AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಉಚಿತ​ ವಿದ್ಯುತ್, ಸಾಲಮನ್ನಾ ಭರವಸೆ

ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಅನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವುದಾಗಿ ಭರವಸೆ ನೀಡಿದೆ.

ಗುಜರಾತ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಉಚಿತ​ ವಿದ್ಯುತ್, ಸಾಲಮನ್ನಾ ಭರವಸೆ
ಕಾಂಗ್ರೆಸ್ ಪಕ್ಷ
TV9 Web
| Edited By: |

Updated on:Nov 12, 2022 | 4:18 PM

Share

ಅಹಮದಾಬಾದ್‌: ಗುಜರಾತ್ ವಿಧಾನಸಭೆ ಚುನಾವಣೆ (Gujarat Assembly elections) ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಪ್ರಚಾರ ಚುರುಕುಗೊಳಿಸಿದೆ. ಇದೀಗ ಕಾಂಗ್ರೆಸ್ ಪ್ರಣಾಳಿಕೆ(Congress Manifesto) ಬಿಡುಗಡೆ ಮಾಡಿದೆ. ಗುಜರಾತ್​ ಕಾಂಗ್ರೆಸ್​ ಉಸ್ತುವಾರಿ ಹೊತ್ತುಕೊಂಡಿರುವ ಅಶೋಕ್​ ಗೆಹ್ಲೋಟ್​ ಇಂದು(ನವೆಂಬರ್ 12) ಪ್ರಣಾಳಿಕೆಯನ್ನು ರಿಲೀಸ್ ಮಾಡಿದ್ದು, ಹಲವು ಯೋಜನೆಗಳ ಭರವಸೆಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದೆ.

ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಅನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಗುಜರಾತ್ ಚುನಾವಣಾ ಪ್ರಣಾಳಿಕೆ ಇಂತಿದೆ.

* ಗುಜರಾತ್​ನ 10 ಲಕ್ಷ ಯುವಕರಿಗೆ ಉದ್ಯೋಗದ ಭರವಸೆ

* 300 ಯೂನಿಟ್ ಉಚಿತ​ ವಿದ್ಯುತ್

* ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ಭತ್ಯೆ ನೀಡುವ ಭರವಸೆ

* ಗುಜರಾತ್​​ ರೈತರ 3 ಲಕ್ಷ ರೂ.ವರೆಗಿನ ಸಾಲಮನ್ನಾ

* ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ

* ಗುಜರಾತ್​ನಲ್ಲಿ ಆಂಗ್ಲ ಮಾಧ್ಯಮ ಶಾಲೆಗಳ ಓಪನ್

* 10 ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ

* ಅಂಗವಿಕಲ, ವಿಧವೆ, ನಿರ್ಗತಿಕ ಮಹಿಳೆಯರಿಗೆ ಮಾಸಿಕ ಎರಡು ಸಾವಿರ ರೂ.

* ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್

* ರೈತರಿಗೆ 10 ಗಂಟೆ ವಿದ್ಯುತ್ ಸರಬರಾಜು

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Sat, 12 November 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’