AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತಿನಲ್ಲಿ ಓವೈಸಿ ಪ್ರಚಾರ ವೇಳೆ ಮೋದಿ ಮೋದಿ ಎಂದು ಕೂಗಿ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಬೆಂಬಲಿಗರು

ಓವೈಸಿ ಅವರು ತಮ್ಮ ಪಕ್ಷದ ಅಭ್ಯರ್ಥಿಯ ಪ್ರಚಾರದಲ್ಲಿ ನಿರತರಾಗಿದ್ದಾಗ, ಕೈಯಲ್ಲಿ ಕಪ್ಪು ಬಾವುಟಗಳನ್ನು ಹಿಡಿದಿದ್ದ ಬಿಜೆಪಿ ಬೆಂಬಲಿಗರ ಗುಂಪು ಅಲ್ಲಿಗೆ ತಲುಪಿ "ಮೋದಿ-ಮೋದಿ" ಎಂದು ಕೂಗಲು ಪ್ರಾರಂಭಿಸಿತು

ಗುಜರಾತಿನಲ್ಲಿ ಓವೈಸಿ ಪ್ರಚಾರ ವೇಳೆ ಮೋದಿ ಮೋದಿ ಎಂದು ಕೂಗಿ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಬೆಂಬಲಿಗರು
ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಬೆಂಬಲಿಗರು
TV9 Web
| Edited By: |

Updated on: Nov 14, 2022 | 5:53 PM

Share

ಸೂರತ್ (ಗುಜರಾತ್): ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ(Asaduddin Owaisi) ಅವರು ಗುಜರಾತ್ ಚುನಾವಣೆಗಾಗಿ (Gujarat assembly elections) ಪೂರ್ವ ಸೂರತ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಪಕ್ಷದ ಅಭ್ಯರ್ಥಿ ಪರ ಭಾನುವಾರ ರಾತ್ರಿ ಪ್ರಚಾರ ನಡೆಸುತ್ತಿದ್ದಾಗ ಅಲ್ಲಿ ನೆರೆದಿದ್ದ ಬಿಜೆಪಿ ಬೆಂಬಲಿಗರು ‘ಮೋದಿ-ಮೋದಿ’ ಘೋಷಣೆ ಕೂಗಿ  ಕಪ್ಪು ಬಾವುಟ ತೋರಿಸಿದ್ದಾರೆ. ಓವೈಸಿ ಅವರು ತಮ್ಮ ಪಕ್ಷದ ಅಭ್ಯರ್ಥಿಯ ಪ್ರಚಾರದಲ್ಲಿ ನಿರತರಾಗಿದ್ದಾಗ, ಕೈಯಲ್ಲಿ ಕಪ್ಪು ಬಾವುಟಗಳನ್ನು ಹಿಡಿದಿದ್ದ ಬಿಜೆಪಿ ಬೆಂಬಲಿಗರ ಗುಂಪು ಅಲ್ಲಿಗೆ ತಲುಪಿ “ಮೋದಿ-ಮೋದಿ” ಎಂದು ಕೂಗಲು ಪ್ರಾರಂಭಿಸಿತು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊಗಳಲ್ಲಿ, ಎಐಎಂಐಎಂ ಮುಖ್ಯಸ್ಥರ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಯುವಕರು ಕಪ್ಪು ಬಾವುಟವನ್ನು ಬೀಸುತ್ತಿರುವುದನ್ನು ಕಾಣಬಹುದು. ಪ್ರತಿಭಟನೆಯನ್ನು ನಿರ್ಲಕ್ಷಿಸಿದ ಓವೈಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನರು ತಮ್ಮ ಪಕ್ಷವನ್ನು ಬೆಂಬಲಿಸುವಂತೆ ರ್ಯಾಲಿಯಲ್ಲಿ ಮನವಿ ಮಾಡಿದರು.

“ಅವರು ( ಬಿಜೆಪಿ) ಏಕರೂಪ ನಾಗರಿಕ ಸಂಹಿತೆಯನ್ನು ತರುವುದಾಗಿ ಹೇಳಿದರು. ಏಕೆ? ಏಕೆಂದರೆ ಅವರು ಅಲ್ಪಸಂಖ್ಯಾತರ ಸಂಸ್ಕೃತಿ ತಹಜೀಬ್ ಅನ್ನು ಕೊನೆಗೊಳಿಸಲು ಬಯಸುತ್ತಾರೆ ಎಂದು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥರು ಹೇಳಿದರು. ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ನಾನು ಬಿಜೆಪಿಯನ್ನು ಕೇಳಲು ಬಯಸುತ್ತೇನೆ, ಅವರು (ಬಿಜೆಪಿ) ಏಕರೂಪ ನಾಗರಿಕ ಸಂಹಿತೆ ತರಲು ಯೋಜಿಸಿದರೆ, ಅವರು ಅಶಾಂತಿ ಇರುವ ಪ್ರದೇಶಗಳನ್ನು ಸರಿಮಾಡಬಾರದು? ಎಂದು ಓವೈಸಿ ಕೇಳಿದ್ದಾರೆ.

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಟೀಕಿಸಿದ ಓವೈಸಿ ಇದು ಅಲ್ಪಸಂಖ್ಯಾತರ ವಿರೋಧಿ ಎಂದು ಆರೋಪಿಸಿದರು. ಅಲ್ಪಸಂಖ್ಯಾತರ ಜನಸಂಖ್ಯೆ ಇರುವ ಪ್ರದೇಶಗಳ ಅಭಿವೃದ್ಧಿಯನ್ನು ಅವರು ಎಂದಿಗೂ ಖಚಿತಪಡಿಸುವುದಿಲ್ಲ ಎಂದು ಓವೈಸಿ ಆರೋಪಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥರು ಇಂದು ಸಂಜೆ ಗುಜರಾತ್‌ನಲ್ಲಿ ಮತ್ತೊಂದು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?