AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Elections: ಮತದಾರರ ಓಲೈಕೆಗೆ ಮುಂದಾದ ಬಿಜೆಪಿ; ಸಿಎನ್​ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ, 2 ಸಿಲಿಂಡರ್ ಉಚಿತ

ಗುಜರಾತ್​ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಸತತ ಪ್ರಯತ್ನ ನಡೆಸುತ್ತಿವೆ.

Gujarat Elections: ಮತದಾರರ ಓಲೈಕೆಗೆ ಮುಂದಾದ ಬಿಜೆಪಿ; ಸಿಎನ್​ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ, 2 ಸಿಲಿಂಡರ್ ಉಚಿತ
ಸಿಎನ್​ಜಿ ಮತ್ತು ಪಿನ್​ಜಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Oct 18, 2022 | 9:16 AM

Share

ಗಾಂಧಿನಗರ: ದೇಶದಲ್ಲಿ ಸಾಲುಸಾಲು ಚುನಾವಣೆಗಳು ಇನ್ನೇನು ಘೋಷಣೆಯಾಗಲಿವೆ. ಹಿಮಾಚಲ ಪ್ರದೇಶಕ್ಕೆ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್ 12ರಂದು ಮತದಾನ ಹಾಗೂ ಡಿಸೆಂಬರ್ 8ಕ್ಕೆ ಫಲಿತಾಂಶ ಎಂದು ಚುನಾವಣಾ ಆಯೋಗವು ಘೋಷಿಸಿದೆ. ಚುನಾವಣಾ ಆಯೋಗವು ನಾಲ್ಕು ದಿನಗಳ ಹಿಂದೆ (ಅ 14) ನಡೆಸಿದ ಸುದ್ದಿಗೋಷ್ಠಿಯಲ್ಲಿಯೇ ಗುಜರಾತ್​ ರಾಜ್ಯದ ವಿಧಾನಸಭೆ ಚುನಾವಣೆಯೂ ಘೋಷಣೆಯಾಗಬಹುದು ಎಂದು ಹೇಳಲಾಗಿತ್ತು. ಆದರೆ ಅಚ್ಚರಿಯೆಂಬಂತೆ ಅಂದು ಆಯೋಗವು ಗುಜರಾತ್​ ಚುನಾವಣೆಯ ದಿನಾಂಕವನ್ನು ಘೋಷಿಸಲಿಲ್ಲ. ಈ ನಡುವೆ ಗುಜರಾತ್​ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಸತತ ಪ್ರಯತ್ನ ನಡೆಸುತ್ತಿವೆ.

ದೀಪಾವಳಿ ಹಬ್ಬಸಾಲು ಸಮೀಪಿಸುತ್ತಿರುವ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಸಿಎನ್​ಜಿ (Compressed Natural Gas – CNG) ಮತ್ತು ಪಿಎನ್​ಜಿ (Piped Natural Gas – PNG) ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (Value Added Tax – VAT) ಶೇ 10ರಷ್ಟು ಕಡಿಮೆ ಮಾಡಿದೆ. ಇದರ ಜೊತೆಗೆ ಉಜ್ವಲ ಯೋಜನೆಯ 38 ಲಕ್ಷ ಫಲಾನುಭವಿಗಳಿಗೆ ವರ್ಷಕ್ಕೆ ಎರಡು ಗ್ಯಾಸ್ ಸಿಲಿಂಡರ್​ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ. ಈ ರಿಯಾಯ್ತಿಗಳು ಜಾರಿಗೆ ಬಂದರೆ ಗುಜರಾತ್ ಸರ್ಕಾರಕ್ಕೆ ₹ 1,650 ಕೋಟಿ ಹೊರೆ ಬೀಳಲಿದೆ.

‘ಸರ್ಕಾರವು ಸಿಎನ್​ಜಿ ಮತ್ತು ಪೈಪ್​ಲೈನ್ ಮೂಲಕ ಸರಬರಾಜಾಗುವ ಅಡುಗೆ ಅನಿಲ (ಪಿಎನ್​ಜಿ) ಮೇಲಿನ ವ್ಯಾಟ್​ ಪ್ರಮಾಣವನ್ನು ಶೇ 10ರಷ್ಟು ಕಡಿಮೆ ಮಾಡಿದೆ. ಇದರಿಂದ ಗೃಹಿಣಿಯರು, ಆಟೊ ಚಾಲಕರು ಮತ್ತು ಸಿಎನ್​ಜಿ ಮೂಲಕ ವಾಹನಗಳನ್ನು ಚಾಲನೆ ಮಾಡುವವರಿಗೆ ಅನುಕೂಲವಾಗುತ್ತದೆ’ ಎಂದು ಗುಜರಾತ್ ಸರ್ಕಾರದ ಸಚಿವ ಜಿತ್ತು ವಘಾನಿ ಹೇಳಿದರು.

ಗುಜರಾತ್​ನಲ್ಲಿ ಸಿಎನ್​ಜಿ ಮತ್ತು ಪಿಎನ್​ಜಿ ಪ್ರಮಾಣವು ಶೇ 15ರಷ್ಟು ಇದೆ. ಮುಂದಿನ ದಿನಗಳಲ್ಲಿ ತೆರಿಗೆ ಪ್ರಮಾಣವು ಶೇ 5ಕ್ಕೆ ಕುಸಿಯಲಿದೆ ಎಂದು ಉದ್ಯಮದ ಮೂಲಗಳು ಹೇಳಿವೆ. ಗುಜರಾತ್​ನಲ್ಲಿ ಸಿಎನ್​ಜಿ ದರವು ಒಂದು ಕೆಜಿಗೆ ₹ 6 ಮತ್ತು ಪಿಎನ್​ಜಿ ದರವು ಒಂದು ಮೀಟರ್ ಮೀಟರ್​ಗೆ ₹ 5ರಷ್ಟು ಕಡಿಮೆಯಾಗಲಿದೆ. ತೆರಿಗೆ ಕಡಿತದ ನಂತರ ರಾಜ್ಯ ಸರ್ಕಾರದ ಮೇಲೆ ₹ 1,000 ಕೋಟಿಯಷ್ಟು ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

‘ಗುಜರಾತ್​ನಲ್ಲಿ ಉಜ್ವಲಾ ಯೋಜನೆಯ ಅನ್ವಯ 38 ಲಕ್ಷ ಕುಟುಂಬಗಳಿಗೆ ಎಲ್​ಪಿಜಿ ಸಂಪರ್ಕ ನೀಡಲಾಗಿದೆ. ರಾಜ್ಯ ಸರ್ಕಾರವು ಈ ಎಲ್ಲ ಕುಟುಂಬಗಳಿಗೂ ವರ್ಷಕ್ಕೆ 2 ಉಚಿತ ಸಿಲಿಂಡರ್ ನೀಡಲು ಮುಂದಾಗಿದ್ದು, ಅದಕ್ಕಾಗಿ ₹ 650 ಕೋಟಿ ವೆಚ್ಚ ಮಾಡಲಿದೆ’ ಎಂದು ಸಚಿವರು ವಿವರಿಸಿದ್ದಾರೆ. ‘ಸಿಲಿಂಡರ್​ ಖರೀದಿಸಿದ ಮೂರು ದಿನಗಳ ಒಳಗೆ ಸಬ್ಸಿಡಿ ಮೊತ್ತವು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ’ ಎಂದು ಅವರು ಸ್ಪಷ್ಟಪಡಿಸಿದರು.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ