AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Elections: ಮತದಾರರ ಓಲೈಕೆಗೆ ಮುಂದಾದ ಬಿಜೆಪಿ; ಸಿಎನ್​ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ, 2 ಸಿಲಿಂಡರ್ ಉಚಿತ

ಗುಜರಾತ್​ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಸತತ ಪ್ರಯತ್ನ ನಡೆಸುತ್ತಿವೆ.

Gujarat Elections: ಮತದಾರರ ಓಲೈಕೆಗೆ ಮುಂದಾದ ಬಿಜೆಪಿ; ಸಿಎನ್​ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ, 2 ಸಿಲಿಂಡರ್ ಉಚಿತ
ಸಿಎನ್​ಜಿ ಮತ್ತು ಪಿನ್​ಜಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Oct 18, 2022 | 9:16 AM

Share

ಗಾಂಧಿನಗರ: ದೇಶದಲ್ಲಿ ಸಾಲುಸಾಲು ಚುನಾವಣೆಗಳು ಇನ್ನೇನು ಘೋಷಣೆಯಾಗಲಿವೆ. ಹಿಮಾಚಲ ಪ್ರದೇಶಕ್ಕೆ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್ 12ರಂದು ಮತದಾನ ಹಾಗೂ ಡಿಸೆಂಬರ್ 8ಕ್ಕೆ ಫಲಿತಾಂಶ ಎಂದು ಚುನಾವಣಾ ಆಯೋಗವು ಘೋಷಿಸಿದೆ. ಚುನಾವಣಾ ಆಯೋಗವು ನಾಲ್ಕು ದಿನಗಳ ಹಿಂದೆ (ಅ 14) ನಡೆಸಿದ ಸುದ್ದಿಗೋಷ್ಠಿಯಲ್ಲಿಯೇ ಗುಜರಾತ್​ ರಾಜ್ಯದ ವಿಧಾನಸಭೆ ಚುನಾವಣೆಯೂ ಘೋಷಣೆಯಾಗಬಹುದು ಎಂದು ಹೇಳಲಾಗಿತ್ತು. ಆದರೆ ಅಚ್ಚರಿಯೆಂಬಂತೆ ಅಂದು ಆಯೋಗವು ಗುಜರಾತ್​ ಚುನಾವಣೆಯ ದಿನಾಂಕವನ್ನು ಘೋಷಿಸಲಿಲ್ಲ. ಈ ನಡುವೆ ಗುಜರಾತ್​ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಸತತ ಪ್ರಯತ್ನ ನಡೆಸುತ್ತಿವೆ.

ದೀಪಾವಳಿ ಹಬ್ಬಸಾಲು ಸಮೀಪಿಸುತ್ತಿರುವ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಸಿಎನ್​ಜಿ (Compressed Natural Gas – CNG) ಮತ್ತು ಪಿಎನ್​ಜಿ (Piped Natural Gas – PNG) ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (Value Added Tax – VAT) ಶೇ 10ರಷ್ಟು ಕಡಿಮೆ ಮಾಡಿದೆ. ಇದರ ಜೊತೆಗೆ ಉಜ್ವಲ ಯೋಜನೆಯ 38 ಲಕ್ಷ ಫಲಾನುಭವಿಗಳಿಗೆ ವರ್ಷಕ್ಕೆ ಎರಡು ಗ್ಯಾಸ್ ಸಿಲಿಂಡರ್​ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ. ಈ ರಿಯಾಯ್ತಿಗಳು ಜಾರಿಗೆ ಬಂದರೆ ಗುಜರಾತ್ ಸರ್ಕಾರಕ್ಕೆ ₹ 1,650 ಕೋಟಿ ಹೊರೆ ಬೀಳಲಿದೆ.

‘ಸರ್ಕಾರವು ಸಿಎನ್​ಜಿ ಮತ್ತು ಪೈಪ್​ಲೈನ್ ಮೂಲಕ ಸರಬರಾಜಾಗುವ ಅಡುಗೆ ಅನಿಲ (ಪಿಎನ್​ಜಿ) ಮೇಲಿನ ವ್ಯಾಟ್​ ಪ್ರಮಾಣವನ್ನು ಶೇ 10ರಷ್ಟು ಕಡಿಮೆ ಮಾಡಿದೆ. ಇದರಿಂದ ಗೃಹಿಣಿಯರು, ಆಟೊ ಚಾಲಕರು ಮತ್ತು ಸಿಎನ್​ಜಿ ಮೂಲಕ ವಾಹನಗಳನ್ನು ಚಾಲನೆ ಮಾಡುವವರಿಗೆ ಅನುಕೂಲವಾಗುತ್ತದೆ’ ಎಂದು ಗುಜರಾತ್ ಸರ್ಕಾರದ ಸಚಿವ ಜಿತ್ತು ವಘಾನಿ ಹೇಳಿದರು.

ಗುಜರಾತ್​ನಲ್ಲಿ ಸಿಎನ್​ಜಿ ಮತ್ತು ಪಿಎನ್​ಜಿ ಪ್ರಮಾಣವು ಶೇ 15ರಷ್ಟು ಇದೆ. ಮುಂದಿನ ದಿನಗಳಲ್ಲಿ ತೆರಿಗೆ ಪ್ರಮಾಣವು ಶೇ 5ಕ್ಕೆ ಕುಸಿಯಲಿದೆ ಎಂದು ಉದ್ಯಮದ ಮೂಲಗಳು ಹೇಳಿವೆ. ಗುಜರಾತ್​ನಲ್ಲಿ ಸಿಎನ್​ಜಿ ದರವು ಒಂದು ಕೆಜಿಗೆ ₹ 6 ಮತ್ತು ಪಿಎನ್​ಜಿ ದರವು ಒಂದು ಮೀಟರ್ ಮೀಟರ್​ಗೆ ₹ 5ರಷ್ಟು ಕಡಿಮೆಯಾಗಲಿದೆ. ತೆರಿಗೆ ಕಡಿತದ ನಂತರ ರಾಜ್ಯ ಸರ್ಕಾರದ ಮೇಲೆ ₹ 1,000 ಕೋಟಿಯಷ್ಟು ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

‘ಗುಜರಾತ್​ನಲ್ಲಿ ಉಜ್ವಲಾ ಯೋಜನೆಯ ಅನ್ವಯ 38 ಲಕ್ಷ ಕುಟುಂಬಗಳಿಗೆ ಎಲ್​ಪಿಜಿ ಸಂಪರ್ಕ ನೀಡಲಾಗಿದೆ. ರಾಜ್ಯ ಸರ್ಕಾರವು ಈ ಎಲ್ಲ ಕುಟುಂಬಗಳಿಗೂ ವರ್ಷಕ್ಕೆ 2 ಉಚಿತ ಸಿಲಿಂಡರ್ ನೀಡಲು ಮುಂದಾಗಿದ್ದು, ಅದಕ್ಕಾಗಿ ₹ 650 ಕೋಟಿ ವೆಚ್ಚ ಮಾಡಲಿದೆ’ ಎಂದು ಸಚಿವರು ವಿವರಿಸಿದ್ದಾರೆ. ‘ಸಿಲಿಂಡರ್​ ಖರೀದಿಸಿದ ಮೂರು ದಿನಗಳ ಒಳಗೆ ಸಬ್ಸಿಡಿ ಮೊತ್ತವು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ’ ಎಂದು ಅವರು ಸ್ಪಷ್ಟಪಡಿಸಿದರು.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ