Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತಿನಲ್ಲಿ ಅಂತಿಮ ಸುತ್ತಿನ ಪ್ರಚಾರ: ಸೂರತ್​​ನಲ್ಲಿ ನಡೆಯಲಿದೆ ಅರವಿಂದ ಕೇಜ್ರಿವಾಲ್, ಮೋದಿ ರ್ಯಾಲಿ

ಸೂರತ್ ಸಾಂಪ್ರದಾಯಿಕವಾಗಿ ಆಡಳಿತಾರೂಢ ಬಿಜೆಪಿಯತ್ತ ಒಲವು ತೋರುತ್ತಿದೆ. ಜವಳಿ ಮತ್ತು ವಜ್ರದ ವ್ಯಾಪಾರಿಗಳು ಜೊತೆಗೆ ವ್ಯಾಪಾರ ಕೇಂದ್ರದಲ್ಲಿರುವ ಕ್ಷೇತ್ರಗಳಿಗೆ ಸಂಬಂಧಿಸಿದ ಲಕ್ಷಾಂತರ ಜನರು ಬಿಜೆಪಿಯನ್ನು ಬೆಂಬಲಿಸುತ್ತಾರೆ.

ಗುಜರಾತಿನಲ್ಲಿ ಅಂತಿಮ ಸುತ್ತಿನ ಪ್ರಚಾರ: ಸೂರತ್​​ನಲ್ಲಿ ನಡೆಯಲಿದೆ ಅರವಿಂದ ಕೇಜ್ರಿವಾಲ್, ಮೋದಿ ರ್ಯಾಲಿ
ಮೋದಿ- ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 27, 2022 | 2:37 PM

ದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯ (Gujarat Assembly elections)ಮೊದಲ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನಗಳು ಬಾಕಿ ಉಳಿದಿದ್ದು, ಸ್ಪರ್ಧಿಗಳು ಪ್ರಮುಖ ನಾಯಕರೊಂದಿಗೆ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ (Arvind Kejriwal)ಅವರು ಇಂದು ‘ವಜ್ರ ನಗರಿ’ ಸೂರತ್‌ಗೆ ಭೇಟಿ ನೀಡಲಿದ್ದಾರೆ. ಗುಜರಾತಿನ 182 ಸದಸ್ಯ ಬಲದ ವಿಧಾನಸಭೆಗೆ ಸೂರತ್ 12 ಶಾಸಕರನ್ನು ಕಳುಹಿಸುತ್ತದೆ. ಇಲ್ಲಿ ಡಿಸೆಂಬರ್ 1 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಸೂರತ್ ಸಾಂಪ್ರದಾಯಿಕವಾಗಿ ಆಡಳಿತಾರೂಢ ಬಿಜೆಪಿಯತ್ತ ಒಲವು ತೋರುತ್ತಿದೆ. ಜವಳಿ ಮತ್ತು ವಜ್ರದ ವ್ಯಾಪಾರಿಗಳು ಜೊತೆಗೆ ವ್ಯಾಪಾರ ಕೇಂದ್ರದಲ್ಲಿರುವ ಕ್ಷೇತ್ರಗಳಿಗೆ ಸಂಬಂಧಿಸಿದ ಲಕ್ಷಾಂತರ ಜನರು ಬಿಜೆಪಿಯನ್ನು ಬೆಂಬಲಿಸುತ್ತಾರೆ. ವಿಮಾನ ನಿಲ್ದಾಣದಿಂದ ರ್ಯಾಲಿ ಸ್ಥಳಕ್ಕೆ 25 ಕಿಮೀ ರೋಡ್ ಶೋ ನಂತರ ಸೂರತ್‌ನ ಮೋಟಾ ವರಾಚಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಪ್ರಧಾನಮಂತ್ರಿಯವರು ಭರೂಚ್ ಜಿಲ್ಲೆಯ ನೇತ್ರಂಗ್ ಮತ್ತು ಖೇಡಾ ಜಿಲ್ಲೆಯ ಮೆಹಮದಾಬಾದ್‌ನಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೂರತ್‌ಗೆ ಎರಡು ದಿನಗಳ ಪ್ರವಾಸದಲ್ಲಿ ಜವಳಿ ಉದ್ಯಮದ ಪ್ರಮುಖರು ಮತ್ತು ರತ್ನ ಕುಶಲಕರ್ಮಿಗಳೊಂದಿಗೆ ಟೌನ್‌ಹಾಲ್ ಸಭೆಗಳನ್ನು ನಡೆಸಲಿದ್ದಾರೆ ಅವರು ಯೋಗಿ ಚೌಕ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಜ್ರಿವಾಲ್ ಕಟರ್ಗಾಂನಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಎಎಪಿ ಹೇಳಿದೆ.

ಗುಜರಾತ್ ಒಳಗೆ, ಸೂರತ್ ಇಂದು ಎಎಪಿಯ ಕೇಂದ್ರಬಿಂದುವಾಗಿದೆ. ಸೂರತ್ ಮುನ್ಸಿಪಲ್ ಕಾರ್ಪೊರೇಷನ್ ಇಂದು ಗುಜರಾತ್‌ನ ಅತಿದೊಡ್ಡ ನಾಗರಿಕ ಸಂಸ್ಥೆಯಾಗಿದೆ. ನಮ್ಮ ಆಂತರಿಕ ಸಮೀಕ್ಷೆಯ ಪ್ರಕಾರ, ಎಎಪಿ ಎಲ್ಲಾ 12 ಸ್ಥಾನಗಳಲ್ಲಿ ಬಿಜೆಪಿಗಿಂತ ಹೆಚ್ಚಿನ ಮತ ಹಂಚಿಕೆಯೊಂದಿಗೆ ಮುನ್ನಡೆ ಸಾಧಿಸಿದೆ. ಜವಳಿ ಮತ್ತು ವಜ್ರ ಉದ್ಯಮಕ್ಕೆ ಸಂಬಂಧಿಸಿದವರು ತಮ್ಮ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಎಎಪಿ ಪ್ರಧಾನ ಕಾರ್ಯದರ್ಶಿ ಮನೋಜ್ ಸೊರಥಿಯಾ ಹೇಳಿದ್ದಾರೆ.

ಎಎಪಿ ತನ್ನ ರಾಜ್ಯ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ ಅವರನ್ನು ಕಟರ್ಗಾಮ್‌ನಿಂದ ಮತ್ತು ಮಾಜಿ ಪಾಟಿದಾರ್ ಅನಾಮತ್ ಆಂದೋಲನ ಸಮಿತಿಯ ನಾಯಕರಾದ ಅಲ್ಪೇಶ್ ಕತಿರಿಯಾ ಅವರನ್ನು ವಾರಚ್ಚಾ ರಸ್ತೆ ಮತ್ತು ಧಾರ್ಮಿಕ್ ಮಾಳವಿಯಾ ಅವರನ್ನು ಓಲ್ಪಾಡ್‌ನಿಂದ ಕಣಕ್ಕಿಳಿಸಿದೆ.

ಬಿಜೆಪಿ ಶನಿವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪಕ್ಷವು ಅಧಿಕಾರವನ್ನು ಉಳಿಸಿಕೊಂಡರೆ ರಾಜ್ಯದಲ್ಲಿ ಧರ್ಮ ಆಧಾರಿತ ಕಾನೂನುಗಳನ್ನು ಕೊನೆಗೊಳಿಸುವ ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) “ಸಂಪೂರ್ಣ ಅನುಷ್ಠಾನ” ಭರವಸೆ ನೀಡಿದೆ. ‘ರಾಷ್ಟ್ರ ವಿರೋಧಿ ಅಂಶಗಳ’ ವಿರುದ್ಧ ‘ಆಮೂಲಾಗ್ರೀಕರಣ ವಿರೋಧಿ ಸೆಲ್’ ಆರಂಭಿಸುವುದಾಗಿ ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ಭರವಸೆ ನೀಡಿದೆ.

ಇಲ್ಲಿಯವರೆಗೆ ರಾಜ್ಯದಲ್ಲಿ ಬಿಜೆಪಿಗೆ ಪ್ರಾಥಮಿಕ ಸವಾಲಾಗಿದ್ದ ಕಾಂಗ್ರೆಸ್, ಈಗ ಎಎಪಿಯನ್ನೂ ಎದುರಿಸಬೇಕಿದೆ. ಎಎಪಿಗೆ ಸಾಕಷ್ಟು ಪ್ರಚಾರ ಇದೆ. ಆದರೆ “ಮಾರ್ಜಿನಲ್ ಪ್ಲೇಯರ್” ಆಗಿ ಉಳಿಯುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ರಾಜ್ಯ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಶಕ್ತಿಯ “ಪ್ರಬಲವಾದ ಒಳಹರಿವು” ಇರುವುದರಿಂದ ಕಾಂಗ್ರೆಸ್ ಅತ್ಯಂತ ಸ್ಥಳೀಯ, ವೈಯಕ್ತಿಕ ಮತ್ತು ಸಾಂಪ್ರದಾಯಿಕ ಪ್ರಚಾರವನ್ನು ನಡೆಸುತ್ತಿದೆ ಎಂದು ಗುಜರಾತ್ ಚುನಾವಣೆಗೆ ಪಕ್ಷದ ವೀಕ್ಷಕರಾಗಿರುವ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಈ ಹಿಂದೆ ಹೇಳಿದ್ದರು.ಡಿಸೆಂಬರ್ 5 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ