Gujarat Elections: ಮತದಾರರ ಓಲೈಕೆಗೆ ಮುಂದಾದ ಬಿಜೆಪಿ; ಸಿಎನ್​ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ, 2 ಸಿಲಿಂಡರ್ ಉಚಿತ

ಗುಜರಾತ್​ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಸತತ ಪ್ರಯತ್ನ ನಡೆಸುತ್ತಿವೆ.

Gujarat Elections: ಮತದಾರರ ಓಲೈಕೆಗೆ ಮುಂದಾದ ಬಿಜೆಪಿ; ಸಿಎನ್​ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ, 2 ಸಿಲಿಂಡರ್ ಉಚಿತ
ಸಿಎನ್​ಜಿ ಮತ್ತು ಪಿನ್​ಜಿ (ಪ್ರಾತಿನಿಧಿಕ ಚಿತ್ರ)
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 18, 2022 | 9:16 AM

ಗಾಂಧಿನಗರ: ದೇಶದಲ್ಲಿ ಸಾಲುಸಾಲು ಚುನಾವಣೆಗಳು ಇನ್ನೇನು ಘೋಷಣೆಯಾಗಲಿವೆ. ಹಿಮಾಚಲ ಪ್ರದೇಶಕ್ಕೆ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್ 12ರಂದು ಮತದಾನ ಹಾಗೂ ಡಿಸೆಂಬರ್ 8ಕ್ಕೆ ಫಲಿತಾಂಶ ಎಂದು ಚುನಾವಣಾ ಆಯೋಗವು ಘೋಷಿಸಿದೆ. ಚುನಾವಣಾ ಆಯೋಗವು ನಾಲ್ಕು ದಿನಗಳ ಹಿಂದೆ (ಅ 14) ನಡೆಸಿದ ಸುದ್ದಿಗೋಷ್ಠಿಯಲ್ಲಿಯೇ ಗುಜರಾತ್​ ರಾಜ್ಯದ ವಿಧಾನಸಭೆ ಚುನಾವಣೆಯೂ ಘೋಷಣೆಯಾಗಬಹುದು ಎಂದು ಹೇಳಲಾಗಿತ್ತು. ಆದರೆ ಅಚ್ಚರಿಯೆಂಬಂತೆ ಅಂದು ಆಯೋಗವು ಗುಜರಾತ್​ ಚುನಾವಣೆಯ ದಿನಾಂಕವನ್ನು ಘೋಷಿಸಲಿಲ್ಲ. ಈ ನಡುವೆ ಗುಜರಾತ್​ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಸತತ ಪ್ರಯತ್ನ ನಡೆಸುತ್ತಿವೆ.

ದೀಪಾವಳಿ ಹಬ್ಬಸಾಲು ಸಮೀಪಿಸುತ್ತಿರುವ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಸಿಎನ್​ಜಿ (Compressed Natural Gas – CNG) ಮತ್ತು ಪಿಎನ್​ಜಿ (Piped Natural Gas – PNG) ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (Value Added Tax – VAT) ಶೇ 10ರಷ್ಟು ಕಡಿಮೆ ಮಾಡಿದೆ. ಇದರ ಜೊತೆಗೆ ಉಜ್ವಲ ಯೋಜನೆಯ 38 ಲಕ್ಷ ಫಲಾನುಭವಿಗಳಿಗೆ ವರ್ಷಕ್ಕೆ ಎರಡು ಗ್ಯಾಸ್ ಸಿಲಿಂಡರ್​ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ. ಈ ರಿಯಾಯ್ತಿಗಳು ಜಾರಿಗೆ ಬಂದರೆ ಗುಜರಾತ್ ಸರ್ಕಾರಕ್ಕೆ ₹ 1,650 ಕೋಟಿ ಹೊರೆ ಬೀಳಲಿದೆ.

‘ಸರ್ಕಾರವು ಸಿಎನ್​ಜಿ ಮತ್ತು ಪೈಪ್​ಲೈನ್ ಮೂಲಕ ಸರಬರಾಜಾಗುವ ಅಡುಗೆ ಅನಿಲ (ಪಿಎನ್​ಜಿ) ಮೇಲಿನ ವ್ಯಾಟ್​ ಪ್ರಮಾಣವನ್ನು ಶೇ 10ರಷ್ಟು ಕಡಿಮೆ ಮಾಡಿದೆ. ಇದರಿಂದ ಗೃಹಿಣಿಯರು, ಆಟೊ ಚಾಲಕರು ಮತ್ತು ಸಿಎನ್​ಜಿ ಮೂಲಕ ವಾಹನಗಳನ್ನು ಚಾಲನೆ ಮಾಡುವವರಿಗೆ ಅನುಕೂಲವಾಗುತ್ತದೆ’ ಎಂದು ಗುಜರಾತ್ ಸರ್ಕಾರದ ಸಚಿವ ಜಿತ್ತು ವಘಾನಿ ಹೇಳಿದರು.

ಗುಜರಾತ್​ನಲ್ಲಿ ಸಿಎನ್​ಜಿ ಮತ್ತು ಪಿಎನ್​ಜಿ ಪ್ರಮಾಣವು ಶೇ 15ರಷ್ಟು ಇದೆ. ಮುಂದಿನ ದಿನಗಳಲ್ಲಿ ತೆರಿಗೆ ಪ್ರಮಾಣವು ಶೇ 5ಕ್ಕೆ ಕುಸಿಯಲಿದೆ ಎಂದು ಉದ್ಯಮದ ಮೂಲಗಳು ಹೇಳಿವೆ. ಗುಜರಾತ್​ನಲ್ಲಿ ಸಿಎನ್​ಜಿ ದರವು ಒಂದು ಕೆಜಿಗೆ ₹ 6 ಮತ್ತು ಪಿಎನ್​ಜಿ ದರವು ಒಂದು ಮೀಟರ್ ಮೀಟರ್​ಗೆ ₹ 5ರಷ್ಟು ಕಡಿಮೆಯಾಗಲಿದೆ. ತೆರಿಗೆ ಕಡಿತದ ನಂತರ ರಾಜ್ಯ ಸರ್ಕಾರದ ಮೇಲೆ ₹ 1,000 ಕೋಟಿಯಷ್ಟು ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

‘ಗುಜರಾತ್​ನಲ್ಲಿ ಉಜ್ವಲಾ ಯೋಜನೆಯ ಅನ್ವಯ 38 ಲಕ್ಷ ಕುಟುಂಬಗಳಿಗೆ ಎಲ್​ಪಿಜಿ ಸಂಪರ್ಕ ನೀಡಲಾಗಿದೆ. ರಾಜ್ಯ ಸರ್ಕಾರವು ಈ ಎಲ್ಲ ಕುಟುಂಬಗಳಿಗೂ ವರ್ಷಕ್ಕೆ 2 ಉಚಿತ ಸಿಲಿಂಡರ್ ನೀಡಲು ಮುಂದಾಗಿದ್ದು, ಅದಕ್ಕಾಗಿ ₹ 650 ಕೋಟಿ ವೆಚ್ಚ ಮಾಡಲಿದೆ’ ಎಂದು ಸಚಿವರು ವಿವರಿಸಿದ್ದಾರೆ. ‘ಸಿಲಿಂಡರ್​ ಖರೀದಿಸಿದ ಮೂರು ದಿನಗಳ ಒಳಗೆ ಸಬ್ಸಿಡಿ ಮೊತ್ತವು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ’ ಎಂದು ಅವರು ಸ್ಪಷ್ಟಪಡಿಸಿದರು.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ