್ ಮಾಡಿದ್ದು, ಹಲವು ಯೋಜನೆಗಳ ಭರವಸೆಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದೆ.

ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಅನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಗುಜರಾತ್ ಚುನಾವಣಾ ಪ್ರಣಾಳಿಕೆ ಇಂತಿದೆ.

* ಗುಜರಾತ್​ನ 10 ಲಕ್ಷ ಯುವಕರಿಗೆ ಉದ್ಯೋಗದ ಭರವಸೆ

* 300 ಯೂನಿಟ್ ಉಚಿತ​ ವಿದ್ಯುತ್

* ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ಭತ್ಯೆ ನೀಡುವ ಭರವಸೆ

* ಗುಜರಾತ್​​ ರೈತರ 3 ಲಕ್ಷ ರೂ.ವರೆಗಿನ ಸಾಲಮನ್ನಾ

* ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ

* ಗುಜರಾತ್​ನಲ್ಲಿ ಆಂಗ್ಲ ಮಾಧ್ಯಮ ಶಾಲೆಗಳ ಓಪನ್

* 10 ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ

* ಅಂಗವಿಕಲ, ವಿಧವೆ, ನಿರ್ಗತಿಕ ಮಹಿಳೆಯರಿಗೆ ಮಾಸಿಕ ಎರಡು ಸಾವಿರ ರೂ.

* ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್

* ರೈತರಿಗೆ 10 ಗಂಟೆ ವಿದ್ಯುತ್ ಸರಬರಾಜು

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Sat, 12 November 22

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ