AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತಿನಲ್ಲಿ ಓವೈಸಿ ಪ್ರಚಾರ ವೇಳೆ ಮೋದಿ ಮೋದಿ ಎಂದು ಕೂಗಿ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಬೆಂಬಲಿಗರು

ಓವೈಸಿ ಅವರು ತಮ್ಮ ಪಕ್ಷದ ಅಭ್ಯರ್ಥಿಯ ಪ್ರಚಾರದಲ್ಲಿ ನಿರತರಾಗಿದ್ದಾಗ, ಕೈಯಲ್ಲಿ ಕಪ್ಪು ಬಾವುಟಗಳನ್ನು ಹಿಡಿದಿದ್ದ ಬಿಜೆಪಿ ಬೆಂಬಲಿಗರ ಗುಂಪು ಅಲ್ಲಿಗೆ ತಲುಪಿ "ಮೋದಿ-ಮೋದಿ" ಎಂದು ಕೂಗಲು ಪ್ರಾರಂಭಿಸಿತು

ಗುಜರಾತಿನಲ್ಲಿ ಓವೈಸಿ ಪ್ರಚಾರ ವೇಳೆ ಮೋದಿ ಮೋದಿ ಎಂದು ಕೂಗಿ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಬೆಂಬಲಿಗರು
ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಬೆಂಬಲಿಗರು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 14, 2022 | 5:53 PM

Share

ಸೂರತ್ (ಗುಜರಾತ್): ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ(Asaduddin Owaisi) ಅವರು ಗುಜರಾತ್ ಚುನಾವಣೆಗಾಗಿ (Gujarat assembly elections) ಪೂರ್ವ ಸೂರತ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಪಕ್ಷದ ಅಭ್ಯರ್ಥಿ ಪರ ಭಾನುವಾರ ರಾತ್ರಿ ಪ್ರಚಾರ ನಡೆಸುತ್ತಿದ್ದಾಗ ಅಲ್ಲಿ ನೆರೆದಿದ್ದ ಬಿಜೆಪಿ ಬೆಂಬಲಿಗರು ‘ಮೋದಿ-ಮೋದಿ’ ಘೋಷಣೆ ಕೂಗಿ  ಕಪ್ಪು ಬಾವುಟ ತೋರಿಸಿದ್ದಾರೆ. ಓವೈಸಿ ಅವರು ತಮ್ಮ ಪಕ್ಷದ ಅಭ್ಯರ್ಥಿಯ ಪ್ರಚಾರದಲ್ಲಿ ನಿರತರಾಗಿದ್ದಾಗ, ಕೈಯಲ್ಲಿ ಕಪ್ಪು ಬಾವುಟಗಳನ್ನು ಹಿಡಿದಿದ್ದ ಬಿಜೆಪಿ ಬೆಂಬಲಿಗರ ಗುಂಪು ಅಲ್ಲಿಗೆ ತಲುಪಿ “ಮೋದಿ-ಮೋದಿ” ಎಂದು ಕೂಗಲು ಪ್ರಾರಂಭಿಸಿತು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊಗಳಲ್ಲಿ, ಎಐಎಂಐಎಂ ಮುಖ್ಯಸ್ಥರ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಯುವಕರು ಕಪ್ಪು ಬಾವುಟವನ್ನು ಬೀಸುತ್ತಿರುವುದನ್ನು ಕಾಣಬಹುದು. ಪ್ರತಿಭಟನೆಯನ್ನು ನಿರ್ಲಕ್ಷಿಸಿದ ಓವೈಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನರು ತಮ್ಮ ಪಕ್ಷವನ್ನು ಬೆಂಬಲಿಸುವಂತೆ ರ್ಯಾಲಿಯಲ್ಲಿ ಮನವಿ ಮಾಡಿದರು.

“ಅವರು ( ಬಿಜೆಪಿ) ಏಕರೂಪ ನಾಗರಿಕ ಸಂಹಿತೆಯನ್ನು ತರುವುದಾಗಿ ಹೇಳಿದರು. ಏಕೆ? ಏಕೆಂದರೆ ಅವರು ಅಲ್ಪಸಂಖ್ಯಾತರ ಸಂಸ್ಕೃತಿ ತಹಜೀಬ್ ಅನ್ನು ಕೊನೆಗೊಳಿಸಲು ಬಯಸುತ್ತಾರೆ ಎಂದು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥರು ಹೇಳಿದರು. ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ನಾನು ಬಿಜೆಪಿಯನ್ನು ಕೇಳಲು ಬಯಸುತ್ತೇನೆ, ಅವರು (ಬಿಜೆಪಿ) ಏಕರೂಪ ನಾಗರಿಕ ಸಂಹಿತೆ ತರಲು ಯೋಜಿಸಿದರೆ, ಅವರು ಅಶಾಂತಿ ಇರುವ ಪ್ರದೇಶಗಳನ್ನು ಸರಿಮಾಡಬಾರದು? ಎಂದು ಓವೈಸಿ ಕೇಳಿದ್ದಾರೆ.

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಟೀಕಿಸಿದ ಓವೈಸಿ ಇದು ಅಲ್ಪಸಂಖ್ಯಾತರ ವಿರೋಧಿ ಎಂದು ಆರೋಪಿಸಿದರು. ಅಲ್ಪಸಂಖ್ಯಾತರ ಜನಸಂಖ್ಯೆ ಇರುವ ಪ್ರದೇಶಗಳ ಅಭಿವೃದ್ಧಿಯನ್ನು ಅವರು ಎಂದಿಗೂ ಖಚಿತಪಡಿಸುವುದಿಲ್ಲ ಎಂದು ಓವೈಸಿ ಆರೋಪಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥರು ಇಂದು ಸಂಜೆ ಗುಜರಾತ್‌ನಲ್ಲಿ ಮತ್ತೊಂದು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ