AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನ ಐತಿಹಾಸಿಕ ಗೆಲುವಿಗೆ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ

ಧನ್ಯವಾದಗಳು ಗುಜರಾತ್. ಅಭೂತಪೂರ್ವ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾದೆ. ಜನರು ಅಭಿವೃದ್ಧಿಯ ರಾಜಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ. ಅದೇ ಸಮಯದಲ್ಲಿ ಈ ವೇಗವು ಹೆಚ್ಚಿನ ವೇಗದಲ್ಲಿ ಮುಂದುವರಿಯಬೇಕೆಂದು ಅವರು ಬಯಸುತ್ತಾರೆ. ನಾನು ಗುಜರಾತ್‌ನ ಜನಶಕ್ತಿಗೆ ತಲೆಬಾಗುತ್ತೇನೆ ಎಂದು ಮೋದಿ ಟ್ವೀಟ್

ಗುಜರಾತ್​​ನ ಐತಿಹಾಸಿಕ ಗೆಲುವಿಗೆ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Dec 08, 2022 | 6:46 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ತಮ್ಮ ತವರು ರಾಜ್ಯ ಗುಜರಾತ್‌ಗೆ (Gujarat) ಧನ್ಯವಾದ ಅರ್ಪಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ (Gujarat Assembly Polls) ಅದ್ಭುತ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾದೆ ಎಂದು ಅವರು ಹೇಳಿದ್ದಾರೆ. ಧನ್ಯವಾದಗಳು ಗುಜರಾತ್. ಅಭೂತಪೂರ್ವ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾದೆ. ಜನರು ಅಭಿವೃದ್ಧಿಯ ರಾಜಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ. ಅದೇ ಸಮಯದಲ್ಲಿ ಈ ವೇಗವು ಹೆಚ್ಚಿನ ವೇಗದಲ್ಲಿ ಮುಂದುವರಿಯಬೇಕೆಂದು ಅವರು ಬಯಸುತ್ತಾರೆ. ನಾನು ಗುಜರಾತ್‌ನ ಜನಶಕ್ತಿಗೆ ತಲೆಬಾಗುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ರಾಜ್ಯದ ಪಕ್ಷದ ಕಾರ್ಯಕರ್ತರನ್ನು ಶ್ಲಾಘಿಸಿದ ಮೋದಿ, ಪ್ರತಿಯೊಬ್ಬರೂ ಚಾಂಪಿಯನ್ ಆಗಿದ್ದಾರೆ ಎಂದು ಹೇಳಿದರು. ಕಠಿಣ ಪರಿಶ್ರಮಿಗಳಾದ ಗುಜರಾತಿನ ಎಲ್ಲ ಬಿಜೆಪಿ ಕಾರ್ಯಕರ್ತರಲ್ಲಿ ನಾನು ನೀವು ಪ್ರತಿಯೊಬ್ಬರೂ ಚಾಂಪಿಯನ್! ಎಂದು ಹೇಳಬಯಸುತ್ತೇನೆ. ನಮ್ಮ ಪಕ್ಷದ ನಿಜವಾದ ಶಕ್ತಿಯಾಗಿರುವ ನಮ್ಮ ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಈ ಐತಿಹಾಸಿಕ ಗೆಲುವು ಎಂದಿಗೂ ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.

ಬಿಜೆಪಿಯಿಂದ ಕಾಂಗ್ರೆಸ್ ಅಧಿಕಾರವನ್ನು ಕಸಿದುಕೊಂಡ ಹಿಮಾಚಲ ಪ್ರದೇಶದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗುಡ್ಡಗಾಡು ರಾಜ್ಯದ ಮತದಾರರು ಬಿಜೆಪಿಗೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ಮುಂಬರುವ ದಿನಗಳಲ್ಲಿ ರಾಜ್ಯದ ಆಶೋತ್ತರಗಳನ್ನು ಈಡೇರಿಸಲು ಮತ್ತು ಜನರ ಸಮಸ್ಯೆಗಳನ್ನು ಎತ್ತಲು ತಮ್ಮ ಪಕ್ಷವು ಕೆಲಸ ಮಾಡುತ್ತದೆ ಎಂದು ಹೇಳಿದರು. ಬಿಜೆಪಿಯ ಮೇಲಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಹಿಮಾಚಲ ಪ್ರದೇಶದ ಜನರಿಗೆ ಧನ್ಯವಾದ ಹೇಳುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯದ ಆಶೋತ್ತರಗಳನ್ನು ಈಡೇರಿಸಲು ಮತ್ತು ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನಾವು ಶ್ರಮಿಸುತ್ತೇವೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ