AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಚುನಾವಣಾ ರ್ಯಾಲಿಗಳಿಗೆ ಮುಂಚಿತವಾಗಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಮೋದಿ

ಇಂದು ಗುಜರಾತ್‌ನ ವೆರಾವಲ್‌ನಲ್ಲಿ  ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ   ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವು ಸಾಧಿಸುವ ತಮ್ಮ ಕನಸನ್ನು ನನಸಾಗಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು

ಗುಜರಾತ್ ಚುನಾವಣಾ ರ್ಯಾಲಿಗಳಿಗೆ ಮುಂಚಿತವಾಗಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥಿಸುತ್ತಿರುವ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 20, 2022 | 1:02 PM

Share

ಗುಜರಾತ್ ತಲುಪಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಚಾರ ರ್ಯಾಲಿ ಆರಂಭಿಸುವ ಮುನ್ನ ಸೋಮನಾಥ ದೇವಾಲಯಕ್ಕೆ (Somnath temple) ಭೇಟಿ ನೀಡಿದ್ದಾರೆ. ದೇವಾಲಯದ ದರ್ಶನದ ನಂತರ ಅವರು ವೆರಾವಲ್​​ನಲ್ಲಿ(Veraval)  ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ವೆರಾವಲ್ ಮೀನುಗಾರಿಕೆ ಉದ್ಯಮಗಳ ಕೇಂದ್ರವಾಗಿದೆ. ಇದಾದ ನಂತರ ಧೋರಾಜಿ, ಅಮ್ರೇಲಿ ಮತ್ತು ಬೊಟಾಡ್‌ನಲ್ಲಿ ಇನ್ನೂ ಮೂರು ಚುನಾವಣಾ ರ್ಯಾಲಿಗಳು ನಡೆಯಲಿವೆ.ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿರುವ ವಿಡಿಯೊದಲ್ಲಿ ಮೋದಿ ಅವರು ಸೋಮನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ತೋರಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಕೂಡಾ ಗುಜರಾತ್ ನಲ್ಲಿದ್ದಾರೆ. ಗುಜರಾತ್ ನಲ್ಲಿ ಎರಡು ಹಂತಗಳಾಗಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಮತದಾನ ನಡೆಯಲಿದೆ.ಡಿಸೆಂಬರ್ 8 ರಂದು ಮತಗಳ ಎಣಿಕೆ ನಡೆಯಲಿದೆ. ಹಿಮಾಚಲ ಪ್ರದೇಶದ ಮತಗಳ ಎಣಿಕೆಯೂ ಅದೇ ದಿನ ನಡೆಯಲಿದೆ.

ಭೂಪೇಂದ್ರ ಅವರು ನರೇಂದ್ರನ ರೆಕಾರ್ಡ್ ಮುರಿಯಲಿ

ಇಂದು ಗುಜರಾತ್‌ನ ವೆರಾವಲ್‌ನಲ್ಲಿ  ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ   ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವು ಸಾಧಿಸುವ ತಮ್ಮ ಕನಸನ್ನು ನನಸಾಗಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ, “ಈ ಬಾರಿ ಪ್ರತಿ ಮತಗಟ್ಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ” ಮತ್ತು “ಪ್ರತಿ ಮತಗಟ್ಟೆಯಲ್ಲಿ ದಾಖಲೆಗಳನ್ನು ಮುರಿಯುವಂತೆ” ಮತದಾರರನ್ನು ಕೇಳಿಕೊಂಡರು.

ಪ್ರಧಾನಿ ತಮ್ಮ ಭಾಷಣದಲ್ಲಿ, ‘ಭೂಪೇಂದ್ರ ಅವರು ನರೇಂದ್ರನ ದಾಖಲೆ ಮುರಿಯಲಿ’ ಎಂದು ಹೇಳಿದರು.

ಅಭಿವೃದ್ಧಿ ಕುರಿತು ಮಾತನಾಡಿದ ಮೋದಿ, ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರವು ರಾಜ್ಯದಲ್ಲಿ ಬಂದರುಗಳನ್ನು ಅಭಿವೃದ್ಧಿಪಡಿಸಿದೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮತ್ತಷ್ಟು ಅಭಿವೃದ್ಧಿಗೆ ಶ್ರಮಿಸುತ್ತದೆ ಎಂದು ಹೇಳಿದರು.

ರೈತರಿಗಾಗಿ ಹೊಸ ನೀತಿಗಳ ಭರವಸೆಯನ್ನೂ ನೀಡಿದರು.ಭಗವಂತನ ಮತ್ತು ಜನರ ಆಶೀರ್ವಾದ ಇದ್ದರೆ ನಾವು ಬಯಸಿದ್ದು ಆಗುತ್ತದೆ. ನಾವು ದಾಖಲೆಗಳನ್ನು ಮುರಿಯಬೇಕು. ಪ್ರಜಾಪ್ರಭುತ್ವದ ಹಬ್ಬದಲ್ಲಿ ಮೊದಲನೆಯದು ಅತ್ಯಧಿಕ ಮತದಾನವನ್ನು ಖಚಿತಪಡಿಸಿಕೊಳ್ಳಬೇಕು. ಪ್ರಜಾಪ್ರಭುತ್ವಕ್ಕೆ ಮತದಾನ ಮುಖ್ಯ. ಪ್ರತಿಯೊಬ್ಬ ನಾಗರಿಕರು ಭಾಗವಹಿಸಬೇಕು. ಬಿಜೆಪಿ ಗೆಲ್ಲದ ಯಾವುದೇ ಮತಗಟ್ಟೆ ಇರಬಾರದು.

ನರೇಂದ್ರ ಅವರ ದಾಖಲೆಗಳನ್ನು ಭೂಪೇಂದ್ರ ಮುರಿಯಲಿ ಎಂದು ನಾನು ಬಯಸುತ್ತೇನೆ. ಗುಜರಾತ್ ಅಭಿವೃದ್ಧಿಯ ಹೊಸ ಎತ್ತರವನ್ನು ತಲುಪುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಮೋದಿ ಹೇಳಿದ್ದಾರೆ

ಬಡವರಲ್ಲಿ ಬಡವರಿಗೆ ಶಿಕ್ಷಣದ ಪ್ರವೇಶವನ್ನು ನಾವು ಖಚಿತಪಡಿಸಿದ್ದೇವೆ. ನಾವು ಎಲ್ಲಾ ಶಾಲೆಗಳಲ್ಲಿ ಶೌಚಾಲಯಗಳನ್ನು ಖಾತ್ರಿಪಡಿಸಿದ್ದೇವೆ, ಇದು ಹೆಣ್ಣುಮಕ್ಕಳ ಡ್ರಾಪ್ಔಟ್ ದರವನ್ನು ಕಡಿಮೆ ಮಾಡಲು ಕಾರಣವಾಗಿದೆ.

ಪ್ರವಾಸೋದ್ಯಮವನ್ನು ಹೆಚ್ಚಿಸಲು ಕೆಶೋದ್ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಬಯಸುತ್ತೇವೆ. ಪ್ರವಾಸೋದ್ಯಮದಲ್ಲಿ ಗುಜರಾತ್  ಪುಟಿದೇಳುತ್ತಿದೆ. ಸೋಮನಾಥ ಪ್ರವಾಸೋದ್ಯಮದ ಕೇಂದ್ರವಾಗಿದೆ.  ಕಚ್‌ನಲ್ಲಿ ಏಕತಾ ಪ್ರತಿಮೆ ಮತ್ತು ವೈಟ್ ರಾನ್ ಬಗ್ಗೆ ಪ್ರಧಾನಿ ಮೋದಿ ಮಾತನಾಡುತ್ತಾರೆ, ಇದು ಅನೇಕರಿಗೆ ಉದ್ಯೋಗ ನೀಡುವ ಪ್ರವಾಸೋದ್ಯಮ ಆಕರ್ಷಣೆಯಾಗಿದೆ ಎಂದು ಅವರು ಹೇಳಿದ್ದಾರೆ.

ನಾನು ಪ್ರತಿ ಮನೆಯಲ್ಲೂ ಕೊಳವೆ ನೀರನ್ನು ಖಾತ್ರಿಪಡಿಸಿದ್ದೇನೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಕಳೆದ 2.5 ವರ್ಷಗಳಲ್ಲಿ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡಿದ್ದೇನೆ. ಮುಂದಿನ 25 ವರ್ಷಗಳಲ್ಲಿ ನಾವು ಅಭಿವೃದ್ಧಿಯನ್ನು ವೇಗಗೊಳಿಸಬೇಕಾಗಿದೆ. ಬಿಜೆಪಿಗೆ ಮತ ನೀಡಿ. ದಯವಿಟ್ಟು ನನಗಾಗಿ ಒಂದು ಕೆಲಸ ಮಾಡಿ. ದಯವಿಟ್ಟು ಪ್ರತಿ ಮನೆಗೆ ಹೋಗಿ ನರೇಂದ್ರಭಾಯಿ ಅವರು ತಮ್ಮ ನಮನಗಳನ್ನು ತಿಳಿಸಿದ್ದಾರೆ ಎಂದು ಹೇಳಿ ಎಂದು ಮೋದಿ ಹೇಳಿದ್ದಾರೆ.

Published On - 12:48 pm, Sun, 20 November 22

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ