Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Elections: ಮತದಾರರ ಓಲೈಕೆಗೆ ಮುಂದಾದ ಬಿಜೆಪಿ; ಸಿಎನ್​ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ, 2 ಸಿಲಿಂಡರ್ ಉಚಿತ

ಗುಜರಾತ್​ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಸತತ ಪ್ರಯತ್ನ ನಡೆಸುತ್ತಿವೆ.

Gujarat Elections: ಮತದಾರರ ಓಲೈಕೆಗೆ ಮುಂದಾದ ಬಿಜೆಪಿ; ಸಿಎನ್​ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ, 2 ಸಿಲಿಂಡರ್ ಉಚಿತ
ಸಿಎನ್​ಜಿ ಮತ್ತು ಪಿನ್​ಜಿ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 18, 2022 | 9:16 AM

ಗಾಂಧಿನಗರ: ದೇಶದಲ್ಲಿ ಸಾಲುಸಾಲು ಚುನಾವಣೆಗಳು ಇನ್ನೇನು ಘೋಷಣೆಯಾಗಲಿವೆ. ಹಿಮಾಚಲ ಪ್ರದೇಶಕ್ಕೆ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್ 12ರಂದು ಮತದಾನ ಹಾಗೂ ಡಿಸೆಂಬರ್ 8ಕ್ಕೆ ಫಲಿತಾಂಶ ಎಂದು ಚುನಾವಣಾ ಆಯೋಗವು ಘೋಷಿಸಿದೆ. ಚುನಾವಣಾ ಆಯೋಗವು ನಾಲ್ಕು ದಿನಗಳ ಹಿಂದೆ (ಅ 14) ನಡೆಸಿದ ಸುದ್ದಿಗೋಷ್ಠಿಯಲ್ಲಿಯೇ ಗುಜರಾತ್​ ರಾಜ್ಯದ ವಿಧಾನಸಭೆ ಚುನಾವಣೆಯೂ ಘೋಷಣೆಯಾಗಬಹುದು ಎಂದು ಹೇಳಲಾಗಿತ್ತು. ಆದರೆ ಅಚ್ಚರಿಯೆಂಬಂತೆ ಅಂದು ಆಯೋಗವು ಗುಜರಾತ್​ ಚುನಾವಣೆಯ ದಿನಾಂಕವನ್ನು ಘೋಷಿಸಲಿಲ್ಲ. ಈ ನಡುವೆ ಗುಜರಾತ್​ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಸತತ ಪ್ರಯತ್ನ ನಡೆಸುತ್ತಿವೆ.

ದೀಪಾವಳಿ ಹಬ್ಬಸಾಲು ಸಮೀಪಿಸುತ್ತಿರುವ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಸಿಎನ್​ಜಿ (Compressed Natural Gas – CNG) ಮತ್ತು ಪಿಎನ್​ಜಿ (Piped Natural Gas – PNG) ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (Value Added Tax – VAT) ಶೇ 10ರಷ್ಟು ಕಡಿಮೆ ಮಾಡಿದೆ. ಇದರ ಜೊತೆಗೆ ಉಜ್ವಲ ಯೋಜನೆಯ 38 ಲಕ್ಷ ಫಲಾನುಭವಿಗಳಿಗೆ ವರ್ಷಕ್ಕೆ ಎರಡು ಗ್ಯಾಸ್ ಸಿಲಿಂಡರ್​ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ. ಈ ರಿಯಾಯ್ತಿಗಳು ಜಾರಿಗೆ ಬಂದರೆ ಗುಜರಾತ್ ಸರ್ಕಾರಕ್ಕೆ ₹ 1,650 ಕೋಟಿ ಹೊರೆ ಬೀಳಲಿದೆ.

‘ಸರ್ಕಾರವು ಸಿಎನ್​ಜಿ ಮತ್ತು ಪೈಪ್​ಲೈನ್ ಮೂಲಕ ಸರಬರಾಜಾಗುವ ಅಡುಗೆ ಅನಿಲ (ಪಿಎನ್​ಜಿ) ಮೇಲಿನ ವ್ಯಾಟ್​ ಪ್ರಮಾಣವನ್ನು ಶೇ 10ರಷ್ಟು ಕಡಿಮೆ ಮಾಡಿದೆ. ಇದರಿಂದ ಗೃಹಿಣಿಯರು, ಆಟೊ ಚಾಲಕರು ಮತ್ತು ಸಿಎನ್​ಜಿ ಮೂಲಕ ವಾಹನಗಳನ್ನು ಚಾಲನೆ ಮಾಡುವವರಿಗೆ ಅನುಕೂಲವಾಗುತ್ತದೆ’ ಎಂದು ಗುಜರಾತ್ ಸರ್ಕಾರದ ಸಚಿವ ಜಿತ್ತು ವಘಾನಿ ಹೇಳಿದರು.

ಗುಜರಾತ್​ನಲ್ಲಿ ಸಿಎನ್​ಜಿ ಮತ್ತು ಪಿಎನ್​ಜಿ ಪ್ರಮಾಣವು ಶೇ 15ರಷ್ಟು ಇದೆ. ಮುಂದಿನ ದಿನಗಳಲ್ಲಿ ತೆರಿಗೆ ಪ್ರಮಾಣವು ಶೇ 5ಕ್ಕೆ ಕುಸಿಯಲಿದೆ ಎಂದು ಉದ್ಯಮದ ಮೂಲಗಳು ಹೇಳಿವೆ. ಗುಜರಾತ್​ನಲ್ಲಿ ಸಿಎನ್​ಜಿ ದರವು ಒಂದು ಕೆಜಿಗೆ ₹ 6 ಮತ್ತು ಪಿಎನ್​ಜಿ ದರವು ಒಂದು ಮೀಟರ್ ಮೀಟರ್​ಗೆ ₹ 5ರಷ್ಟು ಕಡಿಮೆಯಾಗಲಿದೆ. ತೆರಿಗೆ ಕಡಿತದ ನಂತರ ರಾಜ್ಯ ಸರ್ಕಾರದ ಮೇಲೆ ₹ 1,000 ಕೋಟಿಯಷ್ಟು ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

‘ಗುಜರಾತ್​ನಲ್ಲಿ ಉಜ್ವಲಾ ಯೋಜನೆಯ ಅನ್ವಯ 38 ಲಕ್ಷ ಕುಟುಂಬಗಳಿಗೆ ಎಲ್​ಪಿಜಿ ಸಂಪರ್ಕ ನೀಡಲಾಗಿದೆ. ರಾಜ್ಯ ಸರ್ಕಾರವು ಈ ಎಲ್ಲ ಕುಟುಂಬಗಳಿಗೂ ವರ್ಷಕ್ಕೆ 2 ಉಚಿತ ಸಿಲಿಂಡರ್ ನೀಡಲು ಮುಂದಾಗಿದ್ದು, ಅದಕ್ಕಾಗಿ ₹ 650 ಕೋಟಿ ವೆಚ್ಚ ಮಾಡಲಿದೆ’ ಎಂದು ಸಚಿವರು ವಿವರಿಸಿದ್ದಾರೆ. ‘ಸಿಲಿಂಡರ್​ ಖರೀದಿಸಿದ ಮೂರು ದಿನಗಳ ಒಳಗೆ ಸಬ್ಸಿಡಿ ಮೊತ್ತವು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ’ ಎಂದು ಅವರು ಸ್ಪಷ್ಟಪಡಿಸಿದರು.

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ